More

    ಯುವತಿ ಜತೆ ಮೈಸೂರಿನ ಲಾಡ್ಜ್​ನಲ್ಲಿ ರೆಡ್​ಹ್ಯಾಂಡ್ ಆಗಿ ಸಿಕ್ಕಿಬಿದ್ದ ಬಿಜೆಪಿ ಮುಖಂಡ!

    ಬೆಂಗಳೂರು: ಮಂಡ್ಯ ಬಿಜೆಪಿ ಮುಖಂಡನ ಹನಿಟ್ರ್ಯಾಪ್​ ಕೇಸ್​ಗೆ ಸ್ಫೋಟಕ ತಿರುವು ಸಿಕ್ಕಿದೆ. ಲಾಡ್ಜ್​ಗೆ ಹೋಗುವ ಮುನ್ನ ಯುವತಿ ಜತೆ ಬಿಜೆಪಿ ಮುಖಂಡ ಮಾತನಾಡಿದ್ದಾನೆ ಎನ್ನಲಾದ ಆಡಿಯೋ ವೈರಲ್​ ಆದ ಬೆನ್ನಲ್ಲೇ ಲಾಡ್ಜ್​ನಲ್ಲಿ ಇವರಿಬ್ಬರೂ ರೆಡ್​ಹ್ಯಾಂಡ್​ ಆಗಿ ಸಿಕ್ಕಿಬಿದ್ದಿರುವ ವಿಡಿಯೋ ಹೊಸ ತಿರುವು ಕೊಟ್ಟಿದೆ.

    ದಕ್ಷಿಣ ಕನ್ನಡ ಮೂಲದ ಜಗನ್ನಾಥ ಶೆಟ್ಟಿ ಮೈಸೂರಿನ ದರ್ಶನ್​ ಲಾಡ್ಜ್​ನಲ್ಲಿ ಯುವತಿ ಜತೆ ರೆಡ್​ಹ್ಯಾಂಡ್​ ಆಗಿ ಸಿಕ್ಕಿಬಿದ್ದಿರುವ ವಿಡಿಯೋ ವೈರಲ್​ ಆಗಿದೆ. ಚಿನ್ನಾಭಾರಣ ವ್ಯಾಪರಿಯಾದ ಇವರು ಬಿಜೆಪಿ ಮುಖಂಡರಾಗಿ ಗುರುತಿಸಿಕೊಂಡಿದ್ದರು. ಇತ್ತೀಚಿಗೆ ಜಗನ್ನಾಥ್​ ಶೆಟ್ಟಿ ನಾಲ್ವರ ವಿರುದ್ಧ ಮಂಡ್ಯ ಪಶ್ಚಿಮ ಪೊಲೀಸ್​ ಠಾಣೆಯಲ್ಲಿ ಹನಿಟ್ರ್ಯಾಪ್​ ಕೇಸ್​ ದಾಖಲಿಸಿದ್ದರು. ಈ ಎಫ್​ಐಆರ್​ ನಲ್ಲಿರುವ ಅಂಶಕ್ಕೂ, ವೈರಲ್​ ಆಗಿರುವ ವಿಡಿಯೋಗೂ ಭಾರೀ ವತ್ಯಾಸವಿದೆ.

    ವಿಡಿಯೋದಲ್ಲಿ ಏನಿದೆ?: ಮೈಸೂರಿನ ದರ್ಶನ್​ ಲಾಡ್ಜ್​ನಲ್ಲಿ ಸಲ್ಮಾ ಎಂಬ ಮಹಿಳೆ ಸೇರಿ ನಾಲ್ವರು ನುಗ್ಗುತ್ತಾರೆ. ಕೋಣೆಯೊಂದರಲ್ಲಿ ಕಾಲೇಜು ಯುವತಿ ಜತೆ ಜಗನ್ನಾಥ್ ಶೆಟ್ಟಿ ರೆಡ್​ಹ್ಯಾಂಡ್​ ಆಗಿ ಸಿಕ್ಕಿಬಿದ್ದಿದ್ದಾರೆ. ಅದೇ ಕೋಣೆಯಲ್ಲಿ ಜಗನ್ನಾಥ್​ ಶೆಟ್ಟಿ ಹೆರಸಲ್ಲಿ ನಕಲಿ ಐಡಿ ಕಾರ್ಡ್​ ಕೂಡ ಸಿಗುತ್ತೆ. ಅದರಲ್ಲಿ ಕಾಲೇಜಿನ ಪ್ರಿನ್ಸಿಪಾಲ್​ ಜಗನ್ನಾಥ್​ ಶೆಟ್ಟಿ ಎಂದಿರುತ್ತೆ. ಇಬ್ಬರಿಗೂ ಏನು ಕೆಲಸ ಎಂದು ಸಲ್ಮಾರ ತಂಡ ಪ್ರಶ್ನಿಸಿದರೆ, ಇವರು ನಮ್ಮ ಪ್ರಿನ್ಸಿಪಾಲ್​. ಟ್ಯೂಷನ್ ಹೇಳಿಸಿಕೊಳ್ಳೋಕೆ ಅಂತ ಇಲ್ಲಿಗೆ ಬಂದೆ, ಅವರಿಗೇನು ಮಾಡಬೇಡಿ ಪ್ಲೀಸ್​… ಎಂದು ಯುವತಿ ಗೋಗರೆಯುತ್ತಾರೆ. ಯುವತಿ ಮತ್ತು ಜಗನ್ನಾಥ್​ ಶೆಟ್ಟಿ ಇಬ್ಬರಿಗೂ ಸಲ್ಮಾ ಗ್ಯಾಂಗ್​ ಥಳಿಸಿದ್ದು, ತಪ್ಪಾಯ್ತು ಬಿಟ್​ಬಿಡಿ ಎಂದು ಜಗನ್ನಾಥ್​ ಕೈಮುಗಿದು ಬೇಡಿದರೂ ಈ ತಂಡ ಬಿಟ್ಟಿಲ್ಲ. ಈ ಎಲ್ಲವನ್ನೂ ಸಲ್ಮಾ ಕಡೆಯವರು ವಿಡಿಯೋ ಮಾಡಿಕೊಂಡಿದ್ದಾರೆ. ಆ ವಿಡಿಯೋ ಇದೀಗ ವೈರಲ್​ ಆಗಿದೆ.

