ಮೈಸೂರು: ಮೈಸೂರು ವಿವಿ ಉತ್ತರ ಪತ್ರಿಕೆ ಅದಲು-ಬದಲು ಹಗರಣಕ್ಕೆ ಕುಮ್ಮಕ್ಕು ನೀಡಿದ ಆರೋಪದಡಿ ಮಂಡಿ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ನಾರಾಯಣಸ್ವಾಮಿ ಸೇರಿದಂತೆ ಐವರನ್ನು ಪೊಲೀಸರನ್ನು ಅಮಾನತು ಮಾಡಲಾಗಿದೆ.
ಏ. 15 ಮತ್ತು 17 ರಂದು ಬಿಎಸ್ಸಿ ಕೆಮಿಸ್ಟ್ರಿ ಪರೀಕ್ಷೆ ನಡೆದಿತ್ತು. ಉತ್ತರ ಪತ್ರಿಕೆಗಳನ್ನು ವಿವಿ ಹಂಗಾಮಿ ನೌಕರರು ಹಾಗೂ ಒಬ್ಬ ಗುಮಾಸ್ತ ಕಳ್ಳತನ ಮಾಡಿ ಏ.21 ರಂದು ಮಂಡಿ ಮೊಹಲ್ಲಾ ವ್ಯಾಪ್ತಿಯ ಲಾಡ್ಜ್ನಲ್ಲಿ ಕೆಲ ವಿದ್ಯಾರ್ಥಿಗಳ ಉತ್ತರ ಪತ್ರಿಕೆಯನ್ನ ಬದಲು ಮಾಡುತ್ತಿದ್ದರು. ಈ ವೇಳೆ ಮಂಡಿ ಇನ್ಸ್ಪೆಕ್ಟರ್ ನಾರಾಯಣಸ್ವಾಮಿ ನೇತೃತ್ವದ ತಂಡ ದಾಳಿ ಮಾಡಿತ್ತಾದರೂ ಅಕ್ರಮ ತಡೆಯುವ ಬದಲು ಹಣ ಪಡೆದು ಪ್ರಕರಣ ಮುಚ್ಚಿಹಾಕಲು ಪ್ರಯತ್ನಿಸಿದೆ. ಈ ಪ್ರಕರಣದಲ್ಲಿ ಭಾಗಿಯಾದ ಮಹಾರಾಣಿ ಕಾಲೇಜಿನ ಅಟೆಂಡರ್ ಮಹಮ್ಮದ್ ನಿಸಾರ್, ವಿವಿ ಬಂಡಲ್ ಸಾಗಿಸುವ ಗುತ್ತಿಗೆ ನೌಕರ ರಾಕೇಶ್, ವಿದ್ಯಾರ್ಥಿಗಳಾದ ಚಂದನ್, ಚೇತನ್, ಬ್ಲೂ ಡೈಮಂಡ್ ಲಾಡ್ಜ್ ಮಾಲೀಕ, ಇನ್ಸ್ಪೆಕ್ಟರ್ ನಾರಾಯಣಸ್ವಾಮಿ ಮತ್ತು ಇವರ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ನಗರ ಪೊಲೀಸ್ ಕಮಿಷನರ್ಗೆ ಸೋಮಸುಂದರಂ ಎಂಬುವವರು ದೂರು ನೀಡಿದ್ದರು. ಇದನ್ನೂ ಓದಿರಿ ಯಾರಿಗೂ ತಿಳಿಯದಂತೆ ಪ್ರೇಯಸಿಯನ್ನ ಮನೆಯಲ್ಲೇ 10 ವರ್ಷ ಅಡಗಿಸಿಟ್ಟಿದ್ದ ಪ್ರಿಯಕರ! ಆ ಕೋಣೆಯ ರಹಸ್ಯ ಬಯಲಾಗಿದ್ದೇ ರೋಚಕ
ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ, ತನಿಖೆಯನ್ನು ನಿಷ್ಪಕ್ಷಪಾತವಾಗಿ ಮಾಡಲು ಇನ್ಸ್ಪೆಕ್ಟರ್ ನಾರಾಯಣಸ್ವಾಮಿ ಸೇರಿ ಐವರು ಪೊಲೀಸರನ್ನು ಅಮಾನತು ಮಾಡಿದ್ದಾರೆ. ನಾರಾಯಣಸ್ವಾಮಿ ಸೇರಿ 9 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ. (ದಿಗ್ವಿಜಯ ನ್ಯೂಸ್)
ಬೈಕ್ ಮೇಲಿದ್ದ ಹೆಲ್ಮೆಟ್ ನುಂಗಿದ ಆನೆ! ಪಾಪ ಹಸಿವಾಗಿತ್ತೇನೋ… ಸಖತ್ ವೈರಲ್ ಆಗ್ತಿದೆ ಈ ವಿಡಿಯೋ
ಯಾರಿಗೂ ತಿಳಿಯದಂತೆ ಪ್ರೇಯಸಿಯನ್ನ ಮನೆಯಲ್ಲೇ 10 ವರ್ಷ ಅಡಗಿಸಿಟ್ಟಿದ್ದ ಪ್ರಿಯಕರ! ಆ ಕೋಣೆಯ ರಹಸ್ಯ ಬಯಲಾಗಿದ್ದೇ ರೋಚಕ
ಸಿನಿಮಾದಲ್ಲಿ ಆ 37 ಮೆಸೇಜ್ ತೋರಿಸ್ತೀರಾ? ಡಿ.ಕೆ.ರವಿ ಪಾತ್ರ ಮಾಡ್ತೀರಾ ಎಂದು ಆಫರ್ ಕೊಟ್ಟವರಿಗೆ ಚಕ್ರವರ್ತಿ ಪ್ರಶ್ನೆ
ಬಾವಿಗೆ ಹಾರಿ ಪ್ರಾಣಬಿಟ್ಟ ಗಂಡ, ಮನೆಯ ಮೇಲೆ ನೇಣಿಗೆ ಕೊರಳೊಡ್ಡಿದ ಪತ್ನಿ! ಡೆತ್ನೋಟ್ನಲ್ಲಿದೆ ಸಾವಿನ ರಹಸ್ಯ