More

    ಅಕ್ರಮವಾಗಿ ಯೂರಿಯಾ ಗೊಬ್ಬರ ಸಾಗಿಸುತ್ತಿದ್ದ ಲಾರಿ ವಶಕ್ಕೆ

    ಬೈಲಕುಪ್ಪೆ: ಖಚಿತ ಮಾಹಿತಿ ಮೇರೆಗೆ ಕೃಷಿ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿ ಭಾನುವಾರ ಸಂಜೆ ದಾಳಿ ಮಾಡಿ ಅಕ್ರಮವಾಗಿ ಯೂರಿಯಾ ಗೊಬ್ಬರ ಸಾಗಿಸುತ್ತಿದ್ದ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ.

    ಪಿರಿಯಾಪಟ್ಟಣ ತಾಲೂಕಿನ ರಾವಂದೂರು ಸಮೀಪ ಲಾರಿಯನ್ನು ಗಮನಿಸಿದ ರೈತರು ಕೃಷಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಅಲ್ಲದೇ, ರೈತರು ಲಾರಿಯನ್ನು ಹಿಂಬಾಲಿಸಿದ ವೇಳೆ ಚಾಲಕ ಜಾಗೃತಗೊಂಡು ಆವರ್ತಿ ಗ್ರಾಮದಲ್ಲಿ ವಾಹನ ನಿಲ್ಲಿಸಿ ಚಾಲಕ ಪರಾರಿಯಾಗಿದ್ದಾನೆ. ಕೃಷಿ ಅಧಿಕಾರಿಗಳ ಮಾಹಿತಿ ಮೇರೆಗೆ ಬೈಲಕುಪ್ಪೆ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲಿಸಿದ್ದಾರೆ. ಸಬ್ಸಿಡಿಯಲ್ಲಿ ದೊರಕುವ ಯೂರಿಯಾ ಗೊಬ್ಬರವನ್ನು ಅಸಲಿ ಚೀಲದಿಂದ ನಕಲಿ ಚೀಲಕ್ಕೆ ತುಂಬಿಕೊಂಡು ಸಾಗಿಸಲಾಗುತ್ತಿತ್ತು ಎಂಬುದು ಪತ್ತೆಯಾಗಿದೆ.

    ಪಿರಿಯಾಪಟ್ಟಣ ತಾಲೂಕು ಕೃಷಿ ಅಧಿಕಾರಿ ಪ್ರಸಾದ್ ನೀಡಿದ ದೂರಿನ ಮೇರೆಗೆ ಬೈಲಕುಪ್ಪೆ ಪೊಲೀಸ್ ಠಾಣಾಧಿಕಾರಿ ಜಿತೇಂದ್ರಕುಮಾರ್ ಪ್ರಕರಣ ದಾಖಲಿಸಿಕೊಂಡು ಲಾರಿಯನ್ನು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ.

    ಕೃಷಿ ಅಧಿಕಾರಿಗಳಾದ ಪ್ರಸಾದ್, ಹಿತೇಶ್, ಪೊಲೀಸ್ ಸಿಬ್ಬಂದಿ ಮುದ್ದುರಾಜ್, ಕುಮಾರ್, ಸುರೇಶ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts