ಬೆಂಗಳೂರು: ಚಾಮರಾಜನಗರ ಜಿಲ್ಲಾಸ್ಪತ್ರೆಯ ಕೋವಿಡ್ ವಾರ್ಡ್​ನಲ್ಲಿ ಭಾನುವಾರ ತಡರಾತ್ರಿ 20ಕ್ಕೂ ಹೆಚ್ಚು ಕರೊನಾ ಸೋಂಕಿತರು ಮೃತಪಟ್ಟಿದ್ದು, ಆಕ್ಸಿಜನ್​ ಕೊರತೆಯಿಂದಲೇ ಈ ದುರಂತ ಸಂಭವಿಸಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಘಟನೆಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಸಿಎಂ ಯಡಿಯೂರಪ್ಪ, ಅಲ್ಲಿನ ವಾಸ್ತವ ಏನೆಂದು ವರದಿ ಸಲ್ಲಿಸುವಂತೆ ಆರೋಗ್ಯ ಮತ್ತು ವೈದ್ಯಕೀಯ ಸಚಿವ ಡಾ.ಕೆ. ಸುಧಾಕರ್​ಗೆ ಸೂಚಿಸಿದ್ದಾರೆ. ಸಿಎಂ ಸೂಚನೆ ಮೇರೆಗೆ ಚಾಮರಾಜನಗರ, ಮೈಸೂರು ಮತ್ತು ಮಂಡ್ಯದತ್ತ ಸುಧಾಕರ್​ ಪ್ರಯಾಣ ಬೆಳೆಸಿದ್ದಾರೆ.

ಸಿಎಂ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸುಧಾಕರ್, ಚಾಮರಾಜನಗರ ಘಟನೆ ನೋವಿನ ಸಂಗತಿ. ಅತ್ಯಂತ ದುರದೃಷ್ಟಕರ ವಿಚಾರ. ಕೂಡಲೇ ಚಾಮರಾಜನಗರ, ಮೈಸೂರು, ಮಂಡ್ಯಕ್ಕೆ ತರಳುತ್ತೇನೆ. ಸಾವನ್ನಪ್ಪಲು ಏನು ಕಾರಣ? ನಿಜವಾಗಿಯೂ ಆಕ್ಸಿಜನ್ ಕೊರತೆ ಇತ್ತೇ ಎಂಬುದನ್ನ ಪರಿಶೀಲಿಸುತ್ತೇನೆ. ಈ ಘಟನೆ ಬಗ್ಗೆ ಹಠಾತ್ತಾಗಿ ಹೇಳುವ ಬದಲು ಸ್ಪಷ್ಟ ಮಾಹಿತಿ ಪಡೆದು ಮಾತನಾಡುತ್ತೇನೆ ಎಂದರು. ಇದನ್ನೂ ಓದಿರಿ ನನ್ನ ಕಣ್ಮುಂದೆಯೇ ಹಲವರು ಪ್ರಾಣಬಿಟ್ಟರು, ನನಗೂ ಭಯವಾಗ್ತಿದೆ… ಎಂದು ಕರೆ ಮಾಡಿದ್ದ ನವವಿವಾಹಿತ 2 ತಾಸಲ್ಲೇ ಪ್ರಾಣಬಿಟ್ಟ

ನನ್ನ ಕಣ್ಮುಂದೆಯೇ ಹಲವರು ಪ್ರಾಣಬಿಟ್ಟರು, ನನಗೂ ಭಯವಾಗ್ತಿದೆ… ಎಂದು ಕರೆ ಮಾಡಿದ್ದ ನವವಿವಾಹಿತ 2 ತಾಸಲ್ಲೇ ಪ್ರಾಣಬಿಟ್ಟ

ನಿನ್ನೆ ಹಸೆಮಣೆಗೇರಿದ್ದ ಮದುಮಗ ಇಂದು ಕರೊನಾಗೆ ಬಲಿ! ಮನಕಲಕುತ್ತೆ ಈ ಘಟನೆ

ಆಸ್ಪತ್ರೆ ಒಳಗೂ ಹೆಣಗಳ ರಾಶಿ, ಹೊರಗೂ ಹೆಣ… ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸುತ್ತೆ ಚಾಮರಾಜನಗರದ ಘಟನೆ