ಬೆಂಗಳೂರು: ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ 40% ಕಮಿಷನ್ ಆರೋಪ ಮಾಡಿದ್ದ ಬೆಳಗಾವಿಯ ಗುತ್ತಿಗೆದಾರ ಸಂತೋಷ ಪಾಟೀಲ್ ಡೆತ್ನೋಟ್ ಬರೆದಿಟ್ಟು ಉಡುಪಿಯ ಲಾಡ್ಜ್ವೊಂದರಲ್ಲಿ ಆತ್ಮಹತ್ಮೆಗೆ ಶರಣಾಗಿದ್ದು, ರಾಜಕೀಯ ತಿರುವು ಪಡೆಯುತ್ತಿದೆ. ವಿಪಕ್ಷ ನಾಯಕರು ಈಶ್ವರಪ್ಪ ವಿರುದ್ಧ ಕೊಲೆ ಕೇಸ್ ಹಾಕಬೇಕು, ಸಚಿವ ಸ್ಥಾನದಿಂದ ಕೆಳಗಿಳಿಸಬೇಕು ಎಂದು ಆಗ್ರಹಿಸುತ್ತಿದ್ದಾರೆ. ಈ ನಡುವೆ ಸಂತೋಷ್ ಸಾವಿನ ಬಳಿಕ ಸುದ್ದಿಗಾರರಿಗೆ ಮೊದಲ ಪ್ರತಿಕ್ರಿಯೆ ನೀಡಿರುವ ಸಚಿವ ಈಶ್ವರಪ್ಪ, ‘ಸಂತೋಷ್ ಆತ್ಮಹತ್ಯೆಗೂ ನನಗೂ ಯಾವುದೇ ಸಂಬಂಧವಿಲ್ಲ… ನಾನು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ನಾನು ಆತನ ಮೇಲೆ ಮಾನನಷ್ಟ ಕೇಸ್ ಹಾಕಿದ್ದೆ. ಅದಕ್ಕೆ ಕೋರ್ಟ್ ನೋಟಿಸ್ ಕೊಟ್ಟಿದ್ದು, ಅದಕ್ಕೆ ಅವರು ಉತ್ತರಿಸಬೇಕಿತ್ತು. ಅದನ್ನು ಬಿಟ್ಟು ಸತ್ತರೆ ನಾನೇನು ಮಾಡಲಿ?’ ಎಂದಿದ್ದಾರೆ.
ಮೈಸೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ‘ನನ್ನ ವಿರುದ್ಧ ಆಪಾದನೆ ಮಾಡಿದವರು ಕೋರ್ಟ್ನಲ್ಲಿ ಹೋರಾಡಬೇಕಿತ್ತು. 40% ಕಮಿಷನ್ ಪಡೆದಿದ್ದಾರೆ ಎಂದು ನನ್ನ ವಿರುದ್ಧ ಆರೋಪಿಸಿ ಮಾನಹಾನಿ ಮಾಡಿದರು ಎಂದು ನಾನು ಕೋರ್ಟ್ಗೆ ಹೋದೆ. ಕೋರ್ಟ್ ನೋಟಿಸ್ ಕೊಟ್ಟ ನಂತರ ನನ್ನ ವಿರುದ್ಧದ ಆರೋಪವನ್ನು ಸಾಬೀತು ಮಾಡಬೇಕಿತ್ತು. ನೋಟಿಸ್ ಅನ್ನು ಅವರು ಎದುರಿಸಬೇಕಿತ್ತು. ಅದನ್ನ ಬಿಟ್ಟು ಆತ್ಮಹತ್ಯೆ ಮಾಡಿಕೊಂಡರೆ ನಾನೇಗೆ ಹೊಣೆಯಾಗ್ತೀನಿ? ನಾನು ಯಾವುದೇ ತಪ್ಪು ಮಾಡಿಲ್ಲ’ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಸ್ಪಷ್ಟನೆ ಪಡಿಸಿದರು.
ಈಶ್ವರಪ್ಪ ವಿರುದ್ಧ ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಆತ್ಮಹತ್ಯೆ! ಸಾವಿಗೂ ಮುನ್ನ ಡೆತ್ನೋಟ್ ರವಾನೆ
ತಿಂಗಳ ಹಿಂದಷ್ಟೇ ಜನಿಸಿದ್ದ ಮುದ್ದು ಮಗುವಿಗೆ ತಂದೆಯಾಗಿದ್ದ ಪೊಲೀಸ್ ಪೇದೆ ಬಾಳಲ್ಲಿ ದುರಂತ