ಬೆಳಗಾವಿ: ಮನೆಯಲ್ಲಿ ಪುಟ್ಟ-ಪುಟ್ಟ ಹೆಜ್ಜೆಯನ್ನಿಡುತ್ತಾ ಆಟವಾಡಿಕೊಂಡಿದ್ದ ಹಾಲುಗಲ್ಲದ ಕಂದಮ್ಮ ಚರಂಡಿ ನೀರಿಗೆ ಬಿದ್ದು ಪ್ರಾಣಬಿಟ್ಟಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.
ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಲೊಳಸೂರ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಈ ದುರ್ಘಟನೆ ಸಂಭವಿಸಿದೆ. ಒಂದು ವರ್ಷದ ಸಾಧಿಕಾ ಸದ್ದಾಮ್ ತಹಶೀಲ್ದಾರ್ ಮೃತ ಮಗು. ಚರಂಡಿ ನೀರು ಮುಂದೆ ಹೋಗಲು ದಾರಿ ಇಲ್ಲದ ಕಾರಣ ಮನೆ ಮುಂದೆ ನಿಂತಿತ್ತು. ನಿನ್ನೆ ರಾತ್ರಿ ಮನೆ ಮುಂದೆ ಆಟವಾಡಿಕೊಂಡಿದ್ದ ಸಾಧಿಕಾ ಆಯತಪ್ಪಿ ಚರಂಡಿ ನೀರಲ್ಲಿ ಬಿದ್ದು ಪ್ರಾಣಬಿಟ್ಟಿದ್ದಾಳೆ. ಘಟಪ್ರಭಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಾನಂತೂ ಓದಿಲ್ಲ, ನೀನಾದ್ರೂ ಓದು ಎಂದು ಪತ್ನಿಯನ್ನ ಕೆಎಎಸ್ ಅಧಿಕಾರಿ ಮಾಡಿಸಿದ್ದವ ಕರೊನಾಗೆ ಬಲಿ!
ಲೈಂಗಿಕ ಕ್ರಿಯೆಗೆ ಸಹಕರಿಸದ ಪತ್ನಿಯ ಹತ್ಯೆ! ‘ಕಾಮ’ದಾಹ ತೀರದ ಸಿಟ್ಟಿಗೆ ಮೂರು ಮಕ್ಕಳನ್ನ ನಾಲೆಗೆ ಎಸೆದ
ಹೆರಿಗೆ ವೇಳೆ ದಾದಿಯ ಕೈಜಾರಿ ಬಿದ್ದು ನವಜಾತ ಶಿಶು ಸಾವು? ಆಸ್ಪತ್ರೆ ಬಳಿ ಮುಗಿಲುಮುಟ್ಟಿದ ಪಾಲಕರ ಆಕ್ರಂದನ