ಬೆಂಗಳೂರು: ಕರೊನಾ ಸೋಂಕಿಗೆ ಒಳಗಾಗಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಗೆ ಆಸ್ಪತ್ರೆಯಲ್ಲಿ ಹಾಸಿಗೆ ಕೊರತೆಯಾಗಿಲ್ಲ. ಈ ಸಂಬಂಧ ಇಲ್ಲದ ಕಥೆ ಕಟ್ಟುವುದು ಬೇಡ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಕಿಡಿಕಾರಿದರು.
ವಿಕಾಸ ಸೌಧದಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳ ಜತೆ ವಿಡಿಯೋ ಸಂವಾದದಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸುಧಾಕರ್, ಮಣಿಪಾಲ್ ಹಾಗೂ ಅಪೋಲೋ ಆಸ್ಪತ್ರೆಗಳಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ದಾಖಲಿಸಿಕೊಳ್ಳುವ ವ್ಯವಸ್ಥೆ ಮಾಡಲಾಗಿದೆ. ಈ ಬಗ್ಗೆ ನಾನೇ ಖುದ್ದಾಗಿ ಅವರೊಂದಿಗೆ ಮಾತನಾಡಿರುವೆ, ನಿರಂತರ ಸಂಪರ್ಕದಲ್ಲಿರುವೆ ಎಂದರು.
ಮಾಜಿ ಸಿಎಂ ಎಚ್ಡಿಕೆಗೆ ಆಸ್ಪತ್ರೆಯಲ್ಲಿ ಬೆಡ್ ಸಿಕ್ಕಿಲ್ಲವೆಂದು ಜೆಡಿಎಸ್ ಮುಖಂಡರೇ ಹೇಳಿದ್ದಾರೆ ಎಂದು ಪತ್ರಕರ್ತರು ಗಮನಸೆಳೆದಾಗ ಸುಧಾಕರ್ ಕೇಳಿಯೂ ಕೇಳಿಸಿಕೊಳ್ಳದವರಂತೆ ಹೊರಟುಬಿಟ್ಟರು.
ಇತ್ತ ಹಲಗೆ ವಡೆರಹಳ್ಳಿ ಡಿನೋಟಿಫಿಕೇಷನ್ ಪ್ರಕರಣ ಸಂಬಂಧ ವಿಡಿಯೋ ಕಾನ್ಫರೆನ್ಸ್ ಮೂಲಕವೇ ಖಾಸಗಿ ಹೋಟೆಲ್ನಿಂದ ಕೋರ್ಟ್ನ ವಿಚಾರಣೆಗೆ ಕುಮಾರಸ್ವಾಮಿ ಹಾಜರಾದರು. ಇಂದು ವಿಚಾರಣೆಗಾಗಿ ಕೋರ್ಟ್ಗೆ ಎಚ್ಡಿಕೆ ಹಾಜರಾಗಬೇಕಿತ್ತು. ಕರೊನಾ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರ್ ಆಗಿದ್ದರು. ಮುಂದಿನ ತಿಂಗಳಿಗೆ ವಿಚಾರಣೆ ಮುಂದೂಡಿ ಕೋರ್ಟ್ ಆದೇಶಿಸಿದೆ.
ಕಾಡ್ಗಿಚ್ಚಿನಲ್ಲಿ ಸುಟ್ಟುಕರಕಲಾಗಿದ್ದ ವ್ಯಕ್ತಿ ಪ್ರಕರಣ: ಬ್ಯಾನರ್ ಕೊಟ್ಟ ಸುಳಿವಿಂದ ಬಯಲಾಯ್ತು ನಿಗೂಢ ರಹಸ್ಯ