More

    3 ತಿಂಗಳ ಹಿಂದೆ ಸತ್ತವ ನಿನ್ನೆ ಬೆಳ್ಳಂಬೆಳಗ್ಗೆ ಗ್ರಾಮಕ್ಕೆ ಬಸ್​ನಲ್ಲಿ ಬಂದಿಳಿದ! ಶವಸಂಸ್ಕಾರ, ತಿಥಿ ಕಾರ್ಯವೂ ನಡೆದಿತ್ತು…

    ಮಧುಗಿರಿ: ಮೂರು ತಿಂಗಳ ಹಿಂದೆಯೇ ಮೃತಪಟ್ಟಿದ್ದ ವ್ಯಕ್ತಿಯ ಶವಸಂಸ್ಕಾರ, ತಿಥಿಕಾರ್ಯ ಎಲ್ಲವನ್ನೂ ಕುಟುಂಬಸ್ಥರು ಮಾಡಿದ್ದರು. ಮನೆಯಲ್ಲಿ ಆತನ ಸಾವಿನ ನೋವಲ್ಲೇ ಫೋಟೋಗೆ ಹಾರ ಹಾಕಿ ಪೂಜೆ ಮಾಡುತ್ತಿದ್ದರು. ನಿನ್ನೆ(ಮಂಗಳವಾರ) ಆ ವ್ಯಕ್ತಿ ಗ್ರಾಮದಲ್ಲಿ ದಿಢೀರ್​ ಪ್ರತ್ಯಕ್ಷವಾಗಿ ಕುಟುಂಬಸ್ಥರು ಮತ್ತು ಗ್ರಾಮಸ್ಥರಿಗೆ ಅಚ್ಚರಿ ಮೂಡಿಸಿದ್ದಾನೆ.

    ಇಂಥದೊಂದು ಅಚ್ಚರಿಯ ಘಟನೆ ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿಯಲ್ಲಿ ನಡೆದಿದೆ. ಮೃತಪಟ್ಟಿದ್ದಾರೆ ಎಂದೇ ಭಾವಿಸಲಾಗಿದ್ದ ಕೊಡಿಗೇನಹಳ್ಳಿ ನಾಗರಾಜಪ್ಪ ಎಂಬುವರೇ ಮಂಗಳವಾರ ಬೆಳಗ್ಗೆ ಗ್ರಾಮಕ್ಕೆ ಬಸ್​ನಲ್ಲಿ ಬಂದಿಳಿದು ಅಚ್ಚರಿ ಮೂಡಿಸಿದವರು. ಮಧುಗಿರಿ ತಾಲೂಕು ಚಿಕ್ಕಮಾಲೂರು ಗ್ರಾಮ ಪಂಚಾಯಿತಿ ಅಧ್ಯೆಕ್ಷೆ ಪ್ರೇಮಲತಾ ಅವರ ತಂದೆ ನಾಗರಾಜಪ್ಪಗೆ ಮದ್ಯಪಾನದ ಚಟವಿತ್ತು. ಅನಾರೋಗ್ಯದ ಹಿನ್ನೆಲೆಯಲ್ಲಿ ಮೂರು ತಿಂಗಳ ಹಿಂದೆ ಅವರನ್ನು ಬೆಂಗಳೂರಿನ ನಿಮ್ಹಾನ್ಸ್​ ಆಸ್ಪತ್ರೆಗೆ ಸೇರಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಖಾಸಗಿ ಆಸ್ಪತ್ರೆ ಸಿಬ್ಬಂದಿ ನಾಗರಾಜಪ್ಪ ಮೃತಪಟ್ಟಿದ್ದಾರೆ ಎಂದು ಶವವನ್ನು ಅವರ ಕುಟುಂಬದವರಿಗೆ ಹಸ್ತಾಂತರಿಸಿದ್ದರು. ಕುಟುಂಬಸ್ಥರು ಅಂತ್ಯಸಂಸ್ಕಾರವನ್ನೂ ನೆರವೇರಿಸಿದ್ದರು. ಆದರೆ ಇದೀಗ ನಾಗರಾಜಪ್ಪ ಇದ್ದಕ್ಕಿದ್ದಂತೆ ಪ್ರತ್ಯಕ್ಷವಾಗಿದ್ದು, ಕುಟುಂಬಸ್ಥರಲ್ಲಿ ಸಂತಸದ ಜತೆಗೆ ಗೊಂದಲವೂ ಮೂಡಿಸಿದೆ.

    ಇವರ ಮತ್ತೋರ್ವ ಪುತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಅಲ್ಲಿಯೇ ತಂದೆ ನಾಗರಾಜಪ್ಪ ಸಣ್ಣ-ಪುಟ್ಟ ಕೆಲಸ ಮಾಡಿಕೊಂಡು ಇರುತ್ತಿದ್ದರು. ಆಗಾಗ ಇವರು ಮನೆ ಬಿಟ್ಟು ಹೋಗುತ್ತಿದ್ದರು. ಮೂರು ತಿಂಗಳ ಹಿಂದೆ ಮಗಳು ಕೆಲಸ ನಿರ್ವಹಿಸುವ ಅದೇ ಆಸ್ಪತ್ರೆಯ ಶವಾಗಾರದಲ್ಲಿ ಇವರ ತಂದೆಯನ್ನೇ ಹೋಲುವ ವ್ಯಕ್ತಿಯ ಮೃತದೇಹವಿತ್ತು. ಆಸ್ಪತ್ರೆ ದಾಖಲೆಗಳ ಪ್ರಕಾರ ಇವರ ತಂದೆಗೆ ಏನೇನು ಕಾಯಿಲೆಗಳಿದ್ದವೋ ಅವೆಲ್ಲಾ ಲಕ್ಷಣ ಮೃತ ವ್ಯಕ್ತಿಯಲ್ಲಿ ಇದ್ದವು. ತಂದೆಯೆಂದೇ ಭಾವಿಸಿ ಅಂತ್ಯಸಂಸ್ಕಾರ ನೆರವೇರಿಸಿದ್ದರು.

    3 ತಿಂಗಳ ಹಿಂದೆ ಸತ್ತವ ನಿನ್ನೆ ಬೆಳ್ಳಂಬೆಳಗ್ಗೆ ಗ್ರಾಮಕ್ಕೆ ಬಸ್​ನಲ್ಲಿ ಬಂದಿಳಿದ! ಶವಸಂಸ್ಕಾರ, ತಿಥಿ ಕಾರ್ಯವೂ ನಡೆದಿತ್ತು...

    “ನಮ್ಮ ತಂದೆ ವಾಪಸ್​ ಬಂದಿರುವುದು ನಮಗೆ ಸಂತಸ ತಂದಿದೆ. ನಾವು ಇವರನ್ನು ಮತ್ತೆಲ್ಲಿಗೂ ಕಳುಹಿಸುವುದಿಲ್ಲ” ಎನ್ನುತ್ತಾರೆ ನಾಗರಜಪ್ಪನ ಮಕ್ಕಳು. ಇಷ್ಟು ದಿನ ಇವರು ನಿರಾಶ್ರಿತರ ಶಿಬಿರದಲ್ಲಿದ್ದು, ಮನೆಯವರ ನೆನಪು ಕಾಡಿ ಊರಿಗೆ ನಾಗರಾಜಪ್ಪ ವಾಪಸಾಗಿದ್ದಾರೆ ಎನ್ನಲಾಗಿದೆ. ಆತನೇ ಎಲ್ಲರನ್ನೂ ಗುರುತು ಹಿಡಿದು ಮಾತನಾಡಿಸಿದ ಬಳಿಕ ಅಸಲಿ ನಾಗರಾಜಪ್ಪ ಎಂದು ತಿಳಿದುಬಂದಿದೆ. ಹಾಗಾದರೆ ಮೂರು ತಿಂಗಳ ಹಿಂದೆ ನೆರವೇರಿಸಿದ್ದ ಶವ ಯಾರದು ಎಂಬುದು ಪ್ರಶ್ನೆಯಾಗಿಯೇ ಉಳಿದಿದೆ.

    ಸ್ಕೂಟಿ ನಂಬರ್​ ಪ್ಲೇಟ್​ ಮೇಲೆ ‘SEX’, ಮುಜುಗರಕ್ಕೀಡಾದ ಯುವತಿ ಇದರ ಸಹವಾಸವೇ ಬೇಡ ಅಂತ ಮೂಲೆಗಿಟ್ಟಳು

    ವಿವಾದದ ಸುಳಿಯಲ್ಲಿ ‘ಗರುಡ ಗಮನ ವೃಷಭ ವಾಹನ’ ಸಿನಿಮಾ: ಮಾದಪ್ಪ ಭಕ್ತರಿಂದ ಆಕ್ರೋಶ

    ವೈದ್ಯನ ಕಾಮಪುರಾಣ: ಕಚೇರಿಯಲ್ಲೇ ತಬ್ಕೊಂಡು ಪೀಡಿಸಿದ್ರೂ 9 ಮಹಿಳೆಯರಲ್ಲಿ ಯಾರೊಬ್ಬರೂ ಬಾಯ್ಬಿಟ್ಟಿಲ್ಲ ಏಕೆ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts