More

    ಸಿಮೆಂಟ್ ತುಂಬಿದ್ದ ಲಾರಿ ಮಗುಚಿ ಚಾಲಕ ಸಾವು

    ಹನೂರು: ಸಮೀಪದ ಹುಲುಸುಗುಡ್ಡೆಯ ಬಳಿ ಶುಕ್ರವಾರ ನಿಯಂತ್ರಣ ತಪ್ಪಿದ ಲಾರಿಯೊಂದು ಮಗುಚಿ ಬಿದ್ದು ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ತಾಲೂಕಿನ ಬಂಡಳ್ಳಿ ಗ್ರಾಮದ ಆದಿಲ್ ಪಾಷ ಆಲಿಯಾಸ್ ಬಾಬು (48) ಮೃತರು.

    ಇವರು ಶುಕ್ರವಾರ ಲಾರಿಯಲ್ಲಿ ತಮಿಳುನಾಡಿನ ತಿರುಚ್ಚಿಯಿಂದ ಸಿಮೆಂಟ್ ತುಂಬಿಕೊಂಡು ಚಾಮರಾಜನಗರಕ್ಕೆ ಸಾಗಿಸುತ್ತಿದ್ದರು. ಆದರೆ ಬೆಳಗ್ಗೆ ಹುಸುಲುಗುಡ್ಡೆಯ ಬಳಿ ನಿಯಂತ್ರಣ ತಪ್ಪಿದ ಲಾರಿ ರಸ್ತೆ ಬದಿಗೆ ಮಗುಚಿದೆ. ಪರಿಣಾಮ ಚಾಲಕ ಲಾರಿಯ ಕೆಳಗಡೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟರೆ, ಜತೆಗಿದ್ದ ಚಾಲಕ ಆದಿಲ್ ಜಿಗಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕೆ ಇನ್ಸ್‌ಪೆಕ್ಟರ್ ಶಶಿಕುಮಾರ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದರು. ಬಳಿಕ ಕ್ರೇನ್ ಸಹಾಯದಿಂದ ಮೃತದೇಹವನ್ನು ಹೊರಕ್ಕೆ ತೆಗೆದು ಹನೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ನೀಡಲಾಯಿತು. ಈ ಸಂಬಂಧ ಹನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಮಾಜಿ ಶಾಸಕ ಭೇಟಿ: ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಮಂಗಲ, ಕಾಮಗೆರೆ, ಆರ್.ಎಸ್ ದೊಡ್ಡಿ ಹಾಗೂ ಹನೂರು ಭಾಗದ ನೂರಾರು ಜನರು ಧಾವಿಸಿದ್ದರು. ಈ ವೇಳೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಇನ್ನು ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ಮಾಜಿ ಶಾಸಕ ಆರ್.ನರೇಂದ್ರ ಭೇಟಿ ನೀಡಿ ಅಂತಿಮ ದರ್ಶನ ಪಡೆದರು.’

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts