ಕುಂದಾಪುರ: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಂಬದಕೋಣೆ ಸೇತುವೆ ಬಳಿ ಭಾನುವಾರ ಬೆಳಗ್ಗೆ ಬೈಕ್ ಅಪಘಾತಕ್ಕೀಡಾಗಿದ್ದು, ಉಡುಪಿ ಕಾಲೇಜೊಂದರ ವಿದ್ಯಾರ್ಥಿಗಳಿಬ್ಬರು ಮೃತಪಟ್ಟಿದ್ದಾರೆ.
ಆದಿತ್ಯ ರೆಡ್ಡಿ (18) ಮತ್ತು ತರುಣ್ ಕುಮಾರ್ ರೆಡ್ಡಿ(19) ಮೃತರು. ಆಂಧ್ರ ಪ್ರದೇಶ ಮೂಲದ ಇವರಿಬ್ಬರೂ ಉಡುಪಿಯ ಮಣಿಪಾಲ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಭಾನುವಾರ ರಜೆ ಇದ್ದ ಹಿನ್ನೆಲೆ ಬಾಡಿಗೆಗೆ ಬೈಕ್ ಪಡೆದು ಮುರುಡೇಶ್ವರಕ್ಕೆ ಹೋಗುತ್ತಿದ್ದರು.
ಮಾರ್ಗಮಧ್ಯೆ ಬೈಕ್ ಸ್ಕಿಡ್ ಆಗಿದ್ದು, ಸ್ಥಳದಲ್ಲೇ ವಿದ್ಯಾರ್ಥಿಗಳಿಬ್ಬರೂ ದುರಂತ ಅಂತ್ಯ ಕಂಡಿದ್ದಾರೆ. ಬೈಂದೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಲ್ಪೆ ಕಡಲ ತೀರದಲ್ಲಿ ಬೀಳುತ್ತಿದೆ ಚಿನ್ನ! ಕಸದ ರಾಶಿಯಲ್ಲಿ ಬಂಗಾರದ ಬೇಟೆಗೆ ಮುಗಿಬಿದ್ದ ಜನ
ತಾವರೆ ಎಲೆಯಲ್ಲಿ ಊಟ ಸವಿದ ಶಾಸಕ, ಮಾಜಿ ಎಂಎಲ್ಸಿ! ಆಬಲವಾಡಿಗೆ ಆಗಮಿಸಿದ ಸಹಸ್ರಾರು ಭಕ್ತರು