ಮೈಸೂರು: ಬೈಕ್ನಲ್ಲಿ ಹೋಗುತ್ತಿದ್ದ ವ್ಯಕ್ತಿಯ ಮೊಬೈಲ್ ಸ್ಫೋಟಗೊಂಡು, ಆತ ಗಂಭೀರವಾಗಿ ಗಾಯಗೊಂಡ ಘಟನೆ ನಂಜನಗೂಡಿನ ಕರಿಹುಂಡಿ ಗ್ರಾಮದಲ್ಲಿ ನಡೆದಿದೆ.
ಎಚ್.ಎಂ.ಬಸವರಾಜು(47) ಗಾಯಗೊಂಡವರು. ಇವರು ಬೈಕ್ನಲ್ಲಿ ಹೋಗುತ್ತಿದ್ದಾಗ ಕೈಯಲ್ಲಿ ಮೊಬೈಲ್ ಹಿಡಿದುಕೊಂಡಿದ್ದರು. ಆದರೆ ಅದು ಏಕಾಏಕಿ ಸ್ಫೋಟಗೊಂಡಿದೆ. ಇದರಿಂದ ಬೈಕ್ ಆಯತಪ್ಪಿ ಬಿದ್ದ ಬಸವರಾಜ್ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇದು ವಿವೋ ಕಂಪನಿಗೆ ಸೇರಿದ ಮೊಬೈಲ್ ಎನ್ನಲಾಗಿದೆ.
ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.