More

    ಇನ್ನಷ್ಟು ದಿನ ಕರ್ಫ್ಯೂ ಮುಂದುವರಿಕೆ! ಲಾಕ್​ಡೌನ್​ ಸುಳಿವು ಕೊಟ್ಟ ಸಚಿವರು

    ಬೆಂಗಳೂರು: ರಾಜ್ಯಾದ್ಯಂತ ವೀಕೆಂಡ್​ ಕರ್ಫ್ಯೂ ಜಾರಿಯಲ್ಲಿದ್ದು, ಇದು ಇನ್ನಷ್ಟು ದಿನಗಳ ವರೆಗೆ ವಿಸ್ತರಣೆ ಆಗುವ ಬಗ್ಗೆ ಸಚಿವರು ಸುಳಿವು ಕೊಟ್ಟಿದ್ದಾರೆ.

    ಸದ್ಯ ಜಾರಿಯಲ್ಲಿಯಲ್ಲಿರುವಂತೆ ಸೋಮವಾರ ಬೆಳಗ್ಗೆ 6ರವರೆಗೂ ವೀಕೆಂಡ್​ ಲಾಕ್​ಡೌನ್​ ಇದೆ. ಈ ನಡುವೆ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಅಶ್ವಥನಾರಾಯಣ್, ಈಗಿರುವ ಕರ್ಫ್ಯೂ ಮುಂದುವರಿಸುವ‌ಂತೆ ಸಲಹೆ ಇದೆ. ಜನರ ಬದುಕಿಗೆ ಅನುವು ಮಾಡುವ ಮೂಲಕ ಕರ್ಫ್ಯೂ ಕ್ರಮ ಕೈಗೊಂಡಿದ್ದೇವೆ. ಇದನ್ನು ಮುಂದುವರಿಸಬೇಕಾ? ಬೇಡವಾ? ಎಂಬುದರ ಬಗ್ಗೆ ಸರ್ಕಾರ ನಿರ್ಧಾರ ತೆಗೆದುಕೊಳ್ಳಲಿದೆ ಎಂದರು.

    ಇದೇ ವಿಚಾರವಾಗಿ ಮಾತನಾಡಿದ ಸಚಿವ ಬಸವರಾಜ ಬೊಮ್ಮಾಯಿ, ಕರ್ಫ್ಯೂ ವೇಳೆ ಅಗತ್ಯ ಸೇವೆಗಳಿಗೆ ಮಾತ್ರ ಅನುಮತಿ ಕೊಟ್ಟಿದ್ದೇವೆ. ಲಾಕ್​ಡೌನ್​ ಮುಂದುವರಿಸುವ ಬಗ್ಗೆ ಸೋಮವಾರ ಕ್ಯಾಬಿನೆಟ್​ನಲ್ಲಿ ಚರ್ಚೆ ಮಾಡಿ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

    ಕ್ರಿಕೆಟ್​ ಆಟಗಾರ್ತಿ ವೇದಾಕೃಷ್ಣಮೂರ್ತಿ ತಾಯಿ ಕರೊನಾಗೆ ಬಲಿ

    ಕಾಂಗ್ರೆಸ್​ ಶಾಸಕಿ ಕಲಾವತಿ ಕರೊನಾಗೆ ಬಲಿ

    ಹಾಡಹಗಲೇ ಫ್ಯಾನ್ಸಿ ಸ್ಟೋರ್​ಗೆ ನುಗ್ಗಿ ಯುವತಿಯ ಬರ್ಬರ ಹತ್ಯೆ, ಬೆಚ್ಚಿಬಿದ್ದ ಸ್ಥಳೀಯರು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts