ಮೈಸೂರು: ಜೆಡಿಎಸ್ ಮುಖಂಡ ಬೆಳವಾಡಿ ಶಿವಮೂರ್ತಿ ಅವರ ಪುತ್ರ ಪ್ರದೀಪ್ ಆತ್ಮಹತ್ಯೆ ಕೇಸ್ಗೆ ಸ್ಫೋಟಕ ತಿರುವು ಸಿಕ್ಕಿದ್ದು, ಲೇಡಿ ಸಬ್ ಇನ್ಸ್ಪೆಕ್ಟರ್ ಹೆಸರು ತಳುಕು ಹಾಕಿಕೊಂಡಿದೆ.
ನಿನ್ನೆ(ಡಿ.23) ರಾತ್ರಿ ಮರಟಿಕ್ಯಾತನಹಳ್ಳಿಯ ಅಪಾರ್ಟ್ಮೆಂಟ್ನಲ್ಲಿ ಪ್ರದೀಪ್ ನೇಣಿಗೆ ಶರಣಾಗಿದ್ದು, ಈ ಸಾವಿಗೆ ಲೇಡಿ ಸಬ್ ಇನ್ಸ್ಪೆಕ್ಟರ್ ಜತೆಗಿನ ಪ್ರೇಮಪುರಾಣವೇ ಕಾರಣ ಎಂದು ಆಪ್ತ ವಲಯದಲ್ಲಿ ಗುಸುಗುಸು ಶುರುವಾಗಿದೆ.
ಪ್ರದೀಪ್ ತಂದೆ ಬೆಳವಾಡಿ ಶಿವಮೂರ್ತಿ ಅವರು ಮೈಸೂರು ಜಿಲ್ಲಾ ಜೆಡಿಎಸ್ನ ಖಜಾಂಚಿ. ಪ್ರದೀಪ್ ತಾಯಿ ಭಾಗ್ಯ ಶಿವಮೂರ್ತಿ ಅವರು ಮೈಸೂರು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ. ಇನ್ನು ಪ್ರದೀಪ್ಗೆ ಈಗಾಗಲೇ ಮದುವೆ ಆಗಿ ಇಬ್ಬರು ಮಕ್ಕಳಿದ್ದಾರೆ. ಆದರೂ ಲೇಡಿ ಸಬ್ಇನ್ಸ್ಪೆಕ್ಟರ್ ಜತೆ ವಿವಾಹೇತರ ಸಂಬಂಧ ಇತ್ತು ಎನ್ನಲಾಗಿದೆ. ಆ ಲೇಡಿ ಸಬ್ಇನ್ಸ್ಪೆಕ್ಟರ್ಗೂ ಈಗಾಗಲೇ ಬೇರೊಬ್ಬರೊಂದಿಗೆ ಮದುವೆ ಆಗಿದ್ದು, ಒಂದು ಮಗು ಕೂಡ ಇದೆ.
ಪ್ರದೀಪ್ ಮತ್ತು ಲೇಡಿ ಸಬ್ ಇನ್ಸ್ಪೆಕ್ಟರ್ಗೆ ಬೇರೆ ಬೇರೆ ಮದುವೆ ಆಗಿದ್ದರೂ ಇವರಿಬ್ಬರ ನಡುವೆ ವಿವಾಹೇತರ ಸಂಬಂಧ ಇತ್ತಂತೆ. ನಿನ್ನೆ ರಾತ್ರಿ ಇವರಿಬ್ಬರೂ ಭೇಟಿ ಆಗಿದ್ದರಂತೆ. ಆ ವೇಳೆ ಯಾವುದೋ ವಿಚಾರಕ್ಕೆ ಮಾತಿಗೆ ಮಾತು ಬೆಳೆದು ಇಬ್ಬರ ನಡುವೆ ಗಲಾಟೆಯಾಗಿತ್ತು. ಇದರಿಂದ ಬೇಸತ್ತ ಪ್ರದೀಪ್, ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪ್ರದೀಪ್ ಸಾವಿನ ಕುರಿತು ಆಪ್ತ ವಲಯದಲ್ಲಿ ಗುಸುಗುಸು ಕೇಳಿಬರುತ್ತಿದೆ.
ಒಟ್ಟಿನಲ್ಲಿ ಪ್ರದೀಪ್ ಸಾವಿಂದ ಕುಟುಂಬಸ್ಥರು ಕಂಗಾಲಾಗಿದ್ದಾರೆ. ಅಪ್ಪನನ್ನು ಕಳೆದುಕೊಂಡ ಏನೂ ಅರಿಯದ ಪುಟ್ಟ ಮಕ್ಕಳನ್ನ ನೋಡಿದ್ರೆ ಕರುಳು ಚುರ್ ಅನ್ನುತ್ತೆ. (ದಿಗ್ವಿಜಯ ನ್ಯೂಸ್)
ಊಟಕ್ಕೆಂದು ಹೋದವರು ವಾಪಸ್ ಬಂದದ್ದು ಹೆಣವಾಗಿ… ಅಯ್ಯೋ ವಿಧಿಯೇ ನೀನೇಷ್ಟು ಕ್ರೂರಿ?
29 ವರ್ಷದ ಬಳಿಕ ಕಪ್ಪುಕೋಟ್ ಧರಿಸಿ ವಾದ ಮಂಡಿಸಿದ ಎಸ್ಪಿಎಂ! ಕಿಕ್ಕಿರಿದು ತುಂಬಿದ್ದ ಕೋರ್ಟ್ ಹಾಲ್
ನಂಜನಗೂಡಲ್ಲಿ ಅಪ್ರಾಪ್ತನ ಜತೆ 3 ಮಕ್ಕಳ ತಾಯಿ ಲವ್ವಿಡವ್ವಿ! ಇವಳ ಆಸೆ ಕೇಳಿದ್ರೆ ಬೆಚ್ಚಿಬೀಳ್ತೀರಿ