ಮಳವಳ್ಳಿ(ಮಂಡ್ಯ): ಮಳವಳ್ಳಿ ಪಟ್ಟಣದ ಮೈಸೂರು ರಸ್ತೆಯ ಕುಕ್ಕುಟ ಸಂವರ್ಧನಾ ಕೇಂದ್ರದ ಸಮೀಪ ಗುರುವಾರ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡಿದ್ದ ಮೂವರು ಕಾಲೇಜು ವಿದ್ಯಾರ್ಥಿಗಳ ಪೈಕಿ ಓರ್ವನ ಸ್ಥಿತಿ ಚಿಂತಾಜನಕವಾಗಿದೆ.
ಮಳವಳ್ಳಿ ಪಟ್ಟಣದ ಶಾಂತಿ ಕಾಲೇಜಿನ ಬಿಕಾಂ ಮೊದಲ ವರ್ಷದ ವಿದ್ಯಾರ್ಥಿಗಳಾದ ಶರತ್, ಶಶಾಂಕ್, ಸುದರ್ಶನ್ ಕಾಲೇಜು ಮುಗಿಸಿ ಮನೆಗೆ ತೆರಳಲೆಂದು ಬಸ್ ನಿಲ್ದಾಣದ ಕಡೆಗೆ ನಡೆದುಕೊಂಡು ಹೋಗುತ್ತಿದ್ದರು. ಮೈಸೂರು ಕಡೆಯಿಂದ ವೇಗವಾಗಿ ಬಂದ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದಿತ್ತು. ಅಪಘಾತದಲ್ಲಿ ಗಂಭೀರ ಗಾಯಗೊಂಡ ಮೂವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತಾದರೂ ಶರತ್ ಎಂಬಾತನಿಗೆ ತೀವ್ರ ರಕ್ತ ಸ್ರಾವವಾಗಿ ಚಿಂತಾಜನಕ ಸ್ಥಿತಿಗೆ ತಲುಪಿದ್ದರಿಂದ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈತ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದು, ಕೋಮಾದಲ್ಲಿದ್ದಾನೆ.
ಮಳವಳ್ಳಿ ತಾಲೂಕಿನ ರಾಗಿಬೊಮ್ಮನಹಳ್ಳಿ ಗ್ರಾಮದ ಶರತ್ನ ಸುದ್ದಿ ಕೇಳಿದ ಪ್ರತಿಯೊಬ್ಬರೂ ವಿಧಿಗೆ ಹಿಡಿಶಾಪ ಹಾಕದೆ ಇರಲಾರರು. ರಾಗಿಬೊಮ್ಮನಹಳ್ಳಿ ಗ್ರಾಮದ ಶಿವಕುಮಾರ್ ಮತ್ತು ಗೀತಾ ದಂಪತಿ ಪುತ್ರ ಶರತ್, ಡಿ.23ರಂದು 19 ವರ್ಷ ತುಂಬಿ 20ನೇ ವಸಂತಕ್ಕೆ ಕಾಲಿಟ್ಟಿದ್ದ. ಕಾಲೇಜಿನಲ್ಲಿ ಸಹಪಾಠಿಗಳೆಲ್ಲರೂ ಶರತ್ಗೆ ಶುಭ ಕೋರಿದ್ದರು. ತರಗತಿ ಮುಗಿದ ಬಳಿಕ ಖುಷಿಯಿಂದಲೇ ಸಹಪಾಠಿಗಳ ಜತೆ ಶರತ್ ವಾಪಸ್ ಮನೆಗೆ ಬರುತ್ತಿದ್ದ. ರಸ್ತೆಬದಿ ತಮ್ಮ ಪಾಡಿಗೆ ತಾವು ನಡೆದುಕೊಂಡು ಹೋಗುತ್ತಿದ್ದವರಿಗೆ ಕಾರೊಂದು ಡಿಕ್ಕಿ ಹೊಡೆದು ಶರತ್ನನ್ನು ಸಾವಿನ ದವಡೆಗೆ ನೂಕಿದೆ. ಸದ್ಯ ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಶರತ್ ಚೇತರಿಕೆಗಾಗಿ ಹೆತ್ತರವು, ಸ್ನೇಹಿತರು, ಕಾಲೇಜು ಸಿಬ್ಬಂದಿ, ಗ್ರಾಮಸ್ಥರು, ಸಂಬಂಧಿಕರು ಪ್ರಾರ್ಥಿಸಿದ್ದಾರೆ. ಮಗನ ಉಳಿವಿಗಾಗಿ ಪಾಲಕರು ಕಣ್ಣೀರಿಡುತ್ತಾ, ದೇವರಿಗೂ ಪರಿಪರಿಯಾಗಿ ಬೇಡಿಕೊಳ್ಳುತ್ತಿರುವ ದೃಶ್ಯ ಮನಕಲಕುವಂತೆ ಮಾಡಿದೆ. ಆದಷ್ಟು ಬೇಗ ಶರತ್ ಗುಣಮುಖವಾಗಿ ಬರಲಿ.
ಅಪಘಾತವೆಸಗಿದ ನಂತರ ಕಾರು ಚಾಲಕ ಪರಾರಿಯಾಗಿದ್ದು, ಈತ ಪೊಲೀಸ್ ಇಲಾಖೆ ಸಿಬ್ಬಂದಿ ಎನ್ನಲಾಗಿದೆ. ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾದರೂ ಪೊಲೀಸರು ರಾತ್ರಿವರೆಗೂ ಯಾವುದೇ ಕ್ರಮ ವಹಿಸಲಿಲ್ಲವೆಂದು ಜಿಪಂ ಮಾಜಿ ಸದಸ್ಯ ಆರ್.ಎನ್.ವಿಶ್ವಾಸ್ ಆರೋಪಿಸಿದ್ದಾರೆ. ಆರೋಪಿ ಇಲಾಖೆ ಸಿಬ್ಬಂದಿಯಾದ ಕಾರಣ ಪೊಲೀಸರು ಮೌನ ವಹಿಸಿದ್ದಾರೆ ಎಂದು ದೂರಿದ್ದಾರೆ.
ಜೆಡಿಎಸ್ ಮುಖಂಡನ ಪುತ್ರನ ಆತ್ಮಹತ್ಯೆ ಕೇಸ್ಗೆ ಟ್ವಿಸ್ಟ್! ಲೇಡಿ ಎಸ್ಐ ಜತೆಗಿನ ಲವ್ವಿಡವ್ವಿಯೇ ಮುಳುವಾಯ್ತಾ?
ಊಟಕ್ಕೆಂದು ಹೋದವರು ವಾಪಸ್ ಬಂದದ್ದು ಹೆಣವಾಗಿ… ಅಯ್ಯೋ ವಿಧಿಯೇ ನೀನೇಷ್ಟು ಕ್ರೂರಿ?
ನಂಜನಗೂಡಲ್ಲಿ ಅಪ್ರಾಪ್ತನ ಜತೆ 3 ಮಕ್ಕಳ ತಾಯಿ ಲವ್ವಿಡವ್ವಿ! ಇವಳ ಆಸೆ ಕೇಳಿದ್ರೆ ಬೆಚ್ಚಿಬೀಳ್ತೀರಿ