More

    ಟಿ.ನರಸೀಪುರದಲ್ಲಿ ತಾಯಿ-ಮಕ್ಕಳ ದುರಂತ ಅಂತ್ಯ: ಬಾಳಿ ಬದುಕಬೇಕಿದ್ದವರನ್ನ ಸಾವಿನಕೂಪಕ್ಕೆ ದೂಡಿದ್ದೇನು?

    ಮೈಸೂರು: ಎರಡು ಪುಟ್ಟ ಕಂದಮ್ಮಗಳಿಗೂ ನೇಣುಬಿಗಿದು ಬಳಿಕ ತಾಯಿಯೂ ನೇಣಿಗೆ ಕೊರಳೊಡ್ಡಿ ದುರಂತ ಅಂತ್ಯಕಂಡ ಧಾರುಣ ಘಟನೆ ಟಿ.ನರಸೀಪುರ ತಾಲೂಕಿನ ರಾಮೇಗೌಡನಪುರ ಗ್ರಾಮದಲ್ಲಿ ಸಂಭವಿಸಿದೆ.

    ಮಾವಿನಹಳ್ಳಿ ಗ್ರಾಮದ ನಿಂಗರಾಜು ಅವರ ಪತ್ನಿ ಸರೋಜ(32) ಮತ್ತು ಇವರ ಇಬ್ಬರು ಮಕ್ಕಳು ಮೃತ ದುರ್ದೈವಿಗಳು. ಇಬ್ಬರು ಮಕ್ಕಳೊಂದಿಗೆ ಕೆಲ ದಿನಗಳ ಹಿಂದೆ ಗಂಡನ ಮನೆಯಿಂದ ಸ್ವಗ್ರಾಮ ರಾಮೇಗೌಡನಪುರಕ್ಕೆ ಆಗಮಿಸಿದ್ದರು.

    ಸೋಮವಾರ ಮನೆಯಲ್ಲಿ ಯಾರೂ ಇಲ್ಲದ ವೇಳೆ, ಎರಡು ಮಕ್ಕಳ ಜೊತೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ತಾಯಿ ಮತ್ತು ಮಕ್ಕಳ ಮೃತದೇಹಗಳನ್ನು ಒಟ್ಟಿಗೆ ಮಲಗಿಸಿದ್ದ ದೃಶ್ಯ ಕರುಳು ಹಿಂಡುವಂತಿತ್ತು. ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕೌಟುಂಬಿಕ ಕಲಹ ಇರಬಹುದು ಎಂದು ಶಂಕಿಸಲಾಗಿದೆ. ಆರ್ಥಿಕ ಸಮಸ್ಯೆ ಕಾಡುತ್ತಿತ್ತೇ? ಯಾವುದೋ ವಿಚಾರಕ್ಕೆ ಸರೋಜ ಮನನೊಂದಿದ್ದರೇ? ಎಂಬ ಶಂಕೆಯೂ ಮೂಡಿದೆ. ಪೊಲೀಸರ ತನಿಖೆ ಬಳಿಕ ಬಯಲಾಗಲಿದೆ.

    ಮೈಸೂರಲ್ಲಿ 2ನೇ ಪತ್ನಿಯ ರುಂಡ-ಮುಂಡ ಕತ್ತರಿಸಿ ಭೀಕರ ಕೊಲೆ! ತಂದೆಯ ಕರಾಳ ಮುಖ ಬಿಚ್ಚಿಟ್ಟ 20 ವರ್ಷದ ಮಗಳು

    ಕೂಲಿ ಕೆಲಸಕ್ಕಾಗಿ ಆಂಧ್ರದಿಂದ ಚಿಕ್ಕಬಳ್ಳಾಪುರಕ್ಕೆ ಬಂದವ ಈಗ ಕೋಟ್ಯಧೀಶ! ತನಿಖೆಯಲ್ಲಿ ಬಯಲಾಯ್ತು ಸ್ಫೋಟಕ ರಹಸ್ಯ

    ಮದ್ವೆಯಾಗಿ ಇಬ್ಬರು ಮಕ್ಕಳಿದ್ರೂ 21 ವರ್ಷದ ಅರ್ಚಕನ ಜತೆ 35ರ ಮಹಿಳೆ ಪರಾರಿ! ಮಧ್ಯರಾತ್ರಿ ಕಾಡಲ್ಲಿ ಈಕೆ ಪಟ್ಟ ಪಾಡು ಅಷ್ಟಿಷ್ಟಲ್ಲ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts