More

    ಆ.25ರಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಾಮೂಹಿಕ ವಿವಾಹ

    ಸುಬ್ರಹ್ಮಣ್ಯ: ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯಲ್ಲಿರುವ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆ.25ರಂದು ಸರಳ ಸಾಮೂಹಿಕ ವಿವಾಹ ನಡೆಯಲಿದೆ.

    ಅಂದು ಬೆಳಗ್ಗೆ 9ರಿಂದ 9.50ರ ವರೆಗಿನ ಕನ್ಯಾ ಲಗ್ನ ಮುಹೂರ್ತದಲ್ಲಿ ಸಾಮೂಹಿಕ ವಿವಾಹ ನಡೆಯಲಿದ್ದು, ದಾಂಪತ್ಯ ಜೀವನಕ್ಕೆ ಕಾಲಿಡಲು ಇಚ್ಚಿಸುವವರು ದೇವಳ ಕಚೇರಿಯಿಂದ ಅರ್ಜಿ ಪಡೆಯಬಹುದು. ಸರಳ ಸಾಮೂಹಿಕ ವಿವಾಹವಾಗುವ ವರನಿಗೆ ದೇವಳದಿಂದ 5 ಸಾವಿರ ರೂ. ಹಾಗೂ ವಧುವಿಗೆ 10 ಸಾವಿರ ರೂ. ಪ್ರೋತ್ಸಾಹಧನ ನೀಡಲಾಗುವುದು. 40 ಸಾವಿರ ರೂ. ಮೌಲ್ಯದಲ್ಲಿ ವಧುವಿಗೆ ಚಿನ್ನದ ತಾಳಿ, ಎರಡು ಚಿನ್ನದ ಗುಂಡನ್ನು ದೇವಾಲಯದಿಂದ ಭರಿಸಲಾಗುವುದು. ವಧು-ವರರು ಮತ್ತು ಅವರ ಬಂಧುಗಳಿಗೆ, ಸಾರ್ವಜನಿಕರಿಗೆ ಊಟೋಪಚಾರ, ಅಗತ್ಯ ವ್ಯವಸ್ಥೆಗಳನ್ನು ದೇವಳದಿಂದ ಮಾಡಲಾಗುವುದು.

    ವಧುವಿಗೆ ಕಂದಾಯ ಇಲಾಖೆ ವತಿಯಿಂದ ಆದರ್ಶ ವಿವಾಹ ಯೋಜನೆಯಡಿ 10 ಸಾವಿರ ರೂ. ನಿಶ್ಚಿತ ಠೇವಣಿ ಸೌಲಭ್ಯ ಒದಗಿಸಲಾಗುವುದು. ವಿವಾಹವಾಗುವ ಪರಿಶಿಷ್ಟ ಜಾತಿಯ ಜೋಡಿಗೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸರಳ ವಿವಾಹ ಯೋಜನೆಯಡಿ 50 ಸಾವಿರ ರೂ. ಒದಗಿಸಲಾಗುವುದು.

    ವಧು-ವರರು ನಿಗದಿತ ದಾಖಲೆಗಳೊಂದಿಗೆ ಆ.4ರೊಳಗೆ ಅರ್ಜಿ ಸಲ್ಲಿಸಬೇಕು. ಆ.8ರಂದು ನೋಂದಾಯಿತ ವಧು-ವರರ ವಿವರಗಳನ್ನು ದೇವಳದಲ್ಲಿ ಪ್ರಕಟಿಸಲಾಗುವುದು. ಆ.13ರಂದು ಆಕ್ಷೇಪಣೆ ಸಲ್ಲಿಸಲು ಕೊನೆಯ ದಿನಾಂಕ. ಆ.15ರಂದು ವಧು-ವರರ ಅಂತಿಮ ಪಟ್ಟಿ ಪ್ರಕಟಿಸಲಾಗುವುದು. ಮಾಹಿತಿಗೆ 08257-281224, 236200, 281700 ಸಂಪರ್ಕಿಸಬಹುದು. ಅಥವಾ ಕಚೇರಿ ವೇಳೆಯಲ್ಲಿ ಖುದ್ದಾಗಿ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದು.

    ಅಗತ್ಯ ದಾಖಲೆಗಳು: ವಧು-ವರರು ತಮ್ಮ ಪೂರ್ಣ ವಿಳಾಸದೊಂದಿಗೆ ಜನನ ದಿನಾಂಕ ದೃಢೀಕರಿಸುವ ಶಾಲಾ ದೃಢಪತ್ರ ಪ್ರತಿ, ಪಾಸ್‌ಪೋರ್ಟ್ ಅಳತೆಯ 2 ಫೋಟೋ, ಆಧಾರ್ ಕಾರ್ಡ್, ರೇಷನ್ ಕಾರ್ಡ್, ವಧು-ವರರ ಬ್ಯಾಂಕ್ ಖಾತೆ ಸಂಖ್ಯೆಯ ದಾಖಲೆ ಪ್ರತಿ, ಅವಿವಾಹಿತರು ಎಂಬುದಾಗಿ ಪಂಚಾಯಿತಿಯಿಂದ ಅಥವಾ ಸಂಬಂಧಪಟ್ಟ ಸರ್ಕಾರಿ ಇಲಾಖಾಧಿಕಾರಿಗಳಿಂದ ದೃಢೀಕರಣ ಪತ್ರವನ್ನು ಅರ್ಜಿಯೊಂದಿಗೆ ಲಗತ್ತಿಸಬೇಕು.

    ಮಂಗಳೂರು-ಬೆಂಗಳೂರು ನಡುವೆ ವಾರದಲ್ಲಿ ಮೂರು ದಿನ ವಿಶೇಷ ರೈಲು ಸಂಚಾರ

    ಯುವಕನೆಂದು ಮಂಗಳಮುಖಿಯನ್ನು ಪ್ರೀತಿಸಿದ ಬಂಟ್ವಾಳ ಯುವತಿ! 4 ವರ್ಷದ ಬಳಿಕ ಸತ್ಯ ಹೊರಬಿದ್ದದ್ದೇ ರೋಚಕ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts