ಬೆಂಗಳೂರು: ಇಂದು(ಶುಕ್ರವಾರ) ನಸುಕಿನಲ್ಲಿ ರಾಜ್ಯದ ವಿವಿಧೆಡೆ ಆರ್ಟಿಒ ಚೆಕ್ಪೋಸ್ಟ್ಗಳ ಮೇಲೆ ಏಕಕಾಲಕ್ಕೆ ಲೋಕಾಯುಕ್ತ ದಾಳಿಯಾಗಿದೆ.
ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕೊಗನೊಳ್ಳಿಯ ಆರ್ಟಿಒ ಚೆಕ್ ಪೋಸ್ಟ್, ಕರ್ನಾಟಕ-ಮಹಾರಾಷ್ಟ್ರ ಗಡಿಭಾಗದ ಚಡಚಣ ತಾಲೂಕಿನ ಧೂಳಖೇಡ ಆರ್ಟಿಒ ಚೆಕ್ ಪೋಸ್ಟ್, ಬಳ್ಳಾರಿ ತಾಲೂಕಿನ ಹಗರಿ ಚೆಕ್ ಪೊಸ್ಟ್, ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ನಂಗಲಿ ಗ್ರಾಮದ ಚೆಕ್ ಪೋಸ್ಟ್, ಬಳ್ಳಾರಿಯ ಆರ್ಟಿಒ ವ್ಯಾಪ್ತಿಯ ಆಂಧ್ರ ಗಡಿಭಾಗದಲ್ಲಿರುವ ಹಗರಿ ನದಿ ಸೇತುವೆ ಬಳಿಯ ಚೆಕ್ ಪೋಸ್ಟ್, ಬೀದರ್ ಜಿಲ್ಲೆ ಹುಮನಾಬಾದ್ ಬಳಿ ಹೈದರಾಬಾದ್- ಮುಂಬೈ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಚೆಕ್ ಪೋಸ್ಟ್, ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ಪ್ರವಾಸಿ ಮಂದಿರ ವೃತ್ತದಲ್ಲಿರುವ ಆರ್ಟಿಒ ಚೆಕ್ ಪೋಸ್ಟ್ಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ವಾಹನ ತಪಾಸಣೆ ವೇಳೆ ಹಣ ವಸೂಲಿ ಮಾಡಲಾಗುತ್ತಿದೆ ಎಂಬ ದೂರುಗಳು ಕೇಳಿಬಂದ ಹಿನ್ನೆಲೆ ಆರ್ಟಿಒ ಚೆಕ್ ಪೋಸ್ಟ್ಗಳ ಮೇಲೆ ಲೋಕಾಯುಕ್ತ ದಾಳಿಯಾಗಿದೆ.