ತುಮಕೂರು: ಅಕ್ರಮವಾಗಿ ಟ್ರ್ಯಾಕ್ಟರ್ನಲ್ಲಿ ಜಲ್ಲಿಕಲ್ಲು ಸಾಗಾಟ ಮಾಡುತ್ತಿದ್ದವರನ್ನು ಬಂಧಿಸುವ ಬದಲು, ರಸ್ತೆಬದಿ ನಿಂತು ಅವರಿಂದ ಹಣ ವಸೂಲಿ ಮಾಡುತ್ತಿದ್ದ ಆರೋಪದಡಿ ಇಬ್ಬರು ಪೊಲೀಸ್ ಕಾನ್ಸ್ಟೇಬಲ್ಗಳನ್ನು ಕೆಲಸದಿಂದ ಅಮಾನತು ಮಾಡಿ ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಆದೇಶ ಹೊರಡಿಸಿದ್ದಾರೆ.
ಕುಣಿಗಲ್ ಪೊಲೀಸ್ ಠಾಣೆಯ ಹೊಯ್ಸಳ ವಾಹನದ ಚಾಲಕ ಪರಮೇಶ್ವರ್, ಕಾನ್ಸ್ಟೇಬಲ್ ಅಶೋಕ್ ಎಂ. ಛಲವಾದ್ ಅಮಾನತುಗೊಂಡವರು.
ಕುಣಿಗಲ್ ತಾಲೂಕಿನ ತರೀಕೆರೆ, ಗೌಡನಪಾಳ್ಯ ಸಮೀಪ ಅಕ್ರಮವಾಗಿ ಜಲ್ಲಿಕಲ್ಲು ಸಾಗಾಟ ಮಾಡುತ್ತಿದ್ದ ಟ್ರ್ಯಾಕ್ಟರ್ ಚಾಲಕರಿಂದ ರಸ್ತೆಬದಿ ನಿಂತು ಪೊಲೀಸ್ ಕಾನ್ಸ್ಟೇಬಲ್ಗಳು ಹಣ ಪಡೆಯುವ ದೃಶ್ಯ ಸ್ಥಳೀಯರ ಮೊಬೈಲ್ನಲ್ಲಿ ಸೆರೆಯಾಗಿತ್ತು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಸಾಕಷ್ಟು ಚರ್ಚೆಗೀಡಾಗಿತ್ತು. ಈ ಸಂಬಂಧ ಕುಣಿಗಲ್ ಸಿಪಿಐ ಗುರುಪ್ರಸಾದ್ ನೇತೃತ್ವದಲ್ಲಿ ತನಿಖೆ ನಡೆಸಲಾಗಿದ್ದು, ಆರೋಪ ಸಾಬಿತಾದ ಹಿನ್ನೆಲೆ ಇಬ್ಬರನ್ನೂ ಅಮಾನತು ಮಾಡಲಾಗಿದೆ.
PSI ಆಗುವ ಕನಸು ಕಂಡಿದ್ದ ಬೆಂಗ್ಳೂರಿನ ಯುವಕ ಕಳ್ಳನಾದ! ಇಂಜಿನಿಯರಿಂಗ್ನಲ್ಲಿ ಟಾಪರ್ ಆಗಿದ್ದವ ದಾರಿ ತಪ್ಪಿದ್ದೇಕೆ?