ಬೆಂಗಳೂರು: ನಂದಿನಿ ಹಾಲಿನ ಪ್ಯಾಕೆಟ್ ಮೇಲೆ ನಟ ಪುನೀತ್ ರಾಜ್ಕುಮಾರ್ ಅವರ ಭಾವಚಿತ್ರ ಮುದ್ರಿಸಿದ್ದರ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಈ ಕುರಿತು ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿರುವ ಕೆಎಂಎಫ್ ಅಧಿಕಾರಿಗಳು, ಅಪ್ಪು ಫೋಟೋ ಇರುವ ನಂದಿನಿ ಹಾಲಿನ ಪ್ಯಾಕೆಟ್ಗಳ ಬಗ್ಗೆ ಗೊತ್ತಿಲ್ಲ. ಹಾಲಿನ ಪ್ಯಾಕೆಟ್ ಮೇಳೆ ಪುನೀತ್ ರಾಜ್ಕುಮಾರ್ ಅವರ ಭಾವಚಿತ್ರ ಮುದ್ರಿಸುವ ನಿರ್ಧಾರವನ್ನ ನಾವು ತೆಗೆದುಕೊಂಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಹಲವು ಇಲಾಖೆಗಳ ರಾಯಭಾರಿಯಾಗಿದ್ದ ನಟ ಪುನೀತ್ ರಾಜ್ಕುಮಾರ್ ಅವರು ನಂದಿನಿ ಉತ್ಪನ್ನಗಳ ಜಾಹೀರಾತಿಗೆ ಬಿಡಿಗಾಸನ್ನೂ ಪಡೆದಿರಲಿಲ್ಲ. ಉಚಿತವಾಗಿ ಜಾಹೀರಾತಿನಲ್ಲಿ ಕಾಣಿಸಿಕೊಂಡು ಕೆಎಂಎಫ್ ಉತ್ಪನ್ನಗಳಿಗೆ ಪ್ರಚಾರ ನೀಡಿ ಹಾಲು ಒಕ್ಕೂಟದ ರಾಯಭಾರಿಯಾಗಿ ರೈತಾಪಿ ಸಮೂಹದ ಮೆಚ್ಚುಗೆ ಗಳಿಸಿದ್ದರು. ಕೆಎಂಎಫ್ ಉತ್ಪನ್ನದ ಜಾಹೀರಾತಿನಲ್ಲಿ ಕಾಣಿಸಿಕೊಳ್ಳುತ್ತಿದ್ದ ಅಪ್ಪು, ಹಣ ಪಡೆಯುತ್ತಿರಲಿಲ್ಲ.
ಅಪ್ಪು ಅಭಿಮಾನಿಗಳು ತಮ್ಮ ಮಕ್ಕಳಿಗೆ ಅಪ್ಪು ಎಂದು ಹೆಸರಿಟ್ಟು ಅಭಿಮಾನ ಮೆರೆಯುತ್ತಿದ್ದಾರೆ. ಹಲವರು ಅಪ್ಪು ಭಾವಚಿತ್ರವನ್ನ ದೇವರ ಮನೆಯಲ್ಲಿಟ್ಟು ಪೂಜಿಸುತ್ತಿದ್ದಾರೆ. ಕೆಲವರು ಪುತ್ಥಳಿಯನ್ನು ಮನೆ ಆವರಣದಲ್ಲೇ ನಿರ್ಮಿಸಿ ನಮಿಸುತ್ತಿದ್ದಾರೆ. ಹೀಗೆ ಕೋಟ್ಯಂತರ ಅಭಿಮಾನಿಗಳು ತಮ್ಮದೇ ಆದ ರೀತಿಯಲ್ಲಿ ಅಪ್ಪುಗಾಗಿ ಮಿಡಿಯುತ್ತಲೇ ಇದ್ದಾರೆ. ಈ ನಡುವೆ ಅಪ್ಪು ಭಾವಚಿತ್ರವುಳ್ಳ ನಂದಿನಿ ಹಾಲಿನ ಪ್ಯಾಕೆಟ್ನ ಫೋಟೋವೊಂದು ವೈರಲ್ ಆಗಿತ್ತು. ಕೆಎಂಎಫ್ನಿಂದಲೇ ಈ ಫೋಟೋವನ್ನು ಮುದ್ರಿಸಲಾಗಿದೆ ಎಂದು ಭಾವುಕರಾದ ಅಭಿಮಾನಿಗಳು ಕೆಎಂಎಫ್ ಪರ ಮೆಚ್ಚುಗೆ ವ್ಯಕ್ತಪಡಿಸಿದ್ದರು.
ಮೊದಲ ರಾತ್ರಿ ಕನ್ಯತ್ವ ಪರೀಕ್ಷೆ ನಡೆಯುತ್ತಾ? ಕನ್ಯಾಪೊರೆ ಇರಲಿಲ್ಲ ಅಂದ್ರೆ ಏನರ್ಥ?
ಹೊಸ ವರ್ಷದ ಪಾರ್ಟಿಗೆ 2 ಮೇಕೆ ಕದ್ದ ಎಎಸ್ಐ! ಮಾಲೀಕನ ಕಣ್ಣೀರಿಗೂ ಕರಗದೆ, ಬಾಡೂಟ ತಿಂದು ತೇಗಿದ್ರು