More

    ಸಾಗರದಲ್ಲಿ ಬೆಳ್ಳಂಬೆಳಗ್ಗೆ ಕೆರೆಗೆ ಬಿದ್ದ ಕೆಎಸ್​ಆರ್​ಟಿಸಿ ಬಸ್​

    ಶಿವಮೊಗ್ಗ: ಸಾಗರ ತಾಲೂಕಿನ ಉಳ್ಳೂರು ಕಾಸ್ಪಾಡಿ ಕ್ರಾಸ್​ನ ಬಳಿ ಇಂದು ಬೆಳ್ಳಂಬೆಳಗ್ಗೆ ಕೆರೆಗೆ ಕೆಎಸ್​ಆರ್​ಟಿಸಿ ಬಸ್​ ಪಲ್ಟಿಯಾಗಿದೆ.

    ಶಿವಮೊಗ್ಗ- ಸಾಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗರದಿಂದ ಶಿವಮೊಗ್ಗ ಕಡೆಗೆ ಬಸ್ ಬರುತ್ತಿತ್ತು. ಈ ವೇಳೆ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಆಗುವುದನ್ನು ತಪ್ಪಿಸಲು ಹೋದ ಬಸ್​ ಚಾಲಕನ ನಿಯಂತ್ರಣ ತಪ್ಪಿ ರಸ್ತೆಬದಿಯ ಕೆರೆಗೆ ಪಲ್ಟಿಯಾಗಿದೆ.

    ಸಾಗರದಲ್ಲಿ ಬೆಳ್ಳಂಬೆಳಗ್ಗೆ ಕೆರೆಗೆ ಬಿದ್ದ ಕೆಎಸ್​ಆರ್​ಟಿಸಿ ಬಸ್​

    ಬಸ್​ನಲ್ಲಿ ಚಾಲಕ, ನಿರ್ವಾಹಕ ಸೇರಿ 26 ಪ್ರಯಾಣಿಕರಿದ್ದರು. ದ್ವಿಚಕ್ರ ವಾಹನ ಸವಾರರಾದ ದೀಪಕ್ ಮತ್ತು ಪ್ರಜ್ವಲ್​ಗೆ ಗಂಭೀರ ಗಾಯಗೊಂಡಿದ್ದು, ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್​ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸಾಗರದ ಉಪವಿಭಾಗೀಯ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಕಿಡ್ನ್ಯಾಪ್‌ ಆಗಿದ್ದ ಕೇರಳ ಯುವಕನನ್ನು ಪ್ರಾಣದ ಹಂಗು ತೊರೆದು ಕಾಪಾಡಿದ ಹಾಸನ ಪೊಲೀಸರು! ವಿಡಿಯೋ ವೈರಲ್​

    ಗಂಡನಿಗೆ ಹಣದಾಹ, ಮಾವನಿಗೆ ಕಾಮದಾಹ… ಪೊಲೀಸರ ಮುಂದೆ ನರಕಯಾತನೆ ಬಿಚ್ಚಿಟ್ಟ ಯುವತಿ

    ಮಂಡ್ಯದಲ್ಲಿ ನಿಖಿಲ್​ -ಅಭಿ ನಡುವೆ ಜಿದ್ದಾಜಿದ್ದಿ? ಸ್ಫೋಟಕ ಸುಳಿವು ಕೊಟ್ರು ಜೂ.ರೆಬೆಲ್ ಸ್ಟಾರ್

    ಜೆಡಿಎಸ್​ ಪರ ಅನಂತಕುಮಾರ್ ಪುತ್ರಿ ಬ್ಯಾಟಿಂಗ್​: ರಾಜ್ಯ ರಾಜಕೀಯದಲ್ಲಿ ಸಂಚಲನ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts