ವಯನಾಡಿನಲ್ಲಿ ಮತ್ತೆ ನಕ್ಸಲ್ ಹೆಜ್ಜೆ: ಕರಪತ್ರ ಹಂಚಿ ಸಿಎಂಗೆ ಸವಾಲು ಹಾಕಿದ ನಕ್ಸಲ್​ ಪಡೆ

ವಯನಾಡ್: ವಯನಾಡಿನಲ್ಲಿ ಮತ್ತೆ ನಕ್ಸಲರು ಕಾಣಿಸಿಕೊಂಡಿದ್ದು, ಕರಪತ್ರ ಹಂಚಿ ಕೇರಳ ಮುಖ್ಯಮಂತ್ರಿಗೆ ಸವಾಲು ಹಾಕಿದ್ದಾರೆ. ಭಾನುವಾರ ರಾತ್ರಿ 8ರ ಸುಮಾರಿಗೆ ಇಬ್ಬರು ಮಹಿಳೆಯರು ಮತ್ತು ಇಬ್ಬರು ಪುರುಷರಿದ್ದ ಸಶಸ್ತ್ರ ನಕ್ಸಲ್ ಗುಂಪೊಂದು ಕಾಲನಿಗೆ ಭೇಟಿ ನೀಡಿರುವುದಾಗಿ ತೊಂಡರ್ನಾಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಪೆರಿಂಚೆರ್ಮಲ ಬುಡಕಟ್ಟು ಕಾಲನಿಯ ನಿವಾಸಿಗಳು ತಿಳಿಸಿದ್ದಾರೆ. ನಕ್ಸಲ್ ತಂಡ ಕಾಲನಿಯ 2 ಮನೆಗಳಿಗೆ ನುಗ್ಗಿ ಘೋಷಣೆ ಕೂಗುತ್ತಾ ಕರಪತ್ರ ಕೊಟ್ಟರು. ಬಳಿಕ ಈ ಪ್ರದೇಶದಲ್ಲಿ ಪೋಸ್ಟರ್‌ಗಳನ್ನು ಅಂಟಿಸಿದ ಗುಂಪು ಅರಣ್ಯದತ್ತ ಹೋಯಿತು ಎಂದು ತಿಳಿದುಬಂದಿದೆ. … Continue reading ವಯನಾಡಿನಲ್ಲಿ ಮತ್ತೆ ನಕ್ಸಲ್ ಹೆಜ್ಜೆ: ಕರಪತ್ರ ಹಂಚಿ ಸಿಎಂಗೆ ಸವಾಲು ಹಾಕಿದ ನಕ್ಸಲ್​ ಪಡೆ