ಹುಬ್ಬಳ್ಳಿ: ಕೋಮುಭಾವನೆಗೆ ದಕ್ಕೆ ತರುವ ಅನಿಮೇಟೆಟ್ ವಿಡಿಯೋವನ್ನು ವಾಟ್ಸ್ಆ್ಯಪ್ ಸ್ಟೇಟಸ್ಗೆ ಹಾಕಿಕೊಂಡು ಹುಬ್ಬಳ್ಳಿಯಲ್ಲಿ ಗಲಭೆಗೆ ಕಾರಣನಾಗಿದ್ದ ಆರೋಪಿ ಅಭಿಷೇಕ ಹಿರೇಮಠನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಪೊಲೀಸರು ಸೋಮವಾರ 4ನೇ ಜೆಎಂಎಫ್ಸಿ ನ್ಯಾಯಾಲಯಕ್ಕೆ ಆರೋಪಿ ಅಭಿಷೇಕನನ್ನು ಹಾಜರುಪಡಿಸಿದ್ದರು. ಏ.30ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ನ್ಯಾಯಾಧೀಶರು ಆದೇಶಿಸಿದರು. ಅಭಿಷೇಕ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಸಿದ್ದಾರೆ.
ಇನ್ನು ಹಳೇ ಹುಬ್ಬಳ್ಳಿಯಲ್ಲಿ ಶನಿವಾರ ನಡೆದ ಕೋಮುಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 89 ಆರೋಪಿಗಳನ್ನು ಸೋಮವಾರ ಹುಬ್ಬಳ್ಳಿಯ ಕೋರ್ಟ್ಗೆ ಹಾಜರು ಪಡಿಸಲಿದ್ದಾರೆ. ಅವಹೇಳನಕಾರಿ ಪೋಸ್ಟ್ ಮಾಡಿದ ಯುವಕನ ಬಂಧನಕ್ಕೆ ಒತ್ತಾಯಸಿದ ವೇಳೆ ಉಂಟಾದ ಗಲಭೆಯಿಂದ ಇಡೀ ಹುಬ್ಬಳ್ಳಿ ಸೇರಿದಂತೆ ರಾಜ್ಯವೇ ಬೆಚ್ಚಿತ್ತು. ಈ ಘಟನೆಯಲ್ಲಿ ಸಾವಿರಾರು ಜನರು ಭಾಗಿಯಾಗಿ ಸಿಕ್ಕಸಿಕ್ಕ ವಸ್ತು, ಕಾರು, ಆಸ್ಪತ್ರೆ ಮೇಲೆ ಕಲ್ಲು, ಬಡಗಿಯಿಂದ ಜಖಂಗೊಳಿಸಿ ಪೋಲಿಸರ ಮೇಲೂ ಕಲ್ಲು ತೂರಿದ್ದರು. ಅಲ್ಲದೇ ಪೊಲೀಸ್ ವಾಹನವನ್ನು ಕೆಡವಿ ಆಕ್ರೋಶ ವ್ಯಕ್ತಪಡಿಸಿದ್ದರು.
ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಸಿಸಿ ಟಿವಿ ಆಧಾರದ ಮೇಲೆ ಅಧಿಕೃತವಾಗಿ ಪೊಲೀಸರು ನೀಡಿರುವ ಮಾಹಿತಿ ಮೇರೆಗೆ ಇದೀಗ 89 ಜನರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇದರಲ್ಲಿ ನಾಲ್ಕು ಜನ ಬಾಲಾಪರಾಧಿಗಳು ಇದ್ದಾರೆ.
ಹುಬ್ಬಳ್ಳಿ ಗಲಾಟೆ ಸಂಬಂಧ ಅಮಾಯಕರಿಗೆ ತೊಂದರೆ ಕೊಡಬೇಡಿ: ಪೊಲೀಸರಿಗೆ ಎಚ್ಡಿಕೆ ಮನವಿ
ಫ್ರೆಂಡ್ಸ್ ಜತೆ ಲೈಂಗಿಕವಾಗಿ ಸಹಕರಿಸು… ಮೊದಲ ಪತಿಗೆ ಡಿವೋರ್ಸ್ ಕೊಟ್ಟು ಮತ್ತೊಬ್ಬನ ಮದ್ವೆ ಆದಾಕೆ ಬಾಳಲ್ಲಿ ದುರಂತ