ಮಂಡ್ಯ: ಕೃಷಿಹೊಂಡದಲ್ಲಿ ಮುಳುಗಿ ಮೂವರು ಮಕ್ಕಳು ಧಾರುಣವಾಗಿ ಸಾವನ್ನಪ್ಪಿದ ಘಟನೆ ಪಾಂಡವಪುರ ತಾಲೂಕು ಬಳ್ಳೇಅತ್ತಿಗುಪ್ಪೆ ಗ್ರಾಮದಲ್ಲಿ ಇಂದು(ಗುರುವಾರ) ಸಂಭವಿಸಿದೆ.
ಮಹದೇವಪ್ಪರ ಎಂಬುವರ ಮಕ್ಕಳಾದ ಚಂದನ್ ಮತ್ತು ಕಾರ್ತಿಕ್, ಮಲ್ಲಿಕಾರ್ಜುನ ಅವರ ಪುತ್ರ ರೀತೇಶ್ ಮೃತ ದುರ್ದೈವಿಗಳು. ಇದನ್ನೂ ಓದಿರಿ ತಂಗಿಯ ಮೇಲೆ ಅಣ್ಣನಿಂದಲೇ ಅತ್ಯಾಚಾರ ಪ್ರಕರಣ: ದೂರು ನೀಡಿದ ಬೆನ್ನಲ್ಲೇ ಆರೋಪಿ ಆತ್ಮಹತ್ಯೆಗೆ ಶರಣು!
ಶಾಲೆಗೆ ರಜೆ ಇದ್ದಿದ್ದರಿಂದ ಈ ಮೂರು ಮಕ್ಕಳೂ ಬಳ್ಳೇಅತ್ತಿಗುಪ್ಪೆ ಗ್ರಾಮ ಹೊರವಲಯದ ಕೃಷಿಹೊಂಡದಲ್ಲಿ ಈಜಾಟಕ್ಕೆ ಹೋಗಿದ್ದರು ಎನ್ನಲಾಗಿದೆ. ಈ ವೇಳೆ ದುರಂತ ಅಂತ್ಯಕಂಡಿದ್ದು, ಮೂರು ಮಕ್ಕಳ ಮೃತದೇಹವನ್ನ ಸಾಲಾಗಿ ಮಲಗಿಸಿದ್ದ ದೃಶ್ಯ ಕಂಡು ನೆರೆದಿದ್ದವರೂ ಕಣ್ಣೀರಾದರು. ಮೃತ ಮಕ್ಕಳ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಪಾಂಡವಪುರ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ.
ರೌಡಿಶೀಟರ್ ಪತ್ನಿ ಜತೆ ರೆಡ್ ಆ್ಯಂಡ್ ಆಗಿ ಸಿಕ್ಕಿಬಿದ್ದ ಪ್ರಿಯಕರ! ಮುಂದೆ ಆಗಿದ್ದೆಲ್ಲವೂ ಅವಾಂತರ
ಗೃಹ ನಿರ್ಮಾಣ ಸಂಭ್ರಮಕ್ಕೆ ಕೊಳ್ಳಿ ಇಟ್ಟ ಜವರಾಯ, ಶಾಮಿಯಾನ ಅವಳಡಿಸುತ್ತಿದ್ದ ನಾಲ್ವರು ದುರ್ಮರಣ
ಪರ್ಮನೆಂಟ್ ಜಾಬ್ ಬೇಕಂದ್ರೆ ಬೆತ್ತಲೆ ವಿಡಿಯೋ ಕಳಿಸ್ಬೇಕು! ಓಕೆ ಅಂತ ವಿಡಿಯೋ ಕಳಿಸಿದ ಬೆನ್ನಲ್ಲೇ ಕಾದಿತ್ತು ಶಾಕ್