ಮೈಸೂರು: ಚಾಮುಂಡಿ ಬೆಟ್ಟದ ತಪ್ಪಲಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ಪ್ರಕ್ರಿಯೆಗೆ ಸಂತ್ರಸ್ತೆ ಅಸಹಕಾರ ನೀಡುತ್ತಿರುವುದು ಪೊಲೀಸರಿಗೆ ತಲೆನೋವಾಗಿದೆ. ಅತ್ತ ಅತ್ಯಾಚಾರ ಪ್ರಕರಣದ ಶಂಕಿತ ಐವರು ಆರೋಪಿಗಳನ್ನು ತಮಿಳುನಾಡಿನ ಸತ್ಯಮಂಗಲದಲ್ಲಿ ಮೈಸೂರು ಪೊಲೀಸರ ತಂಡ ಬಂಧಿಸಿದೆ. ಇಂದು ಆಸ್ಪತ್ರೆಯಿಂದ ಸಂತ್ರಸ್ತೆ ಡಿಸ್ಚಾರ್ಚ್ ಆಗಿದ್ದು, ಪೊಲೀಸರ ಮುಂದೆ ಹೇಳಿಕೆ ಕೊಡಲು ನಿರಾಕರಿಸುತ್ತಿದ್ದಾರೆ.
‘ನಾನು ಯಾವುದೇ ದೂರು ಕೊಡುವುದಿಲ್ಲ. ನನ್ನನ್ನು ಬಿಟ್ಟುಬಿಡಿ’ ಎಂದು ಸಂತ್ರಸ್ತೆ ಹೇಳಿದ್ದಾರೆ. ಆ.25ರ ಸಂಜೆ ಈ ಪ್ರಕರಣ ನಡೆದಿದ್ದು, ಅಂದಿನಿಂದಲೂ ಸಂತ್ರಸ್ತೆ ‘ನನ್ನನ್ನು ಯಾರೂ, ಏನನ್ನೂ ಕೇಳಬೇಡಿ’ ಎನ್ನುತ್ತಿದ್ದಾಳೆ. ಆಕೆಯ ತಂದೆ-ತಾಯಿಯಿಂದಲೂ ನಿರೀಕ್ಷಿತ ನೆರವು ಸಿಗುತ್ತಿಲ್ಲ. ಅವರ ಮನವೊಲಿಕೆಗೆ ಪ್ರಯತ್ನಿಸಿ ಹೈರಾಣಾಗಿರುವ ತನಿಖಾಧಿಕಾರಿಗಳು ಅನಿವಾರ್ಯವಾಗಿ ಸಂತ್ರಸ್ತೆಯ ಸ್ನೇಹಿತನಿಗೆ ದುಂಬಾಲು ಬಿದ್ದಿದ್ದಾರೆ. ಸಂತ್ರಸ್ತೆಯ ಸ್ನೇಹಿತನ ಹೇಳಿಕೆ ಆಧಾರಿಸಿ ಎಫ್ಐಆರ್ನಲ್ಲಿ ದಾಖಲಾಗಿದೆ.
