ಮಂಡ್ಯ: ನಗರಸಭೆ ಸ್ಥಾಯಿ ಸಮಿತಿಯ ಮಾಜಿ ಅಧ್ಯಕ್ಷರೊಬ್ಬರ ಮಗಳು ಬಾಲ ಮಂದಿರದಲ್ಲಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ಆಕೆ ಸಾವಿಗೂ ಮುನ್ನ ಬರೆದಿಟ್ಟಿದ್ದ ಡೆತ್ನೋಟ್ ಬಾಲ ಮಂದಿರದಲ್ಲಿ ಪತ್ತೆಯಾಗಿದ್ದು, ಕುಖ್ಯಾತ ರೌಡಿ ಅಶೋಕ್ ಪೈ ಹೆಸರನ್ನ ಬಾಲಕಿ ಅದರಲ್ಲಿ ನಮೂದಿಸಿದ್ದಾಳೆ.
ಮಂಡ್ಯ ನಗರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಶಿವಲಿಂಗು ಅವರ ಮಗಳು ಮಾನ್ವಿತಾ(17) ಆ.31ರಂದು ಬಾಲ ಮಂದಿರದಲ್ಲಿ ನೇಣಿಗೆ ಶರಣಾಗಿದ್ದಳು.
ಏನಿದು ಪ್ರಕರಣ?: ಮಾನ್ವಿತಾ ಮತ್ತು ಕಲ್ಲಹಳ್ಳಿಯ 17 ವರ್ಷದ ಬಾಲಕ ದರ್ಶನ್ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಈ ವಿಚಾರ ತಿಳಿದ ಶಿವಲಿಂಗು, ಏ.24ರ ರಾತ್ರಿ ಮಗಳ ಪ್ರಿಯಕರನನ್ನು ತನ್ನ ಮನೆಗೆ ಕರೆಸಿಕೊಂಡು ತನ್ನ ಕುಟುಂಬಸ್ಥರೊಂದಿಗೆ ಮಾರಣಾಂತಿಕ ಹಲ್ಲೆ ನಡೆಸಿದ್ದ. ಗಂಭೀರ ಗಾಯಗೊಂಡಿದ್ದ ದರ್ಶನ್, ಏ.25ರಂದು ಮೃತಪಟ್ಟಿದ್ದ. ಈ ಸುದ್ದಿ ಕಾಡ್ಗಿಚ್ಚಿನಂತೆ ಹಬ್ಬಿ ಊರಲ್ಲಿ ಪ್ರಕ್ಷ್ಯುಬ್ಧ ವಾತಾವರಣ ನಿರ್ಮಾಣವಾಗಿತ್ತು. ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಬಾಲಕಿ ತಂದೆ ಶಿವಲಿಂಗು, ತಾಯಿ ಅನುರಾಧ ಸೇರಿದಂತೆ 17 ಜನರ ವಿರುದ್ಧ ಕೇಸ್ ದಾಖಲಾಗಿತ್ತು. ಆರೋಪಿಗಳನ್ನು ಬಂಧಿಸಿ ಪೊಲೀಸರು ಜೈಲಿಗಟ್ಟಿದ್ದರು.
ಬಳಿಕ ಮಾನ್ವಿತಾಳನ್ನು ಮಂಡ್ಯದ ಬಾಲಕಿಯರ ಬಾಲ ಮಂದಿರದಲ್ಲಿ ಇರಿಸಲಾಗಿತ್ತು. ಈ ನಡುವೆ ಅಪ್ಪ-ಅಮ್ಮನ ವಿರುದ್ಧ ಸಾಕ್ಷಿ ಹೇಳುವಂತೆ ರೌಡಿ ಶೀಟರ್ ಅಶೋಕ್ ಪೈ ಬಾಲಕಿ ಮೇಲೆ ಒತ್ತಡ ಹಾಕುತ್ತಿದ್ದ ಎನ್ನಲಾಗಿದೆ. ಪ್ರಿಯಕರನ ಸಾವು, ಹೆತ್ತವರು ಜೈಲು ಸೇರಿದ್ದ ವಿಚಾರದಿಂದ ಮನನೊಂದಿದ್ದ ಬಾಲಕಿ ಖಿನ್ನತೆಗೆ ಒಳಗಾಗಿದ್ದ ಬಾಲಿಕ, ಆ.31ರಂದು ಆತ್ಮಹತ್ಯೆ ಮಾಡಿಕೊಂಡು ಸತ್ತಿದ್ದಾಳೆ. ಇದಕ್ಕೂ ಮುನ್ನ ಬರೆದಿದ್ದ ಡೆತ್ನೋಟ್ನಲ್ಲಿ ಬಾಲಕಿ ತನ್ನ ಮನದ ನೋವನ್ನು ಅಕ್ಷರಕ್ಕಿಳಿಸಿದ್ದು, ಅಪ್ಪ-ಅಮ್ಮ ಹಾಗೂ ಪ್ರಿಯಕರನನ್ನು ಮಿಸ್ ಮಾಡಿಕೊಳ್ಳುತ್ತಿರುವೆ ಎಂದಿದ್ದಾಳೆ. ಅದರಲ್ಲಿ ರೌಡಿ ಅಶೋಕ್ ಪೈ ಹೆಸರು ಕೂಡ ಇದೆ. ಈ ಹಿನ್ನೆಲೆಯಲ್ಲಿ ಅಶೋಕ್ ಪೈನನ್ನು ಪೊಲೀಸರು ಬಂಧಿಸಿದ್ದಾರೆ.
ಮಗಳ ಪ್ರಿಯಕರನ ಕೊಂದು ಜೈಲು ಸೇರಿದ ಅಪ್ಪ-ಅಮ್ಮ! ಎಲ್ಲವನ್ನೂ ಕಳೆದುಕೊಂಡಾಕೆ ಕೊನೆಗೂ ಬದುಕಲಿಲ್ಲ
ಮೈಸೂರು ಗ್ಯಾಂಗ್ ರೇಪ್: ಆ ತಡರಾತ್ರಿ ಪೊಲೀಸರನ್ನೇ ಚಾಕುವಿನಿಂದ ಇರಿಯಲು ಮನ್ನುಗ್ಗಿದ್ದ ಆರೋಪಿ
ಚನ್ನಪಟ್ಟಣದ ಗೌಡಗೆರೆಯ ಚಾಮುಂಡೇಶ್ವರಿ ದೇವಿ ದರ್ಶನ ಪಡೆದ ಕಿಚ್ಚ ಸುದೀಪ್