ಬೆಂಗಳೂರು: ಮಂಡ್ಯ ಬಿಜೆಪಿ ಮುಖಂಡನ ಹನಿಟ್ರ್ಯಾಪ್ ಕೇಸ್ಗೆ ಸ್ಫೋಟಕ ತಿರುವು ಸಿಕ್ಕಿದೆ. ಲಾಡ್ಜ್ಗೆ ಹೋಗುವ ಮುನ್ನ ಯುವತಿ ಜತೆ ಬಿಜೆಪಿ ಮುಖಂಡ ಮಾತನಾಡಿದ್ದಾನೆ ಎನ್ನಲಾದ ಆಡಿಯೋ ವೈರಲ್ ಆದ ಬೆನ್ನಲ್ಲೇ ಲಾಡ್ಜ್ನಲ್ಲಿ ಇವರಿಬ್ಬರೂ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುವ ವಿಡಿಯೋ ಹೊಸ ತಿರುವು ಕೊಟ್ಟಿದೆ.
ದಕ್ಷಿಣ ಕನ್ನಡ ಮೂಲದ ಜಗನ್ನಾಥ ಶೆಟ್ಟಿ ಮೈಸೂರಿನ ದರ್ಶನ್ ಲಾಡ್ಜ್ನಲ್ಲಿ ಯುವತಿ ಜತೆ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುವ ವಿಡಿಯೋ ವೈರಲ್ ಆಗಿದೆ. ಚಿನ್ನಾಭಾರಣ ವ್ಯಾಪರಿಯಾದ ಇವರು ಬಿಜೆಪಿ ಮುಖಂಡರಾಗಿ ಗುರುತಿಸಿಕೊಂಡಿದ್ದರು. ಇತ್ತೀಚಿಗೆ ಜಗನ್ನಾಥ್ ಶೆಟ್ಟಿ ನಾಲ್ವರ ವಿರುದ್ಧ ಮಂಡ್ಯ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಹನಿಟ್ರ್ಯಾಪ್ ಕೇಸ್ ದಾಖಲಿಸಿದ್ದರು. ಈ ಎಫ್ಐಆರ್ ನಲ್ಲಿರುವ ಅಂಶಕ್ಕೂ, ವೈರಲ್ ಆಗಿರುವ ವಿಡಿಯೋಗೂ ಭಾರೀ ವತ್ಯಾಸವಿದೆ.
ವಿಡಿಯೋದಲ್ಲಿ ಏನಿದೆ?: ಮೈಸೂರಿನ ದರ್ಶನ್ ಲಾಡ್ಜ್ನಲ್ಲಿ ಸಲ್ಮಾ ಎಂಬ ಮಹಿಳೆ ಸೇರಿ ನಾಲ್ವರು ನುಗ್ಗುತ್ತಾರೆ. ಕೋಣೆಯೊಂದರಲ್ಲಿ ಕಾಲೇಜು ಯುವತಿ ಜತೆ ಜಗನ್ನಾಥ್ ಶೆಟ್ಟಿ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಅದೇ ಕೋಣೆಯಲ್ಲಿ ಜಗನ್ನಾಥ್ ಶೆಟ್ಟಿ ಹೆರಸಲ್ಲಿ ನಕಲಿ ಐಡಿ ಕಾರ್ಡ್ ಕೂಡ ಸಿಗುತ್ತೆ. ಅದರಲ್ಲಿ ಕಾಲೇಜಿನ ಪ್ರಿನ್ಸಿಪಾಲ್ ಜಗನ್ನಾಥ್ ಶೆಟ್ಟಿ ಎಂದಿರುತ್ತೆ. ಇಬ್ಬರಿಗೂ ಏನು ಕೆಲಸ ಎಂದು ಸಲ್ಮಾರ ತಂಡ ಪ್ರಶ್ನಿಸಿದರೆ, ಇವರು ನಮ್ಮ ಪ್ರಿನ್ಸಿಪಾಲ್. ಟ್ಯೂಷನ್ ಹೇಳಿಸಿಕೊಳ್ಳೋಕೆ ಅಂತ ಇಲ್ಲಿಗೆ ಬಂದೆ, ಅವರಿಗೇನು ಮಾಡಬೇಡಿ ಪ್ಲೀಸ್… ಎಂದು ಯುವತಿ ಗೋಗರೆಯುತ್ತಾರೆ. ಯುವತಿ ಮತ್ತು ಜಗನ್ನಾಥ್ ಶೆಟ್ಟಿ ಇಬ್ಬರಿಗೂ ಸಲ್ಮಾ ಗ್ಯಾಂಗ್ ಥಳಿಸಿದ್ದು, ತಪ್ಪಾಯ್ತು ಬಿಟ್ಬಿಡಿ ಎಂದು ಜಗನ್ನಾಥ್ ಕೈಮುಗಿದು ಬೇಡಿದರೂ ಈ ತಂಡ ಬಿಟ್ಟಿಲ್ಲ. ಈ ಎಲ್ಲವನ್ನೂ ಸಲ್ಮಾ ಕಡೆಯವರು ವಿಡಿಯೋ ಮಾಡಿಕೊಂಡಿದ್ದಾರೆ. ಆ ವಿಡಿಯೋ ಇದೀಗ ವೈರಲ್ ಆಗಿದೆ.
