ಮೈಸೂರು: ಸೆ.27ರಂದು ಕರ್ನಾಟಕ ಬಂದ್ಗೆ ಕರ್ನಾಟಕ ಸಂಯುಕ್ತ ಕಿಸಾನ್ ಮೋರ್ಚಾ ವತಿಯಿಂದ ಕರೆ ನೀಡಲಾಗಿದೆ.
ಈ ಕುರಿತು ಶನಿವಾರ ಸುದ್ದಿಗೋಷ್ಠಿ ನಡೆಸಿದ ಕುರುಬೂರು ಶಾಂತಕುಮಾರ್, ಕೇಂದ್ರದ 3 ಕೃಷಿ ಕಾಯ್ದೆ ವಿರೋಧಿಸಿ, ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ನಿಗದಿಗೆ ಒತ್ತಾಯ, ಅಡುಗೆ ಅನಿಲ-ಇಂಧನ-ರಸಗೊಬ್ಬರ ಬೆಲೆ ಏರಿಕೆ ಖಂಡಿಸಿ ರಾಷ್ಟ್ರೀಯ ಸಂಯುಕ್ತ ಕಿಸಾನ್ ಮೋರ್ಚಾವು ಭಾರತ್ ಬಂದ್ಗೆ ಕರೆ ನೀಡಿದೆ. ದೇಶದ 500ಕ್ಕೂ ಹೆಚ್ಚು ರೈತ ಸಂಘಟನೆಗಲು ಬಂದ್ಗೆ ಬೆಂಬಲ ಸೂಚಿಸಿದ್ದು, ರೈತಪರ ಮತ್ತು ಪ್ರಗತಿಪರ ಸಂಘಟನೆಗಳೂ ಕೈಜೋಡಿಸಿವೆ. ಕರ್ನಾಟಕದಲ್ಲೂ ಬಂದ್ ನಡೆಸಲು ಕರ್ನಾಟಕ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿದೆ ಎಂದರು.
ಆ ಚುಚ್ಚುಮಾತನ್ನ ಸಹಿಸಲಾಗ್ತಿಲ್ಲ, ನನ್ನ ಸಾವಿಗೆ ಅಪ್ಪ-ಅಮ್ಮನೇ ಕಾರಣ… ಮಗನ ಸಾವಿನ ಬಳಿಕ ಹೆತ್ತವರು ಎಸ್ಕೇಪ್
ಚಳ್ಳಕೆರೆಯ ಕಾಂಗ್ರೆಸ್ ಮುಖಂಡನ ಸಾವಿನ ರಹಸ್ಯ ಬಯಲು! ಅವಳೊಂದಿಗಿನ ಒಡನಾಟವೇ ಕಾರಣ…