ಬೆಂಗಳೂರು: ರಾಜ್ಯದಲ್ಲಿ ಮತ್ತೆ ಸಾರಿಗೆ ನೌಕರರ ಪ್ರತಿಭಟನೆ ಕೂಗು ಕೇಳಿ ಬರುತ್ತಿದ್ದು, ಸೆ.20ರಂದು ನಗರದ ಫ್ರೀಡಂ ಪಾರ್ಕ್ನಲ್ಲಿ ಧರಣಿ ನಡೆಯಲಿದೆ. ಅಂದು ಬಸ್ ಸಂಚಾರದಲ್ಲಿ ವ್ಯತ್ಯಯ ಆಗುವ ಸಾಧ್ಯತೆ ಇದ್ದು, ಪ್ರಯಾಣಿಕರು ಮುಂಜಾಗ್ರತೆ ವಹಿಸುವುದು ಸೂಕ್ತ.
6ನೇ ವೇತನ ಆಯೋಗ ಜಾರಿಗೆ ಒತ್ತಾಯಿಸಿ ಸಾರಿಗೆ ನೌಕರರು ಈ ಹಿಂದೆ ಕೆಲಕ್ಕೂ ಹಾಜರಾಗದೆ ದೀರ್ಘಾವಧಿ ಮುಷ್ಕರ ನಡೆಸಿದ್ದರು. ಇದೀಗ ಮತ್ತೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಫೆಡರೇಷನ್ ವತಿಯಿಂದ ಹಲವು ಬೇಡಿಕೆ ಈಡೇರಿಸುಂತೆ ಆಗ್ರಹಿಸಿ ಧರಣಿ ನಡೆಸಲು ನಿರ್ಧರಿಸಲಾಗಿದೆ. ಬಿಎಂಟಿಸಿ, ಕೆಎಸ್ಆರ್ಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳ ನೌಕರರು ಈ ಧರಣಿಯಲ್ಲಿ ಪಾಲ್ಗೊಳ್ಳಲಿದ್ದು, ಸೋಮವಾರ ಬಸ್ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ.
ನೌಕರರ ಬೇಡಿಕೆ ಏನು?
- ಏಪ್ರಿಲ್ 2021ರ ಮುಷ್ಕರದ ವೇಳೆ ಕೆಲಸದಿಂದ ವಜಾಗೊಂಡ ಎಲ್ಲ ಕಾರ್ಮಿಕರನ್ನೂ ಮತ್ತೆ ಕೆಲಸಕ್ಕೆ ನೇಮಿಸಬೇಕು. ಸೇವೆಯಿಂದ ಕೈಬಿಟ್ಟ ಟ್ರೈನಿ ನೌಕರರ ಪುನರ್ ನೇಮಕ ಮಾಡಬೇಕು.
- ವಿಭಾಗದಿಂದ ವಿಭಾಗಕ್ಕೆ ವರ್ಗಾವಣೆ ಮಾಡಿರುವ ನೌಕರರನ್ನು ತೆರವು ಮಾಡಬೇಕು. ಮುಷ್ಕರದ ಅವಧಿಯಲ್ಲಿ ಎಲ್ಲ ರೀತಿಯ ಶಿಸ್ತು ಪ್ರಕ್ರಿಯೆಯನ್ನ ನಿಲ್ಲಿಸಬೇಕು.
ಕೈಯಲ್ಲಿ ಮಚ್ಚು ಹಿಡಿದು, ಗ್ರಾಪಂ ಸದಸ್ಯೆಯನ್ನ ಹೊತ್ತೊಯ್ದ ಚಿಕ್ಕಪ್ಪ! ಕತ್ತಲಲ್ಲಿ ನಡೆಯಿತು ಘೋರ ದುರಂತ
ಮಗುವಿಗೆ ಜನ್ಮ ನೀಡಿ ಅವಿವಾಹಿತೆ ಸಾವು: ಆ ಇಬ್ಬರಲ್ಲಿ ಮಗುವಿನ ತಂದೆ ಯಾರು? ಶಿವಮೊಗ್ಗದಲ್ಲೊಂದು ವಿಚಿತ್ರ ಲವ್ ಕೇಸ್
ಹಸಿವಿನಿಂದ ಅಪಾರ್ಟ್ಮೆಂಟ್ಗೆ ಬಂದ ಐಎಎಸ್ ಅಧಿಕಾರಿ ಕಣ್ಣಿಗೆ ಬಿತ್ತು ಮಗಳ ಶವ! 9ನೇ ಮಹಡಿ ರಹಸ್ಯ ನಿಗೂಢ