ಬೆಂಗಳೂರು: ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿದ್ದು, ರಸ್ತೆಯಲ್ಲಿ ಹೋಗುತ್ತಿದ್ದ ಬೈಕ್ ಮೇಲೆ ಮರದ ದಿಮ್ಮಿಗಳು ಬಿದ್ದ ಪರಿಣಾಮ ನವವಿವಾಹಿತ ಮೃತಪಟ್ಟ ಘಟನೆ ನಾಗರಬಾವಿಯಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದೆ.
ಮುಕೇಶ್ (28) ಮೃತ ದುರ್ದೈವಿ. ಈತನಿಗೆ 7 ತಿಂಗಳ ಹಿಂದಷ್ಟೇ ಮದುವೆ ಆಗಿತ್ತು. ಪತ್ನಿ 5 ತಿಂಗಳ ಗರ್ಭಿಣಿಯಾಗಿದ್ದು, ಪುಟ್ಟ ಕಂದನ ಸ್ವಾಗತಕ್ಕೆ ಇಡೀ ಕುಟುಂಬ ಕಾತರದಿಂದ ಕಾಯುತ್ತಿದೆ. ದುರ್ವಿಧಿ ನವದಂಪತಿ ಬಾಳಲ್ಲಿ ಆಟವಾಡಿದ್ದು, ಮುಕೇಶ್ ಚಿಕ್ಕ ವಯಸ್ಸಿಗೇ ಬಾರದ ಲೋಕಕ್ಕೆ ಹೋಗಿದ್ದಾರೆ.
ತಮಿಳುನಾಡಿನ ತಿರುವಣ್ಣಾಮಲೈ ಮೂಲದ ಮುಕೇಶ್, ಬೆಂಗಳೂರಿನ ನಂದಿನಿ ಲೇಔಟ್ನಲ್ಲಿ ವಾಸವಿದ್ದರು. ತಿರುವಣ್ಣಾಮಲೈನಲ್ಲಿರುವ ತಾಯಿ ಮತ್ತು ಅಜ್ಜಿಯನ್ನು ನೋಡಲು ಮುಕೇಶ್ ಹೋಗಿದ್ದ. ವಾಪಸ್ ಬೆಂಗಳೂರಿಗೆ ಶುಕ್ರವಾರ ಬೆಳಗ್ಗೆ ಆಗಮಿಸಿದ ಮುಕೇಶ್ನನ್ನು ಮನೆಗೆ ಕರೆದೊಯ್ಯಲು ಸ್ಯಾಟಲೈಟ್ ಬಸ್ ನಿಲ್ದಾಣದಿಂದ ಡೇವಿಡ್ ಎಂಬಾತ ಬೈಕ್ ತಂದಿದ್ದ. ಡೇವಿಡ್ ಬೈಕ್ ಚಲಾಯಿಸುತ್ತಿದ್ದ. ಬೈಕ್ನ ಹಿಂಬದಿಯಲ್ಲಿ ಮುಕೇಶ್ ಕುಳಿತ್ತಿದ್ದ.
ಬೃಹತ್ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಲಾರಿಯು ನಾಗರಬಾವಿಯ ನಮ್ಮೂರ ದಿಣ್ಣೆ ಸಮೀಪದ ರಸ್ತೆಯಲ್ಲಿ ಪಲ್ಟಿಯಾಗಿದ್ದು, ದಿಮ್ಮಿಗಳು ಎರಡು ಬೈಕ್ಗಳ ಮೇಲೆ ಬಿದ್ದಿವೆ. ಪರಿಣಾಮ ಒಂದು ಬೈಕ್ನಲ್ಲಿದ್ದ ಮುಕೇಶ್ ಗಂಭೀರ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದು, ಡೇವಿಡ್ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ. ಮತ್ತೊಂದು ಬೈಕ್ ಸವಾರ ಶಿವು(26) ಎಂಬಾತನಿಗೂ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾಮಾಕ್ಷಿಪಾಳ್ಯ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮುಕೇಶ್ ಸಾವಿನ ಸುದ್ದಿ ಕೇಳಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಪುತ್ರನಿಗಾಗಿ ಕರ್ಮಭೂಮಿಯನ್ನೇ ಬಿಟ್ಟುಕೊಟ್ಟ ಯಡಿಯೂರಪ್ಪ! ಶಿಕಾರಿಪುರದಲ್ಲಿ ಬಿಎಸ್ವೈ ಮಹತ್ವದ ಘೋಷಣೆ
ಮಂಗಳೂರಲ್ಲಿ ವಿದ್ಯಾರ್ಥಿಗಳ ಚುಂಬನ ವಿಡಿಯೋ ವೈರಲ್ ಬೆನ್ನಲ್ಲೇ ಕಾಮಪುರಾಣ ಲೀಕ್!
ಆರತಕ್ಷತೆ ವೇಳೆ ಕುಸಿದು ಬಿದ್ದು ಮದುಮಗ ಸಾವು! ಹೊಸಪೇಟೆಯಲ್ಲಿ ದುರಂತ ಘಟನೆ