ಕಲಬುರಗಿ: ಅಧಿವೇಶನದ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ದೆಹಲಿಗೆ ಹೋಗುವ ಪರಿಪಾಠವಿದೆ. ಹೀಗಾಗಿ ಸಿಎಂ ದೆಹಲಿಗೆ ಹೋಗುತ್ತಿದ್ದಾರೆ ಎಂದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಶಾಸಕರು ದೆಹಲಿಗೆ ಹೋದರೆ ತಪ್ಪೇನು ಎಂದು ಪ್ರಶ್ನಿಸಿದರು.
ಕಲಬುರಗಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ನಳೀನ್ ಕುಮಾರ್ ಕಟೀಲ್, ಮಂತ್ರಿ ಮಂಡಲದ ರಚನೆ ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟದ್ದು. ತಮ್ಮ ಕೆಲಸ ಕಾರ್ಯಗಳಿಗಾಗಿ ಅವರು ದೆಹಲಿಗೆ ಹೋಗಿ ಬರ್ತಾರೆ. ಸದ್ಯ ಬಿಜೆಪಿಯಲ್ಲಿ ಯಾವುದೇ ಗೊಂದಲ ಇಲ್ಲ. ರಾಜ್ಯದಲ್ಲಿ ಚುನಾವಣೆಗೆ ಇನ್ನೂ ಎರಡು ವರ್ಷವಿದೆ. ಈಗಲೇ ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಹುದ್ದೆಗೆ ಸ್ಪರ್ಧೆ ನಡೆದಿದೆ. ಸಿಎಂ ಹುದ್ದೆಗೆ ಮ್ಯೂಸಿಕಲ್ ಚೇರ್ ಆಟ ಜೋರಾಗಿ ನಡೆದಿದೆ ಎಂದು ಲೇವಡಿ ಮಾಡಿದರು.
ನಮ್ಮ ರಾಜ್ಯ ಕಂಡ ಮೋಸಗಾರ ಮತ್ತು ವಂಚಕ ಮುಖ್ಯಮಂತ್ರಿ ಅಂದ್ರೆ ಅದು ಸಿದ್ದರಾಮಯ್ಯ. ಮೊದಲು ಅಹಿಂದದ ಹೆಸರು ಹೇಳಿ ಸಿಎಂ ಆದ್ರು. ಸಿಎಂ ಆದ ನಂತರ ಅಹಿಂದ ಮರೆತು ಬಿಟ್ಟಿದ್ದರು ಎಂದು ಕಟೀಲ್ ಟೀಕಿಸಿದರು.
ಅರುಣಾಕುಮಾರಿಯ ಪ್ರೇಮ್ಕಹಾನಿ ಬಿಚ್ಚಿಟ್ಟ ನಟ ದರ್ಶನ್! 9 ವರ್ಷ ಚಿಕ್ಕವನೊಂದಿಗೆ ಲವ್ವಿಡವ್ವಿ ಶುರು ಮಾಡಿದ್ದಳಂತೆ…
ಪಿಎಸ್ಐ ಆಗಿರುವ ತಾಯಿ ವಿರುದ್ಧವೇ ಗದಗ ಎಸ್ಪಿಗೆ ದೂರು ಕೊಟ್ಟ ಯುವತಿ!
ಕಾರಿನಲ್ಲಿ ಕೂತು ನಟ ದರ್ಶನ್ ಮಹಿಳೆಗೆ ಕಿರುಕುಳಕೊಟ್ಟರು: ಇಂದ್ರಜಿತ್ ಲಂಕೇಶ್ ಗಂಭೀರ ಆರೋಪ