More

    ನಮ್ಮ ಮೆಟ್ರೋ ಒಳಗೆ ಭಿಕ್ಷೆ ಬೇಡುತ್ತಿದ್ದವನಿಗೆ ಬಿತ್ತು ದಂಡ

    ಬೆಂಗಳೂರು: ನಮ್ಮ ಮೆಟ್ರೋ ರೈಲಿನ ಒಳಗಡೆ ಭಿಕ್ಷೆ ಬೇಡುತ್ತಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದ ಬೆಂಗಳೂರು ಮೆಟ್ರೋ ನಿಗಮ ನಿಯಮಿತದ ಅಧಿಕಾರಿಗಳು ಆತನ ಮೇಲೆ ಪ್ರಕರಣ ದಾಖಲಿಸಿ ದಂಡ ವಸೂಲಿ ಮಾಡಿದ್ದಾರೆ.

    ಕೊಪ್ಪಳ ಮೂಲದ ಮಲ್ಲಿಕಾರ್ಜುನ್‌ (20) ಎಂಬಾತ ದಂಡ ತೆತ್ತಿದ್ದಾನೆ. ಬಿಎಂಆರ್‌ಸಿಎಲ್‌ ಈತನ ವಿರುದ್ಧ ಮೆಟ್ರೋ ಕಾಯ್ದೆ ಸೆಕ್ಷನ್‌ 59ರ ಅಡಿ ಪ್ರಯಾಣಿಕರಿಗೆ ತೊಂದರೆ ನೀಡಿದ ಪ್ರಕರಣ ದಾಖಲಿಸಿಕೊಂಡಿದೆ.

    ಯಶವಂತಪುರ ಮೆಟ್ರೋ ನಿಲ್ದಾಣದಲ್ಲಿ 150 ಕೊಟ್ಟು ಒಂದು ದಿನದ ಕಾರ್ಡ್‌ ತೆಗೆದುಕೊಂಡ ಈತ 50 ರಿಚಾರ್ಜ್‌ ಮಾಡಿಸಿಕೊಂಡಿದ್ದಾನೆ. ಬಳಿಕ ರೈಲನ್ನೇರಿ ಕನ್ನಡ ಹಾಗೂ ಇಂಗ್ಲೀಷ್‌ನಲ್ಲಿ ‘ನಾನು ಮೂಗ ಹಾಗೂ ಕಿವುಡ, ಸಹಾಯ ಮಾಡಿ’ ಎಂದು ಬರೆದಿದ್ದ ಚೀಟಿಗಳನ್ನು ಕೊಟ್ಟು ಭಿಕ್ಷೆ ಬೇಡಿದ್ದಾನೆ. ಇದನ್ನು ಗಮನಿಸಿದ ಪ್ರಯಾಣಿಕರೊಬ್ಬರು ಮೆಟ್ರೋ ಭದ್ರತಾ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.

    ನಮ್ಮ ಮೆಟ್ರೋ ಒಳಗಡೆ ವ್ಯಕ್ತಿಯೊಬ್ಬ ಕಿವುಡ ಮೂಖ ಎಂದು ಚೀಟಿ ತೋರಿಸಿ ಭಿಕ್ಷೆ ಬೇಡುತ್ತಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದ ಬೆಂಗಳೂರು ಮೆಟ್ರೋ ನಿಗಮ ನಿಯಮಿತದ ಅಧಿಕಾರಿಗಳು ಆತನ ಮೇಲೆ ಪ್ರಕರಣ ದಾಖಲಿಸಿ 500 ರೂ. ದಂಡ ವಸೂಲಿ ಮಾಡಿದ್ದಾರೆ. ಮೆಟ್ರೋ ಒಳಗಡೆ ಭಿಕ್ಷೆ ಬೇಡುತ್ತಿದ್ದ ವ್ಯಕ್ತಿಯಿಂದ ದಂಡ ವಸೂಲಿ ಮಾಡಿರುವ ಮೊದಲ ಪ್ರಕರಣ ಇದಾಗಿದೆ. ಬಿಎಂಆರ್‌ಸಿಎಲ್‌ ಸಿಬ್ಬಂದಿ ಮಲ್ಲಿಕಾರ್ಜುನ್‌ನನ್ನು ತಾವೇ ಮಲ್ಲೇಶ್ವರ ಕೆ.ಸಿ.ಜನರಲ್‌ ಆಸ್ಪತ್ರೆಗೆ ಕರೆದೊಯ್ದು ತಪಾಸಣೆ ಮಾಡಿಸಿದ್ದಾರೆ. ಈ ವೇಳೆ ಆತ ಕಿವುಡ, ಮೂಗನಾಗಿರುವುದು ದೃಢಪಟ್ಟಿದೆ.

    ಬೆಂಗಳೂರು ಕಂಬಳ; ಟ್ರಾಫಿಕ್ ಪೊಲೀಸರಿಂದ ಪಾರ್ಕಿಂಗ್, ಎಂಟ್ರಿ–ಎಕ್ಸಿಟ್ ಮಾರ್ಗಸೂಚಿ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts