More

    ಇಂದು ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಆರ್​ಟಿಒ ಚೆಕ್​ಪೋಸ್ಟ್​ಗಳ ಮೇಲೆ ಲೋಕಾಯುಕ್ತ ದಾಳಿ

    ಬೆಂಗಳೂರು: ಇಂದು(ಶುಕ್ರವಾರ) ನಸುಕಿನಲ್ಲಿ ರಾಜ್ಯದ ವಿವಿಧೆಡೆ ಆರ್​ಟಿಒ ಚೆಕ್​ಪೋಸ್ಟ್​ಗಳ ಮೇಲೆ ಏಕಕಾಲಕ್ಕೆ ಲೋಕಾಯುಕ್ತ ದಾಳಿಯಾಗಿದೆ.

    ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕೊಗನೊಳ್ಳಿಯ ಆರ್​ಟಿಒ ಚೆಕ್‌ ಪೋಸ್ಟ್, ಕರ್ನಾಟಕ-ಮಹಾರಾಷ್ಟ್ರ ಗಡಿಭಾಗದ ಚಡಚಣ ತಾಲೂಕಿನ ಧೂಳಖೇಡ ಆರ್​ಟಿಒ ಚೆಕ್‌ ಪೋಸ್ಟ್, ಬಳ್ಳಾರಿ ತಾಲೂಕಿನ ಹಗರಿ ಚೆಕ್​ ಪೊಸ್ಟ್, ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ನಂಗಲಿ ಗ್ರಾಮದ ಚೆಕ್​ ಪೋಸ್ಟ್, ಬಳ್ಳಾರಿಯ ಆರ್​ಟಿಒ ವ್ಯಾಪ್ತಿಯ ಆಂಧ್ರ ಗಡಿಭಾಗದಲ್ಲಿರುವ ಹಗರಿ ನದಿ ಸೇತುವೆ ಬಳಿಯ ಚೆಕ್ ಪೋಸ್ಟ್, ಬೀದರ್ ಜಿಲ್ಲೆ ಹುಮನಾಬಾದ್ ಬಳಿ ಹೈದರಾಬಾದ್- ಮುಂಬೈ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಚೆಕ್​ ಪೋಸ್ಟ್, ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ಪ್ರವಾಸಿ ಮಂದಿರ ವೃತ್ತದಲ್ಲಿರುವ ಆರ್​ಟಿಒ ಚೆಕ್ ಪೋಸ್ಟ್​ಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

    ವಾಹನ ತಪಾಸಣೆ ವೇಳೆ ಹಣ ವಸೂಲಿ ಮಾಡಲಾಗುತ್ತಿದೆ ಎಂಬ ದೂರುಗಳು ಕೇಳಿಬಂದ ಹಿನ್ನೆಲೆ ಆರ್​ಟಿಒ ಚೆಕ್​ ಪೋಸ್ಟ್​ಗಳ ಮೇಲೆ ಲೋಕಾಯುಕ್ತ ದಾಳಿಯಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts