| ಕೆ.ಎನ್.ರಾಘವೇಂದ್ರ ಮಂಡ್ಯ
ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ ಕಾಂಗ್ರೆಸ್ ಸೇರುತ್ತಾರೆನ್ನುವ ಚರ್ಚೆ ರಾಜಕೀಯ ವಲಯದಲ್ಲಿ ನಡೆಯುತ್ತಿದ್ದು, ಇದಕ್ಕೆ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಯಲ್ಲಿ ನಡೆದ ಅಚ್ಚರಿಯ ಬೆಳವಣಿಗೆಗಳು ಪುಷ್ಟಿ ನೀಡುತ್ತಿವೆ.
ಈ ಬಾರಿಯ ವಿಧಾನ ಪರಿಷತ್ ಚುನಾವಣೆ ಬಿಜೆಪಿಗಷ್ಟೇ ಅಲ್ಲದೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ ಅವರಿಗೆ ಪ್ರತಿಷ್ಠೆಯಾಗಿತ್ತು. ಅದೇ ರೀತಿ ಪ್ರಾರಂಭದಿಂದಲೂ ಚುನಾವಣೆಯನ್ನು ಸಮರ್ಪಕವಾಗಿ ಎದುರಿಸಿದ ಬಿಜೆಪಿ, ಕೊನೇ ಹಂತದಲ್ಲಿ ನಡೆದ ಬೆಳವಣಿಗೆಯಿಂದ ಕಂಗಾಲಾಯಿತು. ಈ ಬಗ್ಗೆ ಪಕ್ಷದೊಳಗೆ ಮತ್ತು ಕಾರ್ಯಕರ್ತರ ನಡುವೆ ನಡೆಯುತ್ತಿರುವ ಚರ್ಚೆ ಸಚಿವ ಕೆ.ಸಿ.ನಾರಾಯಣಗೌಡ ಕಾಂಗ್ರೆಸ್ ಸೇರುವುದು ಖಚಿತ ಎನ್ನುವಂತಿದೆ.
‘ಕೈ’ಗೆ ಬೆಂಬಲ ಕೊಟ್ರಾ? ವಿಧಾನ ಪರಿಷತ್ ಚುನಾವಣೆಯಲ್ಲಿ ಪ್ರಬಲ ಸ್ಪರ್ಧೆ ನೀಡುತ್ತಿದ್ದ ಬಿಜೆಪಿ ಕೊನೇ ಹಂತದಲ್ಲಿ ಎಡವಟ್ಟು ಮಾಡಿಕೊಂಡಿದೆ. ಈ ನಡುವೆ ಪಕ್ಷದೊಳಗೆ ನಡೆದ ಬೆಳವಣಿಗೆಗಳಿಂದ ತೀವ್ರ ಅಸಮಾಧಾನಗಳು ಮುಖಂಡರು ಮತ್ತು ಕಾರ್ಯಕರ್ತರಲ್ಲಿ ಹುಟ್ಟಿಕೊಂಡಿವೆ. ಈ ಹಿನ್ನೆಲೆಯಲ್ಲಿ ಸಚಿವ ಕೆ.ಸಿ.ನಾರಾಯಣಗೌಡ ಸೇರಿದಂತೆ ಬೆಂಬಲಿಗರು ಚುನಾವಣೆಯಲ್ಲಿ ಕಾಂಗ್ರೆಸ್ಗೆ ಬೆಂಬಲ ನೀಡಿದ್ದಾರೆ. ಅದರಂತೆ ಖುದ್ದು ತಮ್ಮ ಬೆಂಬಲಿಗರಿಗೂ ಈ ಸೂಚನೆ ರವಾನಿಸಿದ್ದಾರೆನ್ನುವ ಗಂಭೀರ ಚರ್ಚೆ ನಡೆಯುತ್ತಿದೆ. ಅಂತೆಯೇ ಈ ಚುನಾವಣೆಯನ್ನು ಕೈ ಅಭ್ಯರ್ಥಿ ದಿನೇಶ್ ಗೂಳಿಗೌಡ ಗೆದ್ದರೆ ಕಾಂಗ್ರೆಸ್ ಪ್ರಬಲವಾಗಲಿದೆ ಎನ್ನುವುದು ಗಮನಾರ್ಹ. ಆದರೆ, ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಪಡೆಯುವ ಮತಗಳ ಸಂಖ್ಯೆಯೂ ಆರೋಪ ಸತ್ಯವೋ ಅಥವಾ ಸುಳ್ಳೋ ಎನ್ನುವುದನ್ನು ಬಯಲು ಮಾಡಲಿದೆ.
ಟಾರ್ಗೆಟ್ ಜೆಡಿಎಸ್: ಚುನಾವಣೆ ಮತಯಾಚನೆ ವೇಳೆ ಕೆ.ಸಿ.ನಾರಾಯಣಗೌಡ ಅವರ ಟಾರ್ಗೆಟ್ ಸಂಪೂರ್ಣ ಜೆಡಿಎಸ್ ಆಗಿತ್ತು ಎನ್ನುವುದು ಬಹಿರಂಗ ಸತ್ಯ. ಹೋದ ಕಡೆಯಲ್ಲೆಲ್ಲ ಜೆಡಿಎಸ್ ಹಾಗೂ ಪಕ್ಷದ ನಾಯಕರನ್ನು ಟೀಕಿಸುತ್ತಿದ್ದ ಕೆಸಿಎನ್, ತಮಗೆ ಮೋಸವಾಗಿದೆ ಎನ್ನುತ್ತಿದ್ದರು. ಆದರೆ, ಎಂದಿಗೂ ಕಾಂಗ್ರೆಸ್ ಅನ್ನು ನಿಂದಿಸುವ ಕೆಲಸ ಮಾಡಲಿಲ್ಲ ಎನ್ನುವುದು ಗಮನಾರ್ಹ. ಎಲ್ಲೊ ಆಗೊಮ್ಮೆ, ಹೀಗೊಮ್ಮೆ ಎನ್ನುವಂತೆ ಒಂದೆರಡು ಮಾತನ್ನು ಕಾಂಗ್ರೆಸ್ ವಿರುದ್ಧ ಮಾತನಾಡುತ್ತಿದ್ದರು. ಒಟ್ಟಾರೆ ಕಾಂಗ್ರೆಸ್ ಬಗ್ಗೆ ಮೃದು ಧೋರಣೆ ತೋರುತ್ತಿದ್ದರು. ಈ ನಡೆ ಕೂಡ ಕಾಂಗ್ರೆಸ್ ಸೇರುತ್ತಾರೆನ್ನುವ ಮಾತಿಗೆ ಸಾಥ್ ನೀಡುತ್ತಿದೆ. ಮುಂಬರುವ ವಿಧಾನಸಭಾ ಚುನಾವಣೆಗೆ ದಿಕ್ಸೂಚಿಯಂತಾಗಿದ್ದ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಯೊಳಗೆ ನಡೆದ ಬೆಳವಣಿಗೆ ಹಲವು ಚರ್ಚೆಯನ್ನು ಹುಟ್ಟುಹಾಕಿದೆ. ಆದರೆ, ಇದಕ್ಕೆಲ್ಲ ಮುಂದಿನ ದಿನಗಳಲ್ಲಿ ಉತ್ತರ ಸಿಗಲಿದೆ.
ಬೆತ್ತದಿಂದ ಥಳಿಸಿ ಮಹಿಳೆಯನ್ನ ಕೊಂದ ಪೂಜಾರಿ! ಚನ್ನರಾಯಪಟ್ಟಣದಲ್ಲಿ ನಡೆಯಿತು ಘೋರ ಕೃತ್ಯ
ಪತ್ನಿ ಬಾಣಂತನಕ್ಕೆ ಹೋದಾಗ ಆ ಒಂದು ಫೋಟೋ ತೋರಿಸಿ ನಾದಿನಿ ಮೇಲೆ ನಿರಂತರ ರೇಪ್: ವಿಷ್ಯ ಬಯಲಾಗ್ತಿದ್ದಂತೆ ಹೈಡ್ರಾಮ