More

    ನಂಜನಗೂಡಲ್ಲಿ ಜಮೀನಿಗೆ ಹೋಗಿದ್ದ ತಾಯಿ-ಮಗಳು ಶವವಾಗಿ ಪತ್ತೆ: ಅಂತ್ಯಕ್ರಿಯೆ ಬಳಿಕ ಪ್ರಕರಣಕ್ಕೆ ಸ್ಫೋಟಕ ತಿರುವು

    ಮೈಸೂರು: ನಂಜನಗೂಡು ತಾಲೂಕು ಬಿಳುಗಲಿ ಗ್ರಾಮದಲ್ಲಿ ಜಮೀನಿಗೆ ಹೋಗಿದ್ದ ತಾಯಿ-ಮಗಳು ಶವವಾಗಿ ಪತ್ತೆಯಾಗಿದ್ದು, ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದೆ.

    ಅಮ್ಮ-ಮಗಳ ಕಾಲುಗಳನ್ನ ಸೀರೆಯಿಂದ ಕಟ್ಟಿ ಹಾಕಿದ ಸ್ಥಿತಿಯಲ್ಲಿ ಮೃತದೇಹಗಳು ನೀರಿನ ಹಳ್ಳದ ಬಳಿ ಪತ್ತೆಯಾಗಿದ್ದು, ಕೊಲೆ ಶಂಕೆ ಮೂಡಿದೆ. ಪುಟ್ಟರಂಗಮ್ಮ(52) ಮತ್ತು ಇವರ ಮಗಳು ಮಣಿ(32) ಮೃತ ದುರ್ದೈವಿಗಳು.

    ಜೂ.14ರಂದು ಮನೆಯಲ್ಲಿ ಜಮೀನಿಗೆ ಹೋಗಿ ಬರುವುದಾಗಿ ಹೇಳಿ ಹೋಗಿದ್ದ ಅಮ್ಮ-ಮಗಳು ಇಬ್ಬರೂ ವಾಪಸ್​ ಮನೆಗೆ ಬಂದಿರಲಿಲ್ಲ. ಕುಟುಂಬಸ್ಥರು ಎಲ್ಲೆಡೆ ಹುಡುಕಾಡಿದ್ದರೂ ಪತ್ತೆಯಾಗಿರಲಿಲ್ಲ. ಜೂ.19ರಂದು ನೀರಿನ ಹಳ್ಳದಲ್ಲಿ ಶವವಾಗಿ ಪತ್ತೆಯಾಗಿದ್ದರು. ಅಮ್ಮ-ಮಗಳ ಕಾಲುಗಳನ್ನ ಸೀರೆಯಿಂದ ಕಟ್ಟಿದ ಸ್ಥಿತಿಯಲ್ಲಿ ಮೃತದೇಹಗಳು ಇದ್ದವು. ಅಂತ್ಯಸಂಸ್ಕಾರವೂ ನಡೆದಿದೆ. ಇದೀಗ ಈ ಸಾವು ಆತ್ಮಹತ್ಯೆಯಲ್ಲ, ಕೊಲೆ ಎಂಬ ಶಂಕೆ ಮೂಡಿದ್ದು, ಬಿಳಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿಳುಗಲಿ ಗ್ರಾಮದ ಯೋಗೇಶ್ ಹಾಗೂ ರಂಗಸ್ವಾಮಿ ವಿರುದ್ಧ ಕೊಲೆ ಆರೋಪ ಕೇಳಿಬಂದಿದ್ದು, ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts