More

    ಲೋನ್ ಬಾಕಿ ಇದೆ ಎಂದು ಕರೆ ಬಂದ್ರೆ ಸತ್ತು ಹೋದ ಅಂತೇಳಿ… ಡೆತ್​ನೋಟ್​ ಬರೆದಿಟ್ಟು ಯುವಕ ಆತ್ಮಹತ್ಯೆ

    ಉಡುಪಿ: ‘ಲೋನ್ ಬಾಕಿ ಇದೆ ಎಂದು ನನ್ನ ಮೊಬೈಲ್​ಗೆ ಕರೆ ಬಂದ್ರೆ ಸತ್ತು ಹೋದ ಅಂತೇಳಿ…’ ಎಂದು ಡೆತ್​ನೋಟ್​ ಬರೆದಿಟ್ಟು ಯುವಕನೊಬ್ಬ ಮನೆ ಮುಂದೆ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

    ಈ ದುರ್ಘಟನೆ ಕುಂದಾಪುರದ ಹೆಮ್ಮಾಡಿಯಲ್ಲಿ ಸಂಭವಿಸಿದೆ. ವಿಘ್ನೇಶ್ ಮೃತ ದುರ್ದೈವಿ. ಬಹುರಾಷ್ಟ್ರೀಯ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದ ವಿಘ್ನೇಶ್​, ಸ್ನೇಹಿತರ ಜತೆ ಬಿಜಿನೆಸ್ ಆರಂಭಿಸಲು ಸಾಲ ಮಾಡಿದ್ದ.

    ಸಾಲ ಮರುಪಾವತಿ ಮಾಡಲಾಗದೆ ಆತಂಕಗೊಂಡಿದ್ದ ವಿಘ್ನೇಶ್​, ‘ಲೋನ್ ಬಾಕಿ ಇದೆ ಎಂದು ಕರೆ ಬಂದ್ರೆ ಅವನು ಯಾರೆಂದು ಗೊತ್ತಿಲ್ಲ ಅಂತೇಳಿ. ಅಥವಾ ನಾನು ಸತ್ತು ಹೋದೆ ಎಂದು ಹೇಳಿ. ಮೊಬೈಲ್​ ಆ್ಯಪ್​ನಲ್ಲಿ ನಾನು ಪಡೆದ ಸಾಲವನ್ನು ತೀರಿಸಲು ಆಗುತ್ತಿಲ್ಲ. ಅದಕ್ಕೆ ಸೂಸೈಡ್​ ಮಾಡಿಕೊಳ್ಳುತ್ತಿರುವೆ. ನನ್ನ ಸಾವಿಗೆ ನಾನೇ ಕಾರಣ. ನಾನು ಕೆಲಸ ಮಾಡುವ ಕಂಪನಿಗೆ ನನ್ನ ಸಾವಿನ ಸುದ್ದಿ ತಿಳಿಸಿ. ಎಲ್ಲರಿಗೂ ಮೋಸ ಮಾಡಿ ಹೋಗುತ್ತಿರುವೆ ಕ್ಷಮಿಸಿ’ ಎಂದು ಡೆತ್​ನೋಟ್​ನಲ್ಲಿ ಮನದ ನೋವನ್ನು ವಿವರಿಸಿದ್ದಾನೆ. ಡೆತ್​ನೋಟ್​ನಲ್ಲಿ ತನ್ನ ಎಟಿಎಂ ಪಾಸ್​ವರ್ಡ್ ಅನ್ನೂ ನಮೂದಿಸಿದ್ದಾನೆ. ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಅರ್ಚನಾ ರೆಡ್ಡಿ ಕೊಲೆ ಕೇಸ್​: ಜಿಮ್​ ಟ್ರೈನರ್​ ನವೀನ್​ ಕೋಟ್ಯಧೀಶ ಆಗಿದ್ದೇಗೆ?​ EXCLUSIVE ಮಾಹಿತಿ ಇಲ್ಲಿದೆ

    ಅರ್ಚನಾರೆಡ್ಡಿ ಕೇಸ್​ಗೆ ಮತ್ತೊಂದು ಟ್ವಿಸ್ಟ್​: ನವೀನ್​ 2ನೇ ಅಲ್ಲ, 3ನೇ ಸಂಬಂಧ! ಆಕೆಯ ಮಗಳನ್ನೂ ಪಟಾಯಿಸಿದ್ದ…

    ಲೈಂಗಿಕ ಕ್ರಿಯೆ ವಿಚಾರಕ್ಕೆ ಹಿಂಸಿಸುತ್ತಾಳೆ, ಊಟ ಹಾಕ್ತಿಲ್ಲ, ಅವಳ ಕಾಟ ಸಹಿಸಲಾಗ್ತಿಲ್ಲ… ಎಂದು ಠಾಣೆಗೆ ಬಂದ ಪತಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts