3 ತಿಂಗಳ ಹಿಂದೆ ಸತ್ತವ ನಿನ್ನೆ ಬೆಳ್ಳಂಬೆಳಗ್ಗೆ ಗ್ರಾಮಕ್ಕೆ ಬಸ್​ನಲ್ಲಿ ಬಂದಿಳಿದ! ಶವಸಂಸ್ಕಾರ, ತಿಥಿ ಕಾರ್ಯವೂ ನಡೆದಿತ್ತು…

ಮಧುಗಿರಿ: ಮೂರು ತಿಂಗಳ ಹಿಂದೆಯೇ ಮೃತಪಟ್ಟಿದ್ದ ವ್ಯಕ್ತಿಯ ಶವಸಂಸ್ಕಾರ, ತಿಥಿಕಾರ್ಯ ಎಲ್ಲವನ್ನೂ ಕುಟುಂಬಸ್ಥರು ಮಾಡಿದ್ದರು. ಮನೆಯಲ್ಲಿ ಆತನ ಸಾವಿನ ನೋವಲ್ಲೇ ಫೋಟೋಗೆ ಹಾರ ಹಾಕಿ ಪೂಜೆ ಮಾಡುತ್ತಿದ್ದರು. ನಿನ್ನೆ(ಮಂಗಳವಾರ) ಆ ವ್ಯಕ್ತಿ ಗ್ರಾಮದಲ್ಲಿ ದಿಢೀರ್​ ಪ್ರತ್ಯಕ್ಷವಾಗಿ ಕುಟುಂಬಸ್ಥರು ಮತ್ತು ಗ್ರಾಮಸ್ಥರಿಗೆ ಅಚ್ಚರಿ ಮೂಡಿಸಿದ್ದಾನೆ. ಇಂಥದೊಂದು ಅಚ್ಚರಿಯ ಘಟನೆ ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿಯಲ್ಲಿ ನಡೆದಿದೆ. ಮೃತಪಟ್ಟಿದ್ದಾರೆ ಎಂದೇ ಭಾವಿಸಲಾಗಿದ್ದ ಕೊಡಿಗೇನಹಳ್ಳಿ ನಾಗರಾಜಪ್ಪ ಎಂಬುವರೇ ಮಂಗಳವಾರ ಬೆಳಗ್ಗೆ ಗ್ರಾಮಕ್ಕೆ ಬಸ್​ನಲ್ಲಿ ಬಂದಿಳಿದು ಅಚ್ಚರಿ ಮೂಡಿಸಿದವರು. ಮಧುಗಿರಿ ತಾಲೂಕು … Continue reading 3 ತಿಂಗಳ ಹಿಂದೆ ಸತ್ತವ ನಿನ್ನೆ ಬೆಳ್ಳಂಬೆಳಗ್ಗೆ ಗ್ರಾಮಕ್ಕೆ ಬಸ್​ನಲ್ಲಿ ಬಂದಿಳಿದ! ಶವಸಂಸ್ಕಾರ, ತಿಥಿ ಕಾರ್ಯವೂ ನಡೆದಿತ್ತು…