ಬೋನಿಗೆ ಬಿದ್ದ ಚಿರತೆ ಮರಿ

blank

ಗಜೇಂದ್ರಗಡ: ತಾಲೂಕಿನ ಕುಂಟೋಜಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವದೇಗೊಳ ಗ್ರಾಮದ ತೋಟವೊಂದರಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿನಲ್ಲಿ ಮಂಗಳವಾರ ತಡರಾತ್ರಿ ಚಿರತೆಯೊಂದು ಸೆರೆಯಾಗಿದೆ.

ಹಲವು ದಿನಗಳಿಂದ ಚಿರತೆ ಕಾಣಿಸುತ್ತಿದೆ ಎಂದು ಗ್ರಾಮಸ್ಥರು, ರೈತರು ದೂರುತ್ತಿದ್ದರು. ದೂರಿನನ್ವಯ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸುಮಾರು ಒಂದು ವರ್ಷದ ಹೆಣ್ಣು ಚಿರತೆ ಬಿದ್ದಿದ್ದು, ಜನರಲ್ಲಿ ನಿರಾಳ ಜತೆಗೆ ಆತಂಕವನ್ನು ಹೆಚ್ಚಿಸಿದೆ. ಸೆರೆ ಸಿಕ್ಕಿರುವುದು ಮರಿ ಚಿರತೆ ಆಗಿರುವುದರಿಂದ ಸುತ್ತಮುತ್ತಲಿನ ಪ್ರದೇಶದಲ್ಲಿ ಇನ್ನಷ್ಟು ಚಿರತೆಗಳು ಇರಬಹುದು ಎಂದು ರೈತರು ಶಂಕೆ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಸೆರೆ ಸಿಕ್ಕಿರುವ ಚಿರತೆಯ ತಾಯಿ ಸಿಟ್ಟಿನಿಂದ ಯಾರ ಮೇಲಾದರೂ ದಾಳಿ ನಡೆಸಿದರೆ ಏನು ಗತಿ? ಎಂದು ಆತಂಕಗೊಂಡಿದ್ದಾರೆ.

ತಾಲೂಕಿನ ನಾನಾ ಗ್ರಾಮಗಳ ಗುಡ್ಡದಲ್ಲಿ ಇನ್ನೂ ಮೂರ್ನಾಲ್ಕು ಚಿರತೆಗಳಿದ್ದು ಸೆರೆ ಹಿಡಿಯಬೇಕು ಹಾಗೂ ಇನ್ನಷ್ಟು ಅರಣ್ಯ ಇಲಾಖೆಯ ಸಿಬ್ಬಂದಿಯನ್ನು ನಿಯೋಜಿಸಿ ರಾತ್ರಿ ಗಸ್ತು ಹೆಚ್ಚಿಸಬೇಕು ಎಂಬುದು ರೈತರ ಒತ್ತಾಯವಾಗಿದೆ.

ಈಗ ಚಿರತೆ ಮರಿ ಸೆರೆಯಾಗಿದ್ದು, ಇನ್ನು ಅನೇಕ ಚಿರತೆಗಳಿವೆ. ಚಿರತೆ ಭಯದಿಂದ ಹೊಲದಲ್ಲಿ ಕೃಷಿ ಚಟುವಟಿಕೆ ನಿಲ್ಲಿಸಿದ್ದೇವೆ. ಹೀಗಾಗಿ ಆತ್ಮರಕ್ಷಣೆ ಹಾಗೂ ವನ್ಯಮೃಗಗಳ ಕಾಟದಿಂದ ಬಂದೂಕು ಪರವಾನಗಿ ಪಡೆಯಲು ಕಳೆದ 2 ವರ್ಷದ ಹಿಂದೆ ಅರ್ಜಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಜಮೀನಿನಲ್ಲಿಯೇ ವಾಸಿಸುವ ನಮಗೆ ಯಾವುದೇ ಪ್ರಾಣಿ ಹಾನಿಯದರೆ ಜಿಲ್ಲಾಡಳಿತವೇ ಹೊಣೆ’ ಎಂದು ರೈತ ಅಶೋಕ ಮಾಳೊತ್ತರ ಪ್ರತಿಕ್ರಿಯಿಸಿದರು.

Share This Article

ಮನೆಯಲ್ಲೇ ಗಟ್ಟಿ ಮೊಸರು ಮಾಡುವ ವಿಧಾನ ನಿಮಗೆ ತಿಳಿದಿದೆಯೇ; ಇಲ್ಲಿದೆ ಸಿಂಪಲ್ ಟ್ರಿ​ಕ್ಸ್​​​​​ | Health Tips

ಚಳಿಗಾಲವಿರಲಿ, ಬೇಸಿಗೆಯಿರಲಿ ಮೊಸರನ್ನು ಇಷ್ಟಪಡುವವರು ಹವಾಮಾನ ಬದಲಾದಾಗಲೂ ಅದನ್ನು ತಿನ್ನುವುದನ್ನು ನಿಲ್ಲಿಸುವುದಿಲ್ಲ. ಚಳಿ ಹೆಚ್ಚಾದಾಗಲೂ ಅನೇಕರು…

ಊಟದ ಸಮಯದಲ್ಲಿ ಈ ತಪ್ಪುಗಳನ್ನು ಮಾಡಲೇಬೇಡಿ; ಮಾಹಿತಿ ತಿಳಿದು ರಕ್ತದಲ್ಲಿ ಸಕ್ಕರೆ ಮಟ್ಟ ಹೆಚ್ಚಾಗುವುದನ್ನು ತಪ್ಪಿಸಿ | Health Tips

ಮಧುಮೇಹವು ಭಾರತದಲ್ಲಿ ಮಾತ್ರವಲ್ಲದೆ ಪ್ರಪಂಚದಾದ್ಯಂತ ವೇಗವಾಗಿ ಹರಡುತ್ತಿದೆ. WHO ಕೂಡ ಈ ಬಗ್ಗೆ ಕಳವಳ ವ್ಯಕ್ತಪಡಿಸಿದೆ.…

ಈ ಪದಾರ್ಥಗಳನ್ನು ಯಾವುದೇ ಕಾರಣಕ್ಕೂ ಕುಕ್ಕರ್‌ನಲ್ಲಿ ಬೇಯಿಸಬೇಡಿ, ವಿಷಕಾರಿಯಾಗಬಹುದು ಎಚ್ಚರ! Pressure Cooker

Pressure Cooker : ಪ್ರೆಶರ್​ ಕುಕ್ಕರ್ ಇಂದು ಪ್ರತಿ ಮನೆಗಳಲ್ಲೂ ಅಗತ್ಯವಿರುವ ಅಡುಗೆ ಸಲಕರಣೆಗಳಲ್ಲಿ ಒಂದಾಗಿದೆ.…