More

    ನಂದಿನಿ ಹಾಲಿನ ಪ್ಯಾಕೆಟ್ ಮೇಲೆ ಪುನೀತ್​ ಫೋಟೋ​! ಭಾವುಕರಾದ ಅಭಿಮಾನಿಗಳು

    ಬೆಂಗಳೂರು: ನಂದಿನಿ ಹಾಲಿನ ಪ್ಯಾಕೆಟ್ ಮೇಲೆ ನಟ ಪುನೀತ್​ ರಾಜ್​ಕುಮಾರ್​ ಅವರ ಭಾವಚಿತ್ರ ಇರುವ ಫೋಟೋ ವೈರಲ್​ ಆಗಿದೆ.

    ಹಲವು ಇಲಾಖೆಗಳ ರಾಯಭಾರಿಯಾಗಿದ್ದ ನಟ ಪುನೀತ್​ ರಾಜ್​ಕುಮಾರ್​ ಅವರು ನಂದಿನಿ ಉತ್ಪನ್ನಗಳ ಜಾಹೀರಾತಿಗೆ ಬಿಡಿಗಾಸನ್ನೂ ಪಡೆದಿರಲಿಲ್ಲ. ಉಚಿತವಾಗಿ ಜಾಹೀರಾತಿನಲ್ಲಿ ಕಾಣಿಸಿಕೊಂಡು ಕೆಎಂಎಫ್ ಉತ್ಪನ್ನಗಳಿಗೆ ಪ್ರಚಾರ ನೀಡಿ ಹಾಲು ಒಕ್ಕೂಟದ ರಾಯಭಾರಿಯಾಗಿ ರೈತಾಪಿ ಸಮೂಹದ ಮೆಚ್ಚುಗೆ ಗಳಿಸಿದ್ದರು.

    ಕೆಎಂಎಫ್​ ಉತ್ಪನ್ನದ ಜಾಹೀರಾತಿನಲ್ಲಿ ಕಾಣಿಸಿಕೊಳ್ಳುತ್ತಿದ್ದ ಅಪ್ಪು, ಹಣ ಪಡೆಯುತ್ತಿರಲಿಲ್ಲ. ಅಪ್ಪು ನಿಧನ ಸುದ್ದಿ ಇಡೀ ಕರುನಾಡಿಗೆ ದೊಡ್ಡ ಆಘಾತವನ್ನೇ ತಂದೊಡ್ಡಿತ್ತು. ಅಪ್ಪು ನಮ್ಮನ್ನಗಲಿ 2 ತಿಂಗಳು ಕಳೆದರೂ ಆ ನೋವು ಇನ್ನೂ ಹಸಿಯಾಗೆ ಇದೆ. ಅಪ್ಪು ಅವರ ಕೋಟ್ಯಂತರ ಅಭಿಮಾನಿಗಳು ನೆಚ್ಚಿನ ನಟನ ಹೆಸರಲ್ಲಿ ವಿಭಿನ್ನ ಕಾರ್ಯಕ್ರಮ ನಡೆಸುತ್ತಲೇ ಇದ್ದಾರೆ. ಇದೀಗ ಕೆಎಂಎಫ್​ ಹಾಲಿನ ಪ್ಯಾಕೆಟ್​ನಲ್ಲಿ ಅಪ್ಪು ಭಾವಚಿತ್ರ ಇರುವ ಫೋಟೋ ವೈರಲ್​ ಆಗಿದೆ. ಇದನ್ನು ಕಂಡ ನಾಡಿನ ಜನತೆ ಭಾವುಕರಾಗಿದ್ದಾರೆ. ಇನ್ನು ಕೆಎಂಎಫ್​ನಿಂದಲೇ ನಿಜಕ್ಕೂ ಹಾಲಿನ ಪ್ಯಾಕೆಟ್​ ಮೇಲೆ ಫೋಟೋ ಮುದ್ರಿಸಿದೆಯಾ ಎಂಬುದು ಸ್ಪಷ್ಟವಾಗಿಲ್ಲ.

    ಮನೆ ಅಂಗಳದಲ್ಲೇ ಅಪ್ಪು ಪುತ್ಥಳಿ ನಿರ್ಮಿಸಿಕೊಂಡ ಅಭಿಮಾನಿ! ಭಾವುಕರಾದ ಗ್ರಾಮಸ್ಥರು

    ಚೇಳು ಕಡಿತಕ್ಕೆ ಯುವಕ ಬಲಿ! ಬದುಕುವ ಚಾನ್ಸ್​ ಇದ್ದರೂ ಆ 3 ದಿನ ಆತ ಬಳಸಿಕೊಳ್ಳಲೇ ಇಲ್ಲ…

    ಮೊದಲ ರಾತ್ರಿ ಕನ್ಯತ್ವ ಪರೀಕ್ಷೆ ನಡೆಯುತ್ತಾ? ಕನ್ಯಾಪೊರೆ ಇರಲಿಲ್ಲ ಅಂದ್ರೆ ಏನರ್ಥ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts