More

    PSI ಹುದ್ದೆ ಹಗರಣದ ಪಿತಾಮಹ ಸಿಎಂ ಬೊಮ್ಮಾಯಿ ಎಂದ ಡಿಕೆಶಿ! ಎಚ್​ಡಿಕೆ ಹೇಳಿದ ಆ ಮೂಲ ಕಿಂಗ್​ಪಿನ್​ ಯಾರು?

    ಕುಣಿಗಲ್​: ಪಿಎಸ್​ಐ ಎಕ್ಸಾಂ ಅಕ್ರಮ ಪ್ರಕರಣದ ಮೂಲ ಕಿಂಗ್​ಪಿನ್​ನ ಹೆಸರೇಳಿದ್ರೆ ಇಡೀ ಸರ್ಕಾರವೇ ಉರುಳುತ್ತೆ. ಆ ಕಿಂಗ್​ಪಿನ್​ ಭವಿಷ್ಯದ ನಾಯಕ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದರು. ಈ ಮಾತು ಕೇಳಿ ಆ ಕಿಂಗ್​ಪಿನ್​ ಯಾರಿರಬಹುದು? ಎಂಬ ತರೇಹವಾರಿ ಚರ್ಚೆಗಳು ಸಾರ್ವಜನಿಕ ವಲಯದಲ್ಲಿ ನಡೆಯುತ್ತಿದೆ. ಇದೀಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಮತ್ತೊಂದು ಬಾಂಬ್​ ಸಿಡಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಎಸ್​.ಬೊಮ್ಮಾಯಿ ಅವರೇ ಪಿಎಸ್​ಐ ಹಗಣದ ಪಿತಾಮಹ ಎಂದು ಗಂಭೀರ ಆರೋಪ ಮಾಡಿದ್ದಾರೆ.

    ಪಿಎಸ್​ಐ ಹಗರಣದಲ್ಲಿ ಕಾಂಗ್ರೆಸ್​ನ ಶೇ.70 ನಾಯಕರು ಜೈಲಿಗೆ ಹೊಗಲಿದ್ದಾರೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷರ ಆರೋಪಕ್ಕೆ ತುಮಕೂರು ಜಿಲ್ಲೆ ಕುಣಿಗಲ್​ ತಾಲೂಕಿನ ಹುಲಿಯೂರುದುರ್ಗದಲ್ಲಿ ಪ್ರತಿಕ್ರಿಯಿಸಿದ ಡಿಕೆಶಿ, ರಾಜ್ಯಾಧ್ಯಕ್ಷರು ನಮ್ಮನ್ನು ಜೈಲಿಗೆ ಕಳಿಸುವುದು ಇರಲಿ, ಅವರ ಪಕ್ಷದ ಮುಖಂಡರನ್ನು ರಕ್ಷಣೆ ಮಾಡಲು ಮುಂದಾಗಿದ್ದಾರೆ. ಯಾರನ್ನು ಬೇಕಾದರೂ ಜೈಲಿಗೆ ಕಳಿಸಲಿ, ನಮ್ಮ ಅಭ್ಯಂತರವಿಲ್ಲ, ಇದನ್ನು ಏನಾದರೂ ಮಾಡಿ ಕಾಂಗ್ರೆಸ್​ ಕಡೆ ತಿರುಗಿಸಬೇಕೆಂದು ಪ್ರಯತ್ನ ಮಾಡುತ್ತಿದ್ದಾರೆ. ಸಚಿವ ಅಶ್ವತ್ಥನಾರಾಯಣ್​ ಹೆಸರು ಹೊರಗಡೆ ಬಂದಿದೆ, ಗೃಹ ಸಚಿವರ ಕಚೇರಿಯಲ್ಲಿ ಹಗರಣ ನಡೆದಿದೆ, ಅನೇಕ ಸಚಿವರು ಇದರಲ್ಲಿ ಭಾಗಿಯಾಗಿದ್ದಾರೆ. ಇದನ್ನು ಯಾರೂ ಮುಚ್ಚಿ ಹಾಕಲು ಸಾಧ್ಯವಿಲ್ಲ ಎಂದರು.

    PSI ಹುದ್ದೆ ಹಗರಣದ ಮೂಲ ಕಿಂಗ್​ಪಿನ್​ನ ಟಚ್ ಮಾಡೋಕೆ ಹೋದ್ರೆ ಸರ್ಕಾರವೇ ಬೀಳುತ್ತೆ: ಹೊಸ ಬಾಂಬ್​ ಸಿಡಿಸಿದ ಎಚ್​ಡಿಕೆ

    ‘ಗೃಹ ಸಚಿವರ ಊರಲ್ಲಿ 2 ದಿನ ದಿವ್ಯಾ ಕಾರು ಇತ್ತು! ಪಿಎಸ್​ಐ ಹುದ್ದೆ ಅಕ್ರಮದ ಆರೋಪಿ ಜತೆ ನೇರ ಸಂಪರ್ಕ ಹೊಂದಿದ್ದರು…’

    ಮಗನ ಹುಟ್ಟುಹಬ್ಬ ಆಚರಿಸಲು ಸಾಧ್ಯವಾಗಲಿಲ್ಲ… ಮನನೊಂದು ಸಾವಿನ ಮನೆಯ ಕದ ತಟ್ಟಿದ ತಾಯಿ

    ನಾದಿನಿ ಜತೆ ಸರಸವಾಡಲು ಪತ್ನಿಯನ್ನೇ ಕೊಂದ! ವಿಚಾರಣೆ ವೇಳೆ ಬಯಲಾಯ್ತು ಅಸಹ್ಯ… ನೆಲಮಂಗಲದಲ್ಲಿ ಹೀನ ಕೃತ್ಯ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts