ಶಿವಮೊಗ್ಗ: ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿ ಬಂದಿರುವ ಹಿನ್ನೆಲೆ ಅವರನ್ನು ರೈತ ಸಂಘದ ಅಧ್ಯಕ್ಷ ಸ್ಥಾನದಿಂದ ವಜಾ ಮಾಡಲಾಗಿದ್ದು, ಆರೋಪದ ಸತ್ಯಾಸತ್ಯತೆ ಅರಿಯಲು ಸತ್ಯಶೋಧನಾ ಸಮಿತಿ ರಚಿಸಲಾಗಿದೆ. ವರದಿ ನೀಡಲು ಸಮಿತಿಗೆ 2 ತಿಂಗಳ ಅವಕಾಶವಿದ್ದು, ಭ್ರಷ್ಟಾಚಾರ ಆರೋಪ ಸಾಬೀತಾದರೆ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ರೈತ ಸಂಘದ ಪ್ರಾಥಮಿಕ ಸದಸ್ಯತ್ವದಿಂದಲೇ ವಜಾ ಮಾಡಲು ನಿರ್ಧರಿಸಲಾಗಿದೆ.
ಶಿವಮೊಗ್ಗದ ರೈತ ಸಂಘದ ಕಚೇರಿಯಲ್ಲಿ ಮಂಗಳವಾರ ಆಯೋಜಿಸಿದ್ದ ರಾಜ್ಯ ಸಮಿತಿ ಸಭೆಯಲ್ಲಿ ಎಚ್.ಆರ್. ಬಸವರಾಜಪ್ಪ ಅವರನ್ನು ರೈತ ಸಂಘದ ನೂತನ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಇದಕ್ಕೂ ಮುನ್ನ ಇವರು ಗೌರವಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದರು. ಇದೇ ವೇಳೆ ಮಾತನಾಡಿದ ಬಸವರಾಜಪ್ಪ, ಸತ್ಯಶೋಧನಾ ಸಮಿತಿಯ ತನಿಖೆಯಲ್ಲಿ ಆರೋಪ ಸಾಬೀತಾದರೆ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನ ಸಂಘದ ಪ್ರಾಥಮಿಕ ಸದಸ್ಯತ್ವದಿಂದಲೇ ವಜಾ ಮಾಡಲಾಗುತ್ತೆ. ಅಧ್ಯಕ್ಷರನ್ನು ಹೊರತು ಪಡಿಸಿ ರಾಜ್ಯ ಸಮಿತಿ ಪದಾಧಿಕಾರಿಗಳನ್ನು ಬದಲಾವಣೆ ಮಾಡಿಲ್ಲ. ಈ ಹಿಂದೆ ರೈತ ಸಂಘದಲ್ಲಿದ್ದು, ಕೋಡಿಹಳ್ಳಿ ಕಾರಣದಿಂದಲೇ ಸಂಘ ಬಿಟ್ಟು ಹೋದವರನ್ನು ಮರಳುವಂತೆ ಆಹ್ವಾನಿಸಲಾಗುವುದು. ನಾನೇ ಖುದ್ದಾಗಿ ಎಲ್ಲರ ಜತೆಗೂ ಮಾತುಕತೆ ನಡೆಸುತ್ತೇನೆ ಎಂದರು.
ಕೋಡಿಹಳ್ಳಿ ಚಂದ್ರಶೇಖರ್ ಅವರ ವಿಷಯದಲ್ಲಿ ನನಗೆ ತಿಳಿದಂತೆ ಹಣ ವರ್ಗಾವಣೆಯಾಗಿಲ್ಲ. ಆದರೆ ವ್ಯವಹಾರದ ಮಾತುಕತೆ ನಡೆದಿರುವುದು ಸ್ಪಷ್ಟ ಎಂದ ಬಸವರಾಜಪ್ಪ, ರೈತ ಸಂಘದ ಘನತೆ ಕಾಪಾಡಲು ಚಂದ್ರಶೇಖರ್ ರಾಜೀನಾಮೆ ನೀಡಬೇಕಿತ್ತು. ವಿಪರ್ಯಾಸವೆಂದರೆ ತಮ್ಮ ಮೇಲಿನ ಆರೋಪಗಳನ್ನು ಅವರು ನಿರಾಕರಿಸಿಯೂ ಇಲ್ಲ ಏಕೆ? ಎಂದು ಪ್ರಶ್ನಿಸಿದರು.
ಇಂದು ನಡೆದ ಸಭೆಗೆ ಆಹ್ವಾನವಿದ್ದರೂ ಕೋಡಿಹಳ್ಳಿ ಚಂದ್ರಶೇಖರ್ ಗೈರಾಗಿದ್ದರು. ಕೋಡಿಹಳ್ಳಿ ವರ್ತನೆಗೆ ಸಭೆಯಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಯಿತು.
ಕಾರ್ಯಾಧ್ಯಕ್ಷರಾದ ಸಿದ್ದವಿರಪ್ಪ, ಕುರುವ ಗಣೇಶ್, ಖಜಾಂಚಿ ಡಾ. ಬಿ.ಎಂ.ಚಿಕ್ಕಸ್ವಾಮಿ, ಉಪಾಧ್ಯಕ್ಷರಾದ ಹಿಟ್ಟೂರು ರಾಜು, ಟಿ.ಎಂ.ಚಂದ್ರಪ್ಪ, ಪ್ರಧಾನ ಕಾರ್ಯದರ್ಶಿ ನಜೀರ್ಸಾಬ್ ಮೂಲಿಮನಿ, ಸಂಟನಾ ಕಾರ್ಯದರ್ಶಿಗಳಾದ ರಮೇಶ್, ಗಂಗಾಧರ್ ಮೇಟಿ, ಹೊನ್ನೂರು ಪ್ರಕಾಶ್ ಇತರರಿದ್ದರು.
ನಾನಾಗಿದ್ದರೆ ಆತ್ಮಹತ್ಯೆ ಮಾಡಿಕೊಳ್ತಿದ್ದೆ… ಕೋಡಿಹಳ್ಳಿ ವಿರುದ್ಧ ರೈತ ಸಂಘದ ನೂತನ ಅಧ್ಯಕ್ಷ ಆಕ್ರೋಶ
ಮೊದಲ ಪ್ರಯತ್ನದಲ್ಲೇ UPSCಯಲ್ಲಿ 31ನೇ ರ್ಯಾಂಕ್ ಪಡೆದ ಕನ್ನಡಿಗ! ಸಾಧನೆ ಬಗ್ಗೆ ಅವಿನಾಶ್ ಹೇಳಿದ್ದಿಷ್ಟು…
ಮದ್ವೆಗೆ ಹೋಗಿದ್ದೆ, ಮಲಗಲು ಕೋಣೆಗೆ ಹೋಗುವಾಗ ದಾರೀಲಿ ಚಿನ್ನದ ಸರ ಸಿಕ್ತು.. ದಯವಿಟ್ಟು ವಾರಸುದಾರರಿಗೆ ತಲುಪಿಸಿ ಸರ್…