‘ಆ.24ರಂದು ನಾನು ಮತ್ತು ನನ್ನ ಗೆಳತಿ ಇಬ್ಬರೂ ತರಗತಿ ಮುಗಿಸಿಕೊಂಡು ಬೈಕ್ನಲ್ಲಿ ಹೊರಟೆವು. ಅಂದು ಸಂಜೆ 7.25ರಿಂದ 7.30ರ ಸುಮಾರಿಗೆ ಜೆಎಸ್ಎಸ್ ಆಯುರ್ವೇದಿಕ್ ಕಾಲೇಜಿನ ಮುಂದೆ ವಾಟರ್ ಟ್ಯಾಂಕ್ ಬಳಿಯ ಕಚ್ಚಾ ರಸ್ತೆಯಲ್ಲಿ ಹೋದೆವು. ನಾನು ಯಾವಾಗಲೂ ಜಾಗಿಂಗ್ಗೆ ಹೋಗುವ ಸ್ಥಳ ಅದಾಗಿತ್ತು. ಅಲ್ಲಿ ಹೋಗಿ ಬೈಕ್ ನಿಲ್ಲಿಸಿದಾಗ 25-30 ವರ್ಷ ವಯಸ್ಸಿನ 6 ಮಂದಿ ಬಂದರು. ಬಲ ಭಾಗದಿಂದ ಏಕಾಏಕಿ ಬಂದು ದೊಣ್ಣೆಯಿಂದ ನಮ್ಮ ಮೇಲೆ ಹಲ್ಲೆ ಮಾಡಿದರು. ನಂತರ ನನ್ನನ್ನು ತಳ್ಳಿ ನನ್ನ ಗೆಳತಿಯನ್ನು ಪೊದೆಯತ್ತ ಎಳೆದೊಯ್ದರು. ಆ ಗುಂಪಲ್ಲಿ ತೆಳ್ಳಗಿದ್ದ ಯುವಕನೊಬ್ಬ ನನ್ನ ಹಣೆಗೆ ಕಲ್ಲಿನಿಂದ ಹೊಡೆದ. ಆಗ ಪ್ರಜ್ಞೆ ತಪ್ಪಿ ಬಿದ್ದೆ. 15 ನಿಮಿಷದ ನಂತರ ಪ್ರಜ್ಞೆ ಬಂತು. ಆಗ 4 ಜನ ನನ್ನ ಮುಂದೆ ನಿಂತು ನನ್ನ ತಂದೆಗೆ ಫೋನ್ ಮಾಡಿಸಿದರು. 3 ಲಕ್ಷ ರೂಪಾಯಿ ಕೊಡುವಂತೆ ಒತ್ತಾಯಿಸಿದರು. ನಾನು ನನ್ನ ಗೆಳತಿ ಎಲ್ಲಿ? ಎಂದು ಕೇಳಿದೆ. ಅಷ್ಟರಲ್ಲಿ ಯುವಕರಿಬ್ಬರು ಆಕೆಯನ್ನು ಎಳೆದುಕೊಂಡು ಬಂದು ನನ್ನ ಪಕ್ಕದಲ್ಲಿ ಕೂರಿಸಿದರು. ಅವಳು ತೀವ್ರವಾಗಿ ಗಾಯಗೊಂಡು ನಿತ್ರಾಣಗೊಂಡಿದ್ದಳು. ಅವಳಿಗೆ ತರಚಿದ ಗಾಯಗಳಾಗಿದ್ದವು’ ಎಂದು ಸಂತ್ರಸ್ತೆಯ ಸ್ನೇಹಿತ ವಿವರಿಸಿದ್ದಾರೆ. (ದಿಗ್ವಿಜಯ ನ್ಯೂಸ್)
ಮೈಸೂರಲ್ಲಿ ಗ್ಯಾಂಗ್ ರೇಪ್: ಸಂತ್ರಸ್ತೆಯ ಗೆಳೆಯನ ವಿರುದ್ಧವೇ ಕೇಸ್? ಸ್ಫೋಟಕ ತಿರುವು ಕೊಟ್ಟ ತಂದೆ-ಮಗನ ನಡೆ
ನನ್ನನ್ನು ತಳ್ಳಿ ಗೆಳತಿಯನ್ನು ಪೊದೆಯತ್ತ ಎಳೆದೊಯ್ದರು… ಸಂತ್ರಸ್ತೆಯ ಸ್ನೇಹಿತನಿಂದ ಹೊರಬಿತ್ತು ಸ್ಫೋಟಕ ಮಾಹಿತಿ
ಮೈಸೂರು ಘಟನೆ ಬೆನ್ನಲ್ಲೇ ರಾಜ್ಯದಲ್ಲಿ ಮತ್ತೊಂದು ಗ್ಯಾಂಗ್ ರೇಪ್! ಪುಟ್ಟ ಬಾಲಕಿಯನ್ನೂ ಬಿಡಲಿಲ್ಲ ಕಾಮುಕರು