ಜಗನ್ನಾಥ್ ದೂರು: ವಿಡಿಯೋ ವೈರಲ್ ಆಗುವ ಮುನ್ನವೇ ಜಗನ್ನಾಥ್ ಶೆಟ್ಟಿ ಅವರು ಸ್ಮಲಾ ತಂಡದ ವಿರುದ್ಧ ದೂರು ದಾಖಲಿಸಿದ್ದಾರೆ. ‘ಮಂಗಳೂರಿಗೆ ಹೋಗಲೆಂದ ಮಂಡ್ಯದಲ್ಲಿ ಬಸ್ಗಾಗಿ ಕಾಯುತ್ತಿದ್ದ ಜಗನ್ನಾಥ್ ಅವರನ್ನು ಮೈಸೂರಿಗೆ ಡ್ರಾಪ್ ಕೊಡುವುದಾಗಿ ನಾಲ್ವರು ಕಾರಿನಲ್ಲಿ ಕರೆದೊಯ್ದರು. ನಂತರ ಚಿನ್ನದ ಪರೀಕ್ಷೆಗೆಂದು ಅಪಹರಿಸಿ, ಲಾಡ್ಜ್ನಲ್ಲಿ ರೋಮ್ಗೆ ಕರೆದೊಯ್ದು ಯುವತಿ ಜತೆ ವಿಡಿಯೋ ಚಿತ್ರೀಕರಿಸಿಕೊಂಡು 4 ಕೋಟಿ ರೂಪಾಯಿಗೆ ಬೇಡಿಕೆ ಇಟ್ಟರು. ಅಂತಿಮವಾಗಿ 50 ಲಕ್ಷ ರೂ. ಕೊಡಲಾಯಿತು. ಮತ್ತೆ ಹಣಕ್ಕೆ ಬೇಡಿಕೆ ಇಟ್ಟಿದ್ದರಿಂದ, ಬೇಸತ್ತ ಜಗನ್ನಾಥ್ ಶೆಟ್ಟಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು. ಈ ದೂರಿನನ್ವಯ ಸಲ್ಮಾಬಾನು ಎಂಬಾಕೆಯನ್ನು ಪಶ್ಚಿಮ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಇಷ್ಟೆಲ್ಲಾ ಆದ ಬಳಿಕ ಅಂದು ಲಾಡ್ಜ್ನಲ್ಲಿ ನಡೆದ ಕೃತ್ಯದ ವಿಡಿಯೋ ವೈರಲ್ ಆಗಿದೆ. ಜತೆಗೆ ಲಾಡ್ಜ್ಗೆ ಹೋಗುವ ಮುನ್ನ ಯುವತಿ ಮತ್ತು ಜಗನ್ನಾಥ್ ಶೆಟ್ಟಿ ಅವರು ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಕೂಡ ವೈರಲ್ ಆಗಿದೆ.(ದಿಗ್ವಿಜಯ ನ್ಯೂಸ್)
ಪ್ರತಿದಿನ ರಾತ್ರಿ ತಡವಾಗಿ ಮನೆಗೆ ಬರ್ತಿದ್ದ ಗಂಡ… ಇದೇ ವಿಚಾರಕ್ಕೆ ನಡೀತು ಘೋರ ದುರಂತ
ಗೋವಾದಲ್ಲಿ ಭೀಕರ ಅಪಘಾತ: ಕಾರವಾರ ಮೂಲದ ಒಂದೇ ಕುಟುಂಬದ ಮೂವರ ಸಾವು, ಐವರ ಸ್ಥಿತಿ ಗಂಭೀರ