ಕಲಬುರಗಿ: ಅಫಜಲಪೂರ ತಾಲೂಕಿನ ಮಾಶಾಳ ಗ್ರಾಮದಲ್ಲಿರುವ ಸಿದ್ದಲಿಂಗೇಶ್ವರ ಸಂಸ್ಥಾನ ಹಿರೇಮಠದ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ.
ಗುರುವಾರ ರಾತ್ರಿ ಮಠದ ಕಿಟಕಿ ಮತ್ತಿತರ ಕಡೆ ಕಲ್ಲು ತೂರಿದ ಕಿಡಿಗೇಡಿಗಳು, ಮಠದ ಕೇದಾರ ಶ್ರೀಗಳ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ.
ಡಿ.28 ರಂದು ಕಲಬುರಗಿಯಲ್ಲಿ ಹಿಂದು ಜಾಗೃತಿ ಸೇನೆ ಸಂಘಟನೆಯಿಂದ ಆಯೋಜನೆ ಮಾಡಿದ್ದ ಕಾರ್ಯಕ್ರಮದಲ್ಲಿ ಲವ್ ಜಿಹಾದ್ ಮತ್ತು ಗೋ ಹತ್ಯೆ ನಿಷೇಧ ಕುರಿತು ಶ್ರೀ ಕೇದಾರ ಸ್ವಾಮೀಜಿ ಮಾತನಾಡಿದ್ದರು. ಈ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ಮಠದ ಮೇಲೆ ದಾಳಿ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಅಫಜಲಪೂರ ಪೊಲೀಸರರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಲೋನ್ ಬಾಕಿ ಇದೆ ಎಂದು ಕರೆ ಬಂದ್ರೆ ಸತ್ತು ಹೋದ ಅಂತೇಳಿ… ಡೆತ್ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