ನಂದಿನಿ ಹಾಲಿನ ಪ್ಯಾಕೆಟ್ ಮೇಲೆ ಪುನೀತ್​ ಫೋಟೋ​! ಭಾವುಕರಾದ ಅಭಿಮಾನಿಗಳು

ಬೆಂಗಳೂರು: ನಂದಿನಿ ಹಾಲಿನ ಪ್ಯಾಕೆಟ್ ಮೇಲೆ ನಟ ಪುನೀತ್​ ರಾಜ್​ಕುಮಾರ್​ ಅವರ ಭಾವಚಿತ್ರ ಇರುವ ಫೋಟೋ ವೈರಲ್​ ಆಗಿದೆ. ಹಲವು ಇಲಾಖೆಗಳ ರಾಯಭಾರಿಯಾಗಿದ್ದ ನಟ ಪುನೀತ್​ ರಾಜ್​ಕುಮಾರ್​ ಅವರು ನಂದಿನಿ ಉತ್ಪನ್ನಗಳ ಜಾಹೀರಾತಿಗೆ ಬಿಡಿಗಾಸನ್ನೂ ಪಡೆದಿರಲಿಲ್ಲ. ಉಚಿತವಾಗಿ ಜಾಹೀರಾತಿನಲ್ಲಿ ಕಾಣಿಸಿಕೊಂಡು ಕೆಎಂಎಫ್ ಉತ್ಪನ್ನಗಳಿಗೆ ಪ್ರಚಾರ ನೀಡಿ ಹಾಲು ಒಕ್ಕೂಟದ ರಾಯಭಾರಿಯಾಗಿ ರೈತಾಪಿ ಸಮೂಹದ ಮೆಚ್ಚುಗೆ ಗಳಿಸಿದ್ದರು. ಕೆಎಂಎಫ್​ ಉತ್ಪನ್ನದ ಜಾಹೀರಾತಿನಲ್ಲಿ ಕಾಣಿಸಿಕೊಳ್ಳುತ್ತಿದ್ದ ಅಪ್ಪು, ಹಣ ಪಡೆಯುತ್ತಿರಲಿಲ್ಲ. ಅಪ್ಪು ನಿಧನ ಸುದ್ದಿ ಇಡೀ ಕರುನಾಡಿಗೆ ದೊಡ್ಡ ಆಘಾತವನ್ನೇ ತಂದೊಡ್ಡಿತ್ತು. … Continue reading ನಂದಿನಿ ಹಾಲಿನ ಪ್ಯಾಕೆಟ್ ಮೇಲೆ ಪುನೀತ್​ ಫೋಟೋ​! ಭಾವುಕರಾದ ಅಭಿಮಾನಿಗಳು