ಹೈದ್ರಾಬಾದ್: ಆಂಧ್ರಪ್ರದೇಶದ ಮಾಜಿ ಸಿಎಂ, ಮೇರು ನಟ ದಿ. ಎನ್.ಟಿ.ರಾಮರಾವ್ ಅವರ ಪುತ್ರಿ ಉಮಾಮಹೇಶ್ವರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಉಮಾಮಹೇಶ್ವರಿ ಅವರು ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಜುಬಿಲಿ ಹಿಲ್ಸ್ ನಿವಾಸದಲ್ಲೇ ಸೋಮವಾರ ನೇಣುಬಿಗಿದ ಸ್ಥಿತಿಯಲ್ಲಿ ಉಮಾಮಹೇಶ್ವರಿ ಅವರ ಮೃತದೇಹ ಪತ್ತೆಯಾಗಿದ್ದು, ಮರೋಣತ್ತರ ಪರೀಕ್ಷೆಗಾಗಿ ಉಸ್ಮನಿಯಾ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಸರ್ಕಲ್ ಇನ್ಸ್ಪೆಕ್ಟರ್ ರಾಜಶೇಖರ್ ರೆಡ್ಡಿ ತಿಳಿಸಿದ್ದಾರೆ.
ತೆಲುಗು ದೇಶಂ ಪಕ್ಷದ (ಟಿಡಿಪಿ) ಸಂಸ್ಥಾಪಕ ಎನ್ಟಿಆರ್ ಅವರಿಗೆ 12 ಮಕ್ಕಳು. ಅದರಲ್ಲಿ ಐವರು ಹೆಣ್ಣುಮಕ್ಕಳು. ಉಮಾ ಕಿರಿಯ ಮಗಳು. ಇವರಿಗೆ 54 ವರ್ಷ ವಯಸ್ಸಾಗಿತ್ತು. ಇವರ ಸಾವಿನ ಸುದ್ದಿ ಕೇಳಿ ಕುಟುಂಬಸ್ಥರು ಆಸ್ಪತ್ರೆಗೆ ದೌಡಾಯಿಸಿದ್ದಾರೆ.
ಭೀಕರ ಅಪಘಾತ: ಸ್ಥಳದಲ್ಲೇ ನಾಲ್ವರ ಸಾವು, ಮೂವರ ಸ್ಥಿತಿ ಗಂಭೀರ… ಜೋಗ ಜಲಪಾತಕ್ಕೆ ಬರುತ್ತಿದ್ದವರು ದುರ್ಮರಣ
ಚಕ್ರವರ್ತಿ ಸೂಲಿಬೆಲೆ ವಿರುದ್ಧ ಅಪ್ಪು ಫ್ಯಾನ್ಸ್ ಗರಂ: ಅಭಿಮಾನಿಗಳಿಗೆ ನೋವಾಗಿದ್ದರೆ ಕ್ಷಮೆಯಾಚಿಸುವೆ…
ನಟ ಚಂದನ್ ಮೇಲೆ ತೆಲುಗು ಧಾರಾವಾಹಿ ಚಿತ್ರೀಕರಣ ಸ್ಥಳದಲ್ಲಿ ಹಲ್ಲೆ! ವಿಡಿಯೋ ವೈರಲ್
ಸಿದ್ದರಾಮೋತ್ಸವ ಹಿನ್ನೆಲೆ ಲಾಡ್ಜ್, ಹೋಟೆಲ್, ರೆಸ್ಟೋರೆಂಟ್ಗಳು ಹೌಸ್ಫುಲ್! ಕೋಟ್ಯಂತರ ರೂಪಾಯಿ ವಹಿವಾಟು…