ಉಡುಪಿ: ಇಲ್ಲಿನ ಹೆರ್ಗ ಗ್ರಾಮದ ಗೋಳಿಕಟ್ಟೆಯ ಬಾಲಚಂದ್ರ ಕೆದ್ಲಾಯ ಎಂಬುವರ ಮನೆಯ ಅಂಗಳದಲ್ಲಿ ಕುತ್ತಿಗೆಯ ಬೆಲ್ಟ್ ಸಹಿತ ಸಾಕು ನಾಯಿಯನ್ನು ಚಿರತೆ ಹೊತ್ತೊಯ್ದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಹಿಂದೆಯೂ ಈ ಪ್ರದೇಶದಲ್ಲಿ ಚಿರತೆ ಪ್ರತ್ಯಕ್ಷವಾಗಿತ್ತು. ಕೋಳಿ, ನಾಯಿಗಳನ್ನು ಚಿರತೆ ತಿಂದಿದೆ. ಮತ್ತೆ ಈ ಭಾಗದಲ್ಲಿ ಚಿರತೆ ಪ್ರತ್ಯಕ್ಷವಾಗಿರುವುದು ಸ್ಥಳೀಯ ನಾಗರಿಕರು ಆತಂಕಗೊಳ್ಳುವಂತೆ ಮಾಡಿದೆ.