ಅಂಗವಿಕಲರಿಗೂ ಸಮಾಜದಲ್ಲಿ ಗೌರವದ ಜೀವನ

blank

ವಿಜಯವಾಣಿ ಸುದ್ದಿಜಾಲ ಕುಂದಾಪುರ

ಸಮಾಜದಲ್ಲಿ ಗೌರವಯುತ ಜೀವನ ಸಾಗಿಸುವುದು, ಸಮಾನ ಅವಕಾಶಗಳನ್ನು ನೀಡುವುದು ಮತ್ತು ನಮ್ಮ ಹಕ್ಕುಗಳನ್ನು ರಕ್ಷಣೆ ಮಾಡುವುದು ಈ ಮೂರು ತರ್ಕಗಳ ಆಧಾರದ ಮೇಲೆ ಅಂಗವಿಕಲರ ಕಾಯ್ದೆ ರೂಪಿಸಲಾಗಿದೆ ಎಂದು ಉಡುಪಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶ ಪಿ.ಆರ್.ಯೋಗೀಶ್ ಹೇಳಿದರು.

ಕರ್ನಾಟಕ ರಾಜ್ಯ ಅಂಗವಿಕಲರ ಹಾಗೂ ಪಾಲಕರ ಒಕ್ಕೂಟ, ಉಡುಪಿ ಜಿಲ್ಲಾ ಸಮಿತಿ ಕುಂದಾಪುರ ಹಾಗೂ ಬೈಂದೂರು ತಾಲೂಕು, ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಒಕ್ಕೂಟ ಮತ್ತು ವಿವಿಧ ಇಲಾಖೆ ಸಹಕಾರದೊಂದಿಗೆ ಕುಂದಾಪುರದಲ್ಲಿ ಶನಿವಾರ ದಿವ್ಯಾಂಗರ ಸಮಾವೇಶ, ಸಾಧಕರಿಗೆ ಸನ್ಮಾನ ಮತ್ತು ಪ್ರತಿಭಾ ಪ್ರದರ್ಶನ ಉದ್ಘಾಟಿಸಿ ಮಾತನಾಡಿದರು.

ರಾಜ್ಯ ಅಂಗವಿಕಲರ ಹಾಗೂ ಪಾಲಕರ ಒಕ್ಕೂಟ ಅಧ್ಯಕ್ಷ ಮಂಜುನಾಥ ಹೆಬ್ಬಾರ್ ಅಧ್ಯಕ್ಷತೆ ವಹಿಸಿದ್ದರು. ಶಾಸಕ ಗುರುರಾಜ್ ಗಂಟಿಹೊಳೆ ಶುಭಹಾರೈಸಿದರು. ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ನಿವೃತ್ತ ಸಹಾಯಕ ನಿರ್ದೇಶಕ ನಿರಂಜನ್ ಭಟ್ ದಿಕ್ಸೂಚಿ ಭಾಷಣ ಮಾಡಿದರು. ಕುಂದಾಪುರ ತಾಪಂ ಕಾರ್ಯನಿರ್ವಹಣಾಧಿಕಾರಿ ಡಾ.ರವಿಕುಮಾರ್ ಹುಕ್ಕೇರಿ ದಿವ್ಯಾಂಗರ ಜಾಥಾಕ್ಕೆ ಚಾಲನೆ ನೀಡಿದರು. ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಅಧಿಕಾರಿ ರತ್ನಾ, ದಿವ್ಯಾಂಗರ ರಕ್ಷಣಾ ಸಮಿತಿ ಸಂಚಾಲಕ ವಿಜಯ ಕೊಡವೂರು, ಅಂಗನವಾಡಿ ಮೇಲ್ವಿಚಾರಕಿ ಸಿಂಧು, ರಾಜ್ಯ ಅಂಗವಿಕಲರ ಹಾಗೂ ಪಾಲಕರ ಒಕ್ಕೂಟ ಗೌರವಾಧ್ಯಕ್ಷ ವೆಂಕಟೇಶ ಕೋಣಿ ಉಪಸ್ಥಿತರಿದ್ದರು. ಮಂಜುನಾಥ ಹೆಬ್ಬಾರ್ ಸ್ವಾಗತಿಸಿದರು. ಉದಯ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು.

ಕಲೆಗಳಿಂದ ಭಾರತದ ಶ್ರೀಮಂತಿಕೆ ಉಳಿವು-ರಶ್ಮಿತಾ ಯುವರಾಜ್ ಜೈನ್

ಕಿರು ಉದ್ಯಮಗಳ ಸ್ಥಾಪನೆಯಿಂದ ಉದ್ಯೋಗವಕಾಶ ಹೆಚ್ಚಳ

 

Share This Article

ಬೇಸಿಗೆಯಲ್ಲಿ ಹಾಲಿನ ಚಹಾ ಕುಡಿಯುವುದು ಆರೋಗ್ಯಕ್ಕೆ ಹಾನಿಕಾರಕ! ಈ ಚಹಾ ಟ್ರೈ ಮಾಡಿ.. Summer Morning Drinks

Summer Morning Drinks: ಬೇಸಿಗೆಯಾಗಿರಲಿ ಅಥವಾ ಚಳಿಗಾಲವಾಗಿರಲಿ, ಕೆಲವರು ಬೆಳಿಗ್ಗೆ ಎದ್ದ ತಕ್ಷಣ ಚಹಾ ಕುಡಿಯಲು ಇಷ್ಟಪಡುತ್ತಾರೆ. …

ಬೇಸಿಗೆ ಅಂತ ಅತಿ ಹೆಚ್ಚು ನೀರು ಕುಡಿಯುತ್ತೀರಾ? ಆರೋಗ್ಯಕ್ಕೆ ತುಂಬಾ ಡೇಂಜರ್​, ಕುಡಿಯುವ ರೀತಿ ಹೀಗಿರಲಿ… Summer

Summer : ಬೇಸಿಗೆ ವಾತಾವರಣದಲ್ಲಿ ಹೆಚ್ಚು ಚರ್ಚೆಯಾಗುವ ಪ್ರಮುಖ ಸಂಗತಿ ಯಾವುದೆಂದರೆ ಅದು ನೀರು. ಆದರೆ,…

ಈ 3 ರಾಶಿಯವರು ಹಣ ಉಳಿಸುವಲ್ಲಿ, ಗಳಿಸುವಲ್ಲಿ ಭಾರಿ ನಿಪುಣರು! ನಿಮ್ಮ ರಾಶಿ ಯಾವುದು? Zodiac Signs

Zodiac Signs : ಸಾಮಾನ್ಯವಾಗಿ ಪ್ರತಿಯೊಬ್ಬರ ಜೀವನದಲ್ಲಿ ಹಣವು ಪ್ರಮುಖ ಪಾತ್ರ ವಹಿಸುತ್ತದೆ. ಹಣದ ಬೇಡಿಕೆಯು…