ಕೊಪ್ಪಳ: ಹಸು ಹಿಡಿದುಕೊಂಡು ಜಮೀನಿಗೆ ಹೋಗುತ್ತಿದ್ದ ರೈತರಿಬ್ಬರ ಹಿಂಬದಿಯಿಂದ ಓಮ್ನಿ ಕಾರು ಡಿಕ್ಕಿ ಹೊಡೆದ ಪರಿಣಾಮ ರೈತರಿಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಸು ಕೂಡ ದುರಂತ ಅಂತ್ಯ ಕಂಡಿದೆ.
ಇಂತಹ ದುರ್ಘಟನೆ ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕು ಗುನ್ನಾಳ ಗ್ರಾಮದ ಬಳಿ ಬುಧವಾರ ಬೆಳಗ್ಗೆ ಸಂಭವಿಸಿದೆ. ಗುನ್ನಾಳ ಗ್ರಾಮದ ರೈತರಾದ ಹೊಳೆಯಪ್ಪ(48) ಮತ್ತು ರಾಮಣ್ಣ (42) ಮೃತರು. ಇವರಿಗೆ ಸೇರಿದ ಹಸು ಕೂಡ ಅಪಘಾತದಲ್ಲಿ ಮೃತಪಟ್ಟಿದೆ. ಶೇಂಗಾ ಕೀಳಲು ಜಮೀನಿಗೆ ಇವರಿಬ್ಬರೂ ಹೋಗುತ್ತಿದ್ದರು. ವೇಳೆ ವೇಗವಾಗಿ ಬಂದ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡ ರೈತರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಅಪಘಾತದ ಭೀಕರತೆ ಕಂಡ ಸ್ಥಳೀಯರು ಬೆಚ್ಚಿಬಿದ್ದಾರೆ. ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಅಪಘಾತದ ನಂತರ ಕಾರನ್ನೇ ಸ್ಥಳದಲ್ಲೇ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಬೇವೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಮಕೂರಲ್ಲಿ ಟಿ.ಬಿ. ಜಯಚಂದ್ರ ಪ್ರಯಾಣಿಸುತ್ತಿದ್ದ ಕಾರು ಅಪಘಾತ: ಬೆಂಗಳೂರು ಆಸ್ಪತ್ರೆಗೆ ಮಾಜಿ ಸಚಿವ ದಾಖಲು
ಕೆಜಿಎಫ್-2 ಸಿನಿಮಾ ನೋಡುವಾಗ ಥಿಯೇಟರ್ನಲ್ಲೇ ಗುಂಡಿನ ದಾಳಿ: ಯುವಕನ ಸ್ಥಿತಿ ಗಂಭೀರ, ಟಾಕೀಸ್ ಬಂದ್
ಯುವ ಟೆನಿಸ್ ಆಟಗಾರ ಅಪಘಾತದಲ್ಲಿ ಸಾವು: ರಾಷ್ಟ್ರೀಯ ಟೂರ್ನಿಯಲ್ಲಿ ಪಾಲ್ಗೊಳ್ಳಲು ಹೋಗುವಾಗ ದುರಂತ