ಮೈಸೂರು: ಎರಡು ವರ್ಷಗಳ ಬಳಿಕ ಈ ಬಾರಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಲು ಭಕ್ತರಿಗೆ ಅವಕಾಶ ಸಿಗಲಿದೆ. ಜುಲೈ 1, 8, 15 ಹಾಗೂ 22ರಂದು ಆಷಾಢ ಶುಕ್ರವಾರದ ಪೂಜೆ ಹಾಗೂ ಜು.20ರಂದು ವರ್ಧಂತಿ ಮಹೋತ್ಸವ ನಡೆಯಲಿದ್ದು, ಆ ದಿನಗಳಲ್ಲಿ ಬೆಟ್ಟಕ್ಕೆ ಹೆಚ್ಚಿನ ಭಕ್ತರು ಆಗಮಿಸುವ ನಿರೀಕ್ಷೆ ಇದೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಈ ಕುರಿತು ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಚಾಮುಂಡಿ ಬೆಟ್ಟದಲ್ಲಿ ಆಷಾಢ ಮಾಸದ ಶುಕ್ರವಾರಗಳಂದು ಜರುಗುವ ವಿಶೇಷ ಪೂಜೆ ಹಾಗೂ ಅಮ್ಮನವರ ವರ್ಧಂತ್ಯುತ್ಸವ ಸಂದರ್ಭದಲ್ಲಿ ಬೆಟ್ಟಕ್ಕೆ ಆಗಮಿಸುವ ಭಕ್ತರಿಗೆ ಯಾವುದೇ ತೊಂದರೆ ಉಂಟಾಗದಂತೆ ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಬಾರಿಯ ಆಷಾಢ ಶುಕ್ರವಾರಗಳು
ಜುಲೈ 1 ಮೊದಲನೇ ಆಷಾಢ ಶುಕ್ರವಾರ
ಜುಲೈ 8 ಎರಡನೇ ಆಷಾಢ ಶುಕ್ರವಾರ
ಜುಲೈ 15 ಮೂರನೇ ಆಷಾಢ ಶುಕ್ರವಾರ
ಜುಲೈ 20 ಅಮ್ಮನವರ ವರ್ಧಂತಿ ಮಹೋತ್ಸವ
ಜುಲೈ 22 ನಾಲ್ಕನೇ ಹಾಗೂ ಕೊನೆಯ ಆಷಾಢ ಶುಕ್ರವಾರ
ಎರಡು ಡೋಸ್ ಹಾಕಿಸಿಕೊಂಡರೆ ಪ್ರವೇಶ: ಕೋವಿಡ್ ಲಸಿಕೆ ಎರಡು ಡೋಸ್ ಹಾಕಿಸಿಕೊಂಡವರಿಗೆ ಮಾತ್ರ ಚಾಮುಂಡಿ ಬೆಟ್ಟಕ್ಕೆ ಪ್ರವೇಶಿಸಲು ಅವಕಾಶ ಕಲ್ಪಿಸಲಾಗುವುದು. ಇಲ್ಲವಾದಲ್ಲಿ 72 ಗಂಟೆಯೊಳಗೆ ಕೋವಿಡ್ ಪರೀಕ್ಷೆ ಮಾಡಿಸಿರುವ ನೆಗೆಟಿವ್ ರಿಪೋರ್ಟ್ ಇರಬೇಕು. ಈ ಸಂಬಂಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಪ್ರಸಾದ್ ಅವರಿಗೆ ಸಚಿವ ಎಸ್.ಟಿ.ಸೋಮಶೇಖರ್ ನಿರ್ದೇಶಿಸಿದ್ದಾರೆ. ಸುರಕ್ಷತೆಯ ದೃಷ್ಟಿಯಿಂದ ಮೆಟ್ಟಿಲು ಮಾರ್ಗದಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಸಲಾಗುವುದು. ಈಗಾಗಲೇ ದೇವಸ್ಥಾನದ ಸುತ್ತಮುತ್ತ ಕ್ಯಾಮರಾ ಅಳವಡಿಸಲಾಗಿದೆ.
ಲಲಿತ್ ಮಹಲ್ ಬಳಿ ಪಾರ್ಕಿಂಗ್: ಇಷ್ಟು ವರ್ಷ ಚಾಮುಂಡಿ ಬೆಟ್ಟಕ್ಕೆ ಬರುವ ಎಲ್ಲ ಖಾಸಗಿ ವಾಹನಗಳನ್ನು ಹೆಲಿಪ್ಯಾಡ್ ಬಳಿ ನಿಲ್ಲಿಸಿ, ಅಲ್ಲಿಂದ ಕೆಎಸ್ಆರ್ಟಿಸಿ ಬಸ್ಗಳ ಮೂಲಕ ತೆರಳುವ ವ್ಯವಸ್ಥೆ ಮಾಡಲಾಗುತ್ತಿತ್ತು. ಈ ಬಾರಿ ಲಲಿತಮಹಲ್ ಬಳಿಯ 18 ಎಕರೆ ಜಾಗದಲ್ಲಿ ಪಾರ್ಕಿಂಗ್ ಸೌಲಭ್ಯ ಕಲ್ಪಿಸಲಾಗಿದೆ. ಅಲ್ಲಿಂದ ಬೆಟ್ಟಕ್ಕೆ ಸಾರ್ವಜನಿಕರನ್ನು ಕೆಆರ್ಎಸ್ಟಿಸಿ ಬಸ್ ಮೂಲಕ ಕರೆದೊಯ್ಯಲಾಗುವುದು. ಇದಕ್ಕಾಗಿ 50 ಬಸ್ ನೀಡುವಂತೆ ಕೆಎಸ್ಆರ್ಟಿಸಿ ಡಿಸಿಗೆ ಸೂಚಿಸಲಾಗಿದೆ. ಭಕ್ತರಿಗೆ ಉಚಿತ ಪ್ರಯಾಣ ಇರುತ್ತದೆ. ಈ ಹಣವನ್ನು ದೇವಸ್ಥಾನದಿಂದ ಭರಿಸಲು ಸೂಚಿಸಲಾಗಿದೆ ಎಂದು ಸಭೆ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.
ಕೋತಿರಾಜ್ ಥರಾ ಸರಸರನೆ ಚಿತ್ರದುರ್ಗ ಕೋಟೆ ಏರಿದ IPS ಅಧಿಕಾರಿ! ಮಂಗ್ಳೂರು ಕಮೀಷನರ್ರ ಸಾಹಸಕ್ಕೆ ಮನಸೋತ ಜನ
ಮೈಸೂರಲ್ಲಿ 2ನೇ ಪತ್ನಿಯ ರುಂಡ-ಮುಂಡ ಕತ್ತರಿಸಿ ಭೀಕರ ಕೊಲೆ! ತಂದೆಯ ಕರಾಳ ಮುಖ ಬಿಚ್ಚಿಟ್ಟ 20 ವರ್ಷದ ಮಗಳು
ಏಕಾಏಕಿ ವಾಹನ ತಡೆಯಂಗಿಲ್ಲ, ಟ್ರಾಫಿಕ್ ಪೊಲೀಸರಿಗೆ DGP ಖಡಕ್ ಸೂಚನೆ: ಎಎಸ್ಐ-ಮುಖ್ಯಪೇದೆ ಅಮಾನತು