More

    ಮನೆ ಮುಂದೆ ಮಳೆ ನೀರು ನೋಡುತ್ತಾ ನಿಂತಿದ್ದವ ಕುಟುಂಬಸ್ಥರ ಕಣ್ಣೆದುರೇ ಚರಂಡಿಯಲ್ಲಿ ಕೊಚ್ಚಿಹೋದ!

    ಮೈಸೂರು: ನಗರದಲ್ಲಿ ಭಾನುವಾರ ರಾತ್ರಿ ಗುಡುಗು, ಸಿಡಿಲಿನೊಂದಿಗೆ ಧಾರಾಕಾರ ಮಳೆ ಸುರಿದಿದ್ದು, ಮನೆ ಮುಂದೆ ನಿಂತಿದ್ದ ವ್ಯಕ್ತಿಯೊಬ್ಬ ನೋಡನೋಡುತ್ತಿದ್ದಂತೆ ಚರಂಡಿ ನೀರಲ್ಲಿ ಕೊಚ್ಚಿಕೊಂಡು ಹೋಗಿದ್ದಾನೆ.

    ಸಿದ್ಧಾರ್ಥ ನಗರದ ವಿನಯಮಾರ್ಗದ ನಿವಾಸಿ ಎಂ.ಚಂದ್ರೇಗೌಡ(60) ಮಳೆ ನೀರಲ್ಲಿ ನಾಪತ್ತೆಯಾಗಿದ್ದು, ಹುಡುಕಾಟ ಮುಂದುವರಿದಿದೆ. ಭಾನುವಾರ ರಾತ್ರಿ ಮನೆ ಪಕ್ಕದ ಮೋರಿ ಬಳಿ ನಿಂತು ಮಳೆ ನೀರು ವೀಕ್ಷಣೆ ಮಾಡುತ್ತಿದ್ದ ಚಂದ್ರೇಗೌಡ, ಕಾಲುಜಾರಿ ಮೋರಿಗೆ ಬಿದ್ದು ಕೊಚ್ಚಿಕೊಂಡು ಹೋಗಿದ್ದಾರೆ. ಮೈಸೂರಿನ ಕಾರಂಜಿ ಕೆರೆಗೆ ಸಂಪರ್ಕ ಕಲ್ಪಿಸುವ ಕಾಲುವೆ ಇದಾಗಿದ್ದು, ಚಂದ್ರೇಗೌಡ ಇದುವರೆಗೂ ಪತ್ತೆಯಾಗಿಲ್ಲ. ಸಾವಿನ ಶಂಕೆ ವ್ಯಕ್ತವಾಗಿದೆ.

    ಮೈಸೂರಲ್ಲಿ ಭಾನುವಾರ ಸಂಜೆ ಮೋಡ ಕವಿದ ವಾತಾವರಣ ಕಾಣಿಸಿಕೊಂಡು ಮಳೆಯ ಮುನ್ಸೂಚನೆ ನೀಡಿತ್ತು. ರಾತ್ರಿ 9ರ ನಂತರ ಗುಡುಗು, ಸಿಡಿಲಿನೊಂದಿಗೆ ಜೋರು ಮಳೆ ಸುರಿಯಲು ಪ್ರಾರಂಭಿಸಿತು. ಮಳೆಯಿಂದ ನಗರದ ಪ್ರಮುಖ ರಸ್ತೆಗಳಲ್ಲಿ ಭಾರಿ ಪ್ರಮಾಣದಲ್ಲಿ ನೀರು ಹರಿದು ವಾಹನ ಸಂಚಾರಕ್ಕೆ ಅಡ್ಡಿ ಉಂಟಾಯಿತು. ದ್ವಿಚಕ್ರ ವಾಹನ ಸವಾರರು ಮನೆಗೆ ತೆರಳಲು ಸಮಸ್ಯೆ ಎದುರಿಸಿದರು.

    ಗೆಳೆತಿಯರೊಂದಿಗೆ ಮಡಿಕೇರಿ ಪ್ರವಾಸಕ್ಕೆ ಬಂದಿದ್ದ ಯುವತಿ ಸಾವು! ಹೋಂ ಸ್ಟೇನಲ್ಲಿ ಆಗಿದ್ದೇನು?

    ಒಂದೇ ಕುಟುಂಬದ ಐವರು ಆತ್ಮಹತ್ಯೆ: ಮನೆಯ ದೇವರ ಫೋಟೋ ಹಿಂದಿತ್ತು ಮನಕಲಕುವ ದೃಶ್ಯ

    ನನ್ನನ್ನು ಸಾಯಿಸಿ ಬಿಡ್ತಾರೆ ಬೇಗ ಬಾ.. ಎಂದು ಕಣ್ಣೀರಿಟ್ಟ ಪ್ರಿಯಕರ, ಆಕೆ ಬರುವಷ್ಟರಲ್ಲಿ ಶವವೂ ಇರಲಿಲ್ಲ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts