ಶಿರಾದಲ್ಲಿ ಭೀಕರ ಅಪಘಾತ, 9 ಮಂದಿ ದುರ್ಮರಣ: ಹೊಟ್ಟೆಪಾಡಿಗಾಗಿ ಗುಳೆ ಹೊರಟ್ಟಿದ್ದ ಬಡವರು ದುರಂತ ಅಂತ್ಯ

ತುಮಕೂರು: ಶಿರಾ ತಾಲೂಕಿನ ಕಳ್ಳಂಬೆಳ್ಳದ ಬಾಲೆನಹಳ್ಳಿ ಗೇಟ್ ಬಳಿ ಇಂದು(ಗುರುವಾರ) ಬೆಳಗಿನಜಾವ ಲಾರಿ ಮತ್ತು ಕ್ರೂಸರ್​ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 9 ಮಂದಿ ದುರ್ಮರಣಕ್ಕೀಡಾಗಿದ್ದು, 14 ಜನರ ಸ್ಥಿತಿ ಗಂಭೀರವಾಗಿದೆ. ಮೃತರೆಲ್ಲರೂ ಕೂಲಿ ಕಾರ್ಮಿಕರಾಗಿದ್ದು, ಕೂಲಿಗಾಗಿ ರಾಯಚೂರು ಜಿಲ್ಲೆಯಿಂದ ಬೆಂಗಳೂರಿಗೆ ಗುಳೆ ಹೊರಟ್ಟಿದ್ದರು. ಶಿರವಾರ ತಾಲೂಕಿನ ಕುರಕುಂದಾ ಗ್ರಾಮದ ಸುಜಾತಾ(25) ಮತ್ತು ವಿನೋದ(3), ವಡವಟ್ಟಿ ಗ್ರಾಮದ ಕ್ರೂಸರ್ ಚಾಲಕ ಕೃಷ್ಣಪ್ಪ(25), ಲಕ್ಷ್ಮೀ ಅಲಿಯಾಸ್ ಮೀನಾಕ್ಷಿ(28), ಕಸನದೊಡ್ಡಿ ಗ್ರಾಮದ ಬಸಮ್ಮ(50), ಪ್ರಭು ಸೇರಿ 9 ಮಂದಿ ಮೃತರು. … Continue reading ಶಿರಾದಲ್ಲಿ ಭೀಕರ ಅಪಘಾತ, 9 ಮಂದಿ ದುರ್ಮರಣ: ಹೊಟ್ಟೆಪಾಡಿಗಾಗಿ ಗುಳೆ ಹೊರಟ್ಟಿದ್ದ ಬಡವರು ದುರಂತ ಅಂತ್ಯ