ತುಮಕೂರು: ಮಧುಗಿರಿ ತಾಲೂಕಿನ ಕೆರಗಳಪಾಳ್ಯ ಬಳಿ ಭಾನುವಾರ ಬೆಳಗ್ಗೆ ಕೆಎಸ್ಆರ್ಟಿಸಿ ಬಸ್ ಮತ್ತು ದ್ವಿಚಕ್ರ ವಾಹನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ದಂಪತಿ ಮೃತಪಟ್ಟಿದ್ದಾರೆ.
ಮಧುಗಿರಿ ಕಡೆಯಿಂದ ಬೆಂಗಳೂರಿಗೆ ಹೊಗುತ್ತಿದ್ದ ಕೆಎಸ್ಆರ್ಟಿಸಿ ಬಸ್, ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ಭೀಕರತೆಗೆ ದ್ವಿಚಕ್ರ ವಾಹನದಲ್ಲಿ ಕುಳಿತ್ತಿದ್ದ ದಂಪತಿ ಗಂಭೀರಗಾಯಗೊಂಡು ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ. ಮೃತರನ್ನು ಮಧುಗಿರಿಯ ಗೊಂದಿಹಳ್ಳಿ ಮೂಲದ ನಿವಾಸಿಗಳು ಎನ್ನಲಾಗಿದೆ.
ದ್ವಿಚಕ್ರ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಮಧುಗಿರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
ಒಂದೇ ದಿನ ವಿದ್ಯಾರ್ಥಿ-ಶಿಕ್ಷಕಿ ನಾಪತ್ತೆ! ಮದ್ವೆ ಆಗಿ ಬಾಲಕನ ಜತೆ ಸಂಸಾರ ನಡೆಸುತ್ತಿದ್ದಾಕೆ ಸಿಕ್ಕಿಬಿದ್ದದ್ದೇ ರೋಚಕ
ಮಹಿಳೆಯ ಕಾಟ ಸಹಿಸಲಾಗದೆ ಯುವಕ ಆತ್ಮಹತ್ಯೆ: ಸಾವಿಗೂ ಮುನ್ನ ಆತ ಮಾಡಿಟ್ಟ ವಿಡಿಯೋದಲ್ಲಿದೆ ರಹಸ್ಯ
ಜಿಮ್ನಲ್ಲಿ ವರ್ಕೌಟ್ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ಮಹಿಳೆ ಸಾವು! ಬೆಂಗಳೂರಲ್ಲಿ ಬೆಚ್ಚಿಬೀಳಿಸೋ ಘಟನೆ