    ಜಗನ್ನಾಥ್​ ದೂರು: ವಿಡಿಯೋ ವೈರಲ್​ ಆಗುವ ಮುನ್ನವೇ ಜಗನ್ನಾಥ್​ ಶೆಟ್ಟಿ ಅವರು ಸ್ಮಲಾ ತಂಡದ ವಿರುದ್ಧ ದೂರು ದಾಖಲಿಸಿದ್ದಾರೆ. ‘ಮಂಗಳೂರಿಗೆ ಹೋಗಲೆಂದ ಮಂಡ್ಯದಲ್ಲಿ ಬಸ್​ಗಾಗಿ ಕಾಯುತ್ತಿದ್ದ ಜಗನ್ನಾಥ್​ ಅವರನ್ನು ಮೈಸೂರಿಗೆ ಡ್ರಾಪ್​ ಕೊಡುವುದಾಗಿ ನಾಲ್ವರು ಕಾರಿನಲ್ಲಿ ಕರೆದೊಯ್ದರು. ನಂತರ ಚಿನ್ನದ ಪರೀಕ್ಷೆಗೆಂದು ಅಪಹರಿಸಿ, ಲಾಡ್ಜ್​ನಲ್ಲಿ ರೋಮ್​ಗೆ ಕರೆದೊಯ್ದು ಯುವತಿ ಜತೆ ವಿಡಿಯೋ ಚಿತ್ರೀಕರಿಸಿಕೊಂಡು 4 ಕೋಟಿ ರೂಪಾಯಿಗೆ ಬೇಡಿಕೆ ಇಟ್ಟರು. ಅಂತಿಮವಾಗಿ 50 ಲಕ್ಷ ರೂ. ಕೊಡಲಾಯಿತು. ಮತ್ತೆ ಹಣಕ್ಕೆ ಬೇಡಿಕೆ ಇಟ್ಟಿದ್ದರಿಂದ, ಬೇಸತ್ತ ಜಗನ್ನಾಥ್​ ಶೆಟ್ಟಿ ಪೊಲೀಸ್​ ಠಾಣೆ ಮೆಟ್ಟಿಲೇರಿದ್ದರು. ಈ ದೂರಿನನ್ವಯ ಸಲ್ಮಾಬಾನು ಎಂಬಾಕೆಯನ್ನು ಪಶ್ಚಿಮ ಠಾಣೆ ಪೊಲೀಸರು ಬಂಧಿಸಿದ್ದಾರೆ.

    ಇಷ್ಟೆಲ್ಲಾ ಆದ ಬಳಿಕ ಅಂದು ಲಾಡ್ಜ್​ನಲ್ಲಿ ನಡೆದ ಕೃತ್ಯದ ವಿಡಿಯೋ ವೈರಲ್​ ಆಗಿದೆ. ಜತೆಗೆ ಲಾಡ್ಜ್​ಗೆ ಹೋಗುವ ಮುನ್ನ ಯುವತಿ ಮತ್ತು ಜಗನ್ನಾಥ್​ ಶೆಟ್ಟಿ ಅವರು ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಕೂಡ ವೈರಲ್​ ಆಗಿದೆ.(ದಿಗ್ವಿಜಯ ನ್ಯೂಸ್​)

     

    ಪ್ರತಿದಿನ ರಾತ್ರಿ ತಡವಾಗಿ ಮನೆಗೆ ಬರ್ತಿದ್ದ ಗಂಡ… ಇದೇ ವಿಚಾರಕ್ಕೆ ನಡೀತು ಘೋರ ದುರಂತ

    ಗೋವಾದಲ್ಲಿ ಭೀಕರ ಅಪಘಾತ: ಕಾರವಾರ ಮೂಲದ ಒಂದೇ ಕುಟುಂಬದ ಮೂವರ ಸಾವು, ಐವರ ಸ್ಥಿತಿ ಗಂಭೀರ